8:44 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಮನೆ ಹಂಚಿಕೆಯಲ್ಲಿ ಖಾನಾಪೂರ ಗ್ರಾಮಕ್ಕೆ ಮೋಸ: ಪ್ರಗತಿಪರ ದಲಿತ ಸಂಘಟನೆ ಆರೋಪ

02/01/2024, 23:00

ರಮೇಶ ಖಾನಾಪೂರ ರಾಯಚೂರು

info.reporterkarnataka@gmail.com

ಖಾನಾಪೂರ ಗ್ರಾಮಕ್ಕೆ ಮನೆ ಹಂಚಿಕೆಯಲ್ಲಿ ಅವೈಜ್ಞಾನಿಕವಾಗಿ ಇಂದು ಅಧಿಕಾರಿಗಳು ಬೇಕಾಬಿಟ್ಟಿ ಆಯ್ಕೆ ಮಾಡಿ ಖಾನಾಪೂರ ಗ್ರಾಮಕ್ಕೆ ಸಾಮಾಜಿಕ ನ್ಯಾಯ ಕೊಡದೆ ಅಧಿಕಾರಿಗಳು ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ದೇವದುರ್ಗ ತಾಲ್ಲೂಕಿನ ಹೇಮನಾಳ ಗ್ರಾಮದ ಹೊನ್ನಯ್ಯ ತಾತ ದೇವಸ್ಥಾನದ ಆವರಣದಲ್ಲಿ ನಡೆದ ಹೇಮನಾಳ ಗ್ರಾಮ ಪಂಚಾಯತಿಯ ಕೊನೆಯ ವಿವಿಧ ವಸತಿ ಯೋಜನೆ ಗ್ರಾಮ ಸಭೆಯಲ್ಲಿ ಹೇಮನಾಳ ಗ್ರಾಮ ಪಂಚಾಯತಿಗೆ ದೊಡ್ಡ ಗ್ರಾಮವಾದ ಹಾಗೂ ತಾಲ್ಲೂಕು ಪಂಚಾಯತ ಕ್ಷೇತ್ರವಾದ ಖಾನಾಪೂರ ಗ್ರಾಮಕ್ಕೆ ಅಂಬೇಡ್ಕರ್ ವಸತಿ ಯೋಜನೆ ಮನೆ ಹಂಚಿಕೆಯಲ್ಲಿ ಅತಿ ಹೆಚ್ಚು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನಸಂಖ್ಯೆ ಅತಿ ಹೆಚ್ಚು ಇದ್ದಿದ್ದು ಎಲ್ಲಾ ಅಧಿಕಾರಿಗಳಿಗೆ ಗೊತ್ತಿದೆ, ತಾ.ಪಂ ಅಧಿಕಾರಗಳು ಹಾಗೂ ಪಿಡಿಒ ಶಿವಕುಮಾರ ನಿರ್ಲಕ್ಷ್ಯದಿಂದ ಉದೇಶಪೂರ್ವಕವಾಗಿ ಅತಿ ಹೆಚ್ಚು ಗ್ರಾಮ ಪಂಚಾಯತಿ ಸದಸ್ಯರ ಹೊಂದಿರುವ
ಖಾನಾಪೂರ ಗ್ರಾಮಕ್ಕೆ ಮನೆ ಹಂಚಿಕೆಯಲ್ಲಿ ಅವೈಜ್ಞಾನಿಕವಾಗಿ ಇಂದು ಅಧಿಕಾರಿಗಳು ಬೇಕಾಬಿಟ್ಟಿ ಆಯ್ಕೆ ಮಾಡಿ ಖಾನಾಪೂರ ಗ್ರಾಮಕ್ಕೆ ಸಾಮಾಜಿಕ ನ್ಯಾಯ ಕೊಡದೆ ಅಧಿಕಾರಿಗಳು ಅನ್ಯಾಯ ಮಾಡಿದ್ದಾರೆ, ಕಳೆದ ವಾರ ಖಾನಾಪೂರ ಗ್ರಾಮದಲ್ಲಿ ನಡೆದ ವಾರ್ಡ್ ಸಭೆಯಲ್ಲಿ ಖಾನಾಪೂರ ಗ್ರಾಮಕ್ಕೆ ಎಷ್ಟು ಮನೆಗಳು ಬಂದಿವೆ ಎಂಬುದು ಪಿಡಿಒ ಶಿವಕುಮಾರ ಅವರು ಗ್ರಾಮದ ಜನರಿಗೆ ತಿಳಿಸದೆ ಜನರಲ್ಲಿ ಮೂಖಾರ್ಜಿಗಳನ್ನು ಪಡೆದ ಎಷ್ಟು ಮನೆಗಳು ಎಂಬುದು ಮಾಹಿತಿ ನೀಡದೆ ಜನರಿಗೆ ದಿಕ್ಕು ತಪ್ಪಿಸಿ ಜನರಿಗೆ ಮೋಸ ಮಾಡಿದ್ದಾರೆ. ಕೂಡಲೇ ಸಂಬಂಧಿಸಿದ ಜಿಪಂ ಅಧಿಕಾರಿಗಳು ಹೆಚ್ಚೆತ್ತು ಕೊಂಡು ಈ ಗ್ರಾಮ ಸಭೆಯನ್ನು ರದ್ದು ಪಡಿಸಿ ಮರು ಗ್ರಾಮ ಸಭೆ ಮಾಡಿ ಖಾನಾಪೂರ ಗ್ರಾಮದ ಪರಿಶಿಷ್ಟ ಜಾತಿ ವರ್ಗಕ್ಕೆ ಸಿಗಬೇಕಾದ ನ್ಯಾಯ ಒದಗಿಸದ್ದಿದ್ದರೆ ತಾಪಂ ಮುಂದೆ ಉಗ್ರವಾದ ಹೋರಾಟ ಹಮ್ಮಿಕೊಡಲಾಗುತ್ತದೆ ಎಂದು ಖಾನಾಪೂರ ಗ್ರಾಮದ ದಲಿತ ಮುಖಂಡರು ಹಾಗೂ ಪ್ರಗತಿಪರ ದಲಿತ ಸಂಘಟನೆಯ ವತಿಯಿಂದ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು