11:08 AM Thursday28 - May 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು…

ಇತ್ತೀಚಿನ ಸುದ್ದಿ

ಮನೆ ಕುಸಿತ ಪ್ರದೇಶಕ್ಕೆ ಜಿಪಂ ಸಿಇಒ ಭೇಟಿ: ಸಂತ್ರಸ್ತರ ಜತೆ ಸಭೆ; ವಸತಿರಹಿತರಿಗೆ 15 ದಿನಗಳಲ್ಲಿ ನಿವೇಶನ ಭರವಸೆ

20/07/2022, 21:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಬಾಳೂರು, ನಿಡುವಾಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಕುಸಿತ ಉಂಟಾದ ಪ್ರದೇಶಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಭೇಟಿ ನೀಡಿ   ಅಧಿಕಾರಿಗಳು ಹಾಗೂ ಸಂತ್ರಸ್ತರ ಜತೆ  ಸಭೆ ನಡೆಸಿದರು.

ಬಳಿಕ ಮಾತನಾಡಿದ ಅವರು, ನಿಡುವಾಳೆ, ಮರ್ಕಲ್, ಬಾಳೂರು ಮೂರು ಭಾಗಗಳಲ್ಲಿ ಮನೆ ಕುಸಿತವಾದ ಸಂತ್ರಸ್ತರಿಗೆ ಪರ್ಯಾಯ ಜಾಗ ಗುರುತಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದ್ದು ಶೀಘ್ರವಾಗಿ ಜಾಗ ಅನುಮೋದಿಸಿ ನೀಡಲಾಗುವುದು. ಬಾಳೂರು ಗ್ರಾಪಂ ಕಲ್ಲಕ್ಕಿ ಭಾಗದಲ್ಲಿ ವಸತಿ ರಹಿತರಿಗೆ ನೂತನವಾಗಿ ಸೂಚಿಸಿರುವ ಜಾಗವನ್ನು 15 ದಿನಗಳ ಅವಧಿಯಲ್ಲಿ ಅನುಮೋದಿಸಿ ಸಂತ್ರಸ್ತರಿಗೆ ವಿತರಿಸುವುದಾಗಿ ಭರವಸೆ ನೀಡಿದರು. 

ಮನೆ ಬಿದ್ದು ಹೋದ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಆದೇಶ ನೀಡಲಾಗಿದ್ದು, ಬಹುತೇಕ ಮನೆಗಳಿಗೆ ಪರಿಹಾರ ವಿತರಿಸಲಾಗಿದೆ. ಪರಿಹಾರ ಸಿಗದ ಸಂತ್ರಸ್ತರಿದ್ದರೆ ಹಾಗೂ ವಿವಿಧ ಕಡೆಗಳಲ್ಲಿ ಅಂಗನವಾಡಿ, ರಸ್ತೆ,ತಡೆಗೋಡೆ ಮಳೆಗೆ  ಕುಸಿದು ಹೋಗಿದ್ದಲ್ಲಿ ಕೂಡಲೇ ಅಧಿಕಾರಿಗಳ ಗಮನಕ್ಕೆ ತರಬೇಕು.

ಗ್ರಾಮೀಣ ಭಾಗದಲ್ಲಿ ಆಸ್ಪತ್ರೆಯ ವೈದ್ಯರ, ಸಿಬ್ಬಂದಿಗಳ ಕೊರತೆ ಎದ್ದು ಕಾಣುತ್ತಿದ್ದು ಕೂಡಲೇ ಸಿಬ್ಬಂದಿಗಳನ್ನು ಗ್ರಾಮೀಣ ಭಾಗದ ಆಸ್ಪತ್ರೆಗಳಿಗೆ ನಿಯೋಜಿಸಲು  ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಚಿಂತನೆ ನಡೆಸಲಾಗುವುದು’ ಎಂದರು. 

ಜಿಲ್ಲೆಯ ವಿವಿಧ ಭಾಗಗಳಲ್ಲಿ ಶಾಲೆ, ಅಂಗನವಾಡಿಗಳನ್ನು ಅಚ್ಚುಕಟ್ಟಾಗಿ ಗ್ರಾಮ ಪಂಚಾಯಿತಿ ಹಾಗೂ ಸಂಘ ಸಂಸ್ಥೆಗಳ ವತಿಯಿಂದ ಇಡಲಾಗಿದೆ. ಮರ್ಕಲ್ ಅಂಗನವಾಡಿ ಕೇಂದ್ರದ ನಿರ್ವಹಣೆಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು