4:28 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಮನೆ ಬಿಟ್ಟು ಬಂದ ಕೋಲಾರದ ಯುವತಿಯ ಮೇಲೆ ಅತ್ಯಾಚಾರ: ವೇಶ್ಯಾವಾಟಿಕೆ ಮಾರಲು ಯತ್ನ: ಆರೋಪಿ ಬಂಧನ

12/02/2022, 18:15

ಬೆಂಗಳೂರು(reporterkarnataka.com): ಮನೆ ಬಿಟ್ಟು ಬಂದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಆಕೆಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ನಡೆಸಿ, ನಂತರ ವೇಶ್ಯಾವಾಟಿಕೆ ಮಾರಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಮನೆಯವರೊಂದಿಗೆ ಜಗಳ ಮಾಡಿಕೊಂಡು ಕೋಲಾರದಿಂದ ಯುವತಿ ಬೆಂಗಳೂರಿಗೆ ಬಂದಿದ್ದಳು. ಮೆಜೆಸ್ಟಿಕ್ ಗೆ ತಲುಪಿದ ಯುವತಿ ಕಂಗಾಲಾಗಿ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕೂತಿದ್ದಳು. ಈಕೆಯನ್ನು ಗಮನಿಸಿದ್ದ ಟ್ರಾವೆಲ್ ಏಜೆನ್ಸಿಯಲ್ಲಿ ಕೆಲಸ ಮಾಡುವ ನಾಗೇಶ್ ಎಂಬಾತ ಆಕೆಗೆ ಸಹಾಯ ಮಾಡುವುದಾಗಿ ನಂಬಿಸಿದ್ದಾನೆ.

ಯುವತಿ ಆತನ ಮಾತು ನಂಬಿ ದೇವನಹಳ್ಳಿಯ ಆತನ ಮನೆಗೆ ಹೋಗಿದ್ದಳು. ಈ ವೇಳೆ ಅಲ್ಲಿ ಆಕೆಯ ಮೇಲೆ ಆರೋಪಿ ಅತ್ಯಾಚಾರ ನಡೆಸಿದ್ದಾನೆ. ಬಳಿಕ ಆಕೆಯನ್ನು ಹೆದರಿಸಿ, 10 ಸಾವಿರ ರೂಪಾಯಿಗಳಿಗೆ ವೇಶ್ಯಾವಾಟಿಕೆ ಜಾಲದೊಂದಿಗೆ ಡೀಲ್ ಕುದುರಿಸಿಕೊಂಡ ಆರೋಪಿ, ಆಕೆಯನ್ನು ಮಾರುವ ಉದ್ದೆಶದಿಂದ ದೆಹಲಿಗೆ ಕರೆದೊಯ್ಯಲು ವಿಮಾನ ನಿಲ್ದಾಣಕ್ಕೆ ಬಂದಿದ್ದಾನೆ.

ಇವರಿಬ್ಬರನ್ನು ನೋಡಿ ಅನುಮಾನಗೊಂಡ ವಿಮಾನ ನಿಲ್ದಾಣ ಪೊಲೀಸರು ವಿಚಾರಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಆರೋಪಿ ಈ ಹಿಂದೆಯೂ ಯುವತಿಯರನ್ನು ದೆಹಲಿಯಲ್ಲಿ ಮಾರಾಟ ಮಾಡಿರುವುದು ವಿಚಾರಣೆಯಲ್ಲಿ ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು