7:13 PM Saturday4 - April 2026
ಬ್ರೇಕಿಂಗ್ ನ್ಯೂಸ್
Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ

ಇತ್ತೀಚಿನ ಸುದ್ದಿ

ಮನೆ ಬಿಟ್ಟು ಬಂದ ಕೋಲಾರದ ಯುವತಿಯ ಮೇಲೆ ಅತ್ಯಾಚಾರ: ವೇಶ್ಯಾವಾಟಿಕೆ ಮಾರಲು ಯತ್ನ: ಆರೋಪಿ ಬಂಧನ

12/02/2022, 18:15

ಬೆಂಗಳೂರು(reporterkarnataka.com): ಮನೆ ಬಿಟ್ಟು ಬಂದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಆಕೆಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ನಡೆಸಿ, ನಂತರ ವೇಶ್ಯಾವಾಟಿಕೆ ಮಾರಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಮನೆಯವರೊಂದಿಗೆ ಜಗಳ ಮಾಡಿಕೊಂಡು ಕೋಲಾರದಿಂದ ಯುವತಿ ಬೆಂಗಳೂರಿಗೆ ಬಂದಿದ್ದಳು. ಮೆಜೆಸ್ಟಿಕ್ ಗೆ ತಲುಪಿದ ಯುವತಿ ಕಂಗಾಲಾಗಿ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕೂತಿದ್ದಳು. ಈಕೆಯನ್ನು ಗಮನಿಸಿದ್ದ ಟ್ರಾವೆಲ್ ಏಜೆನ್ಸಿಯಲ್ಲಿ ಕೆಲಸ ಮಾಡುವ ನಾಗೇಶ್ ಎಂಬಾತ ಆಕೆಗೆ ಸಹಾಯ ಮಾಡುವುದಾಗಿ ನಂಬಿಸಿದ್ದಾನೆ.

ಯುವತಿ ಆತನ ಮಾತು ನಂಬಿ ದೇವನಹಳ್ಳಿಯ ಆತನ ಮನೆಗೆ ಹೋಗಿದ್ದಳು. ಈ ವೇಳೆ ಅಲ್ಲಿ ಆಕೆಯ ಮೇಲೆ ಆರೋಪಿ ಅತ್ಯಾಚಾರ ನಡೆಸಿದ್ದಾನೆ. ಬಳಿಕ ಆಕೆಯನ್ನು ಹೆದರಿಸಿ, 10 ಸಾವಿರ ರೂಪಾಯಿಗಳಿಗೆ ವೇಶ್ಯಾವಾಟಿಕೆ ಜಾಲದೊಂದಿಗೆ ಡೀಲ್ ಕುದುರಿಸಿಕೊಂಡ ಆರೋಪಿ, ಆಕೆಯನ್ನು ಮಾರುವ ಉದ್ದೆಶದಿಂದ ದೆಹಲಿಗೆ ಕರೆದೊಯ್ಯಲು ವಿಮಾನ ನಿಲ್ದಾಣಕ್ಕೆ ಬಂದಿದ್ದಾನೆ.

ಇವರಿಬ್ಬರನ್ನು ನೋಡಿ ಅನುಮಾನಗೊಂಡ ವಿಮಾನ ನಿಲ್ದಾಣ ಪೊಲೀಸರು ವಿಚಾರಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಆರೋಪಿ ಈ ಹಿಂದೆಯೂ ಯುವತಿಯರನ್ನು ದೆಹಲಿಯಲ್ಲಿ ಮಾರಾಟ ಮಾಡಿರುವುದು ವಿಚಾರಣೆಯಲ್ಲಿ ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು