6:02 AM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಮನೆ ಬಿಟ್ಟು ಬಂದ ಕೋಲಾರದ ಯುವತಿಯ ಮೇಲೆ ಅತ್ಯಾಚಾರ: ವೇಶ್ಯಾವಾಟಿಕೆ ಮಾರಲು ಯತ್ನ: ಆರೋಪಿ ಬಂಧನ

12/02/2022, 18:15

ಬೆಂಗಳೂರು(reporterkarnataka.com): ಮನೆ ಬಿಟ್ಟು ಬಂದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಆಕೆಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ನಡೆಸಿ, ನಂತರ ವೇಶ್ಯಾವಾಟಿಕೆ ಮಾರಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಮನೆಯವರೊಂದಿಗೆ ಜಗಳ ಮಾಡಿಕೊಂಡು ಕೋಲಾರದಿಂದ ಯುವತಿ ಬೆಂಗಳೂರಿಗೆ ಬಂದಿದ್ದಳು. ಮೆಜೆಸ್ಟಿಕ್ ಗೆ ತಲುಪಿದ ಯುವತಿ ಕಂಗಾಲಾಗಿ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕೂತಿದ್ದಳು. ಈಕೆಯನ್ನು ಗಮನಿಸಿದ್ದ ಟ್ರಾವೆಲ್ ಏಜೆನ್ಸಿಯಲ್ಲಿ ಕೆಲಸ ಮಾಡುವ ನಾಗೇಶ್ ಎಂಬಾತ ಆಕೆಗೆ ಸಹಾಯ ಮಾಡುವುದಾಗಿ ನಂಬಿಸಿದ್ದಾನೆ.

ಯುವತಿ ಆತನ ಮಾತು ನಂಬಿ ದೇವನಹಳ್ಳಿಯ ಆತನ ಮನೆಗೆ ಹೋಗಿದ್ದಳು. ಈ ವೇಳೆ ಅಲ್ಲಿ ಆಕೆಯ ಮೇಲೆ ಆರೋಪಿ ಅತ್ಯಾಚಾರ ನಡೆಸಿದ್ದಾನೆ. ಬಳಿಕ ಆಕೆಯನ್ನು ಹೆದರಿಸಿ, 10 ಸಾವಿರ ರೂಪಾಯಿಗಳಿಗೆ ವೇಶ್ಯಾವಾಟಿಕೆ ಜಾಲದೊಂದಿಗೆ ಡೀಲ್ ಕುದುರಿಸಿಕೊಂಡ ಆರೋಪಿ, ಆಕೆಯನ್ನು ಮಾರುವ ಉದ್ದೆಶದಿಂದ ದೆಹಲಿಗೆ ಕರೆದೊಯ್ಯಲು ವಿಮಾನ ನಿಲ್ದಾಣಕ್ಕೆ ಬಂದಿದ್ದಾನೆ.

ಇವರಿಬ್ಬರನ್ನು ನೋಡಿ ಅನುಮಾನಗೊಂಡ ವಿಮಾನ ನಿಲ್ದಾಣ ಪೊಲೀಸರು ವಿಚಾರಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಆರೋಪಿ ಈ ಹಿಂದೆಯೂ ಯುವತಿಯರನ್ನು ದೆಹಲಿಯಲ್ಲಿ ಮಾರಾಟ ಮಾಡಿರುವುದು ವಿಚಾರಣೆಯಲ್ಲಿ ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು