2:14 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಮನೆ ಕುಸಿತ ಪ್ರದೇಶಕ್ಕೆ ಜಿಪಂ ಸಿಇಒ ಭೇಟಿ: ಸಂತ್ರಸ್ತರ ಜತೆ ಸಭೆ; ವಸತಿರಹಿತರಿಗೆ 15 ದಿನಗಳಲ್ಲಿ ನಿವೇಶನ ಭರವಸೆ

20/07/2022, 21:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಬಾಳೂರು, ನಿಡುವಾಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಕುಸಿತ ಉಂಟಾದ ಪ್ರದೇಶಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಭೇಟಿ ನೀಡಿ   ಅಧಿಕಾರಿಗಳು ಹಾಗೂ ಸಂತ್ರಸ್ತರ ಜತೆ  ಸಭೆ ನಡೆಸಿದರು.

ಬಳಿಕ ಮಾತನಾಡಿದ ಅವರು, ನಿಡುವಾಳೆ, ಮರ್ಕಲ್, ಬಾಳೂರು ಮೂರು ಭಾಗಗಳಲ್ಲಿ ಮನೆ ಕುಸಿತವಾದ ಸಂತ್ರಸ್ತರಿಗೆ ಪರ್ಯಾಯ ಜಾಗ ಗುರುತಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದ್ದು ಶೀಘ್ರವಾಗಿ ಜಾಗ ಅನುಮೋದಿಸಿ ನೀಡಲಾಗುವುದು. ಬಾಳೂರು ಗ್ರಾಪಂ ಕಲ್ಲಕ್ಕಿ ಭಾಗದಲ್ಲಿ ವಸತಿ ರಹಿತರಿಗೆ ನೂತನವಾಗಿ ಸೂಚಿಸಿರುವ ಜಾಗವನ್ನು 15 ದಿನಗಳ ಅವಧಿಯಲ್ಲಿ ಅನುಮೋದಿಸಿ ಸಂತ್ರಸ್ತರಿಗೆ ವಿತರಿಸುವುದಾಗಿ ಭರವಸೆ ನೀಡಿದರು. 

ಮನೆ ಬಿದ್ದು ಹೋದ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಆದೇಶ ನೀಡಲಾಗಿದ್ದು, ಬಹುತೇಕ ಮನೆಗಳಿಗೆ ಪರಿಹಾರ ವಿತರಿಸಲಾಗಿದೆ. ಪರಿಹಾರ ಸಿಗದ ಸಂತ್ರಸ್ತರಿದ್ದರೆ ಹಾಗೂ ವಿವಿಧ ಕಡೆಗಳಲ್ಲಿ ಅಂಗನವಾಡಿ, ರಸ್ತೆ,ತಡೆಗೋಡೆ ಮಳೆಗೆ  ಕುಸಿದು ಹೋಗಿದ್ದಲ್ಲಿ ಕೂಡಲೇ ಅಧಿಕಾರಿಗಳ ಗಮನಕ್ಕೆ ತರಬೇಕು.

ಗ್ರಾಮೀಣ ಭಾಗದಲ್ಲಿ ಆಸ್ಪತ್ರೆಯ ವೈದ್ಯರ, ಸಿಬ್ಬಂದಿಗಳ ಕೊರತೆ ಎದ್ದು ಕಾಣುತ್ತಿದ್ದು ಕೂಡಲೇ ಸಿಬ್ಬಂದಿಗಳನ್ನು ಗ್ರಾಮೀಣ ಭಾಗದ ಆಸ್ಪತ್ರೆಗಳಿಗೆ ನಿಯೋಜಿಸಲು  ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಚಿಂತನೆ ನಡೆಸಲಾಗುವುದು’ ಎಂದರು. 

ಜಿಲ್ಲೆಯ ವಿವಿಧ ಭಾಗಗಳಲ್ಲಿ ಶಾಲೆ, ಅಂಗನವಾಡಿಗಳನ್ನು ಅಚ್ಚುಕಟ್ಟಾಗಿ ಗ್ರಾಮ ಪಂಚಾಯಿತಿ ಹಾಗೂ ಸಂಘ ಸಂಸ್ಥೆಗಳ ವತಿಯಿಂದ ಇಡಲಾಗಿದೆ. ಮರ್ಕಲ್ ಅಂಗನವಾಡಿ ಕೇಂದ್ರದ ನಿರ್ವಹಣೆಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು