4:47 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಮನೆ ಮನೆಗೆ ನಾಳೆಯಿಂದ ಲಸಿಕಾಮಿತ್ರ: ನೂತನ ಲಸಿಕಾ ಅಭಿಯಾನ

09/11/2021, 10:16

ಮಂಗಳೂರು(reporterkarnataka.com ): ಈಗಾಗಲೇ ಪ್ರಥಮ ಡೋಸ್ ಪಡೆದು, ಎರಡನೇ ಡೋಸ್‌ಗೆ ಬಾಕಿ ಉಳಿದಿರುವ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಕೋವಿಡ್ ಲಸಿಕೆ ನೀಡುವ ಮನೆಮನೆಗೆ ಲಸಿಕಾ ಮಿತ್ರ ವಿನೂತನ ಅಭಿಯಾನಕ್ಕೆ ಇದೇ ನವೆಂಬರ್  10ರಂದು ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದರು. 

ಅವರು ಮಂಗಳೂರು ಮಹಾನಗರ ಪಾಲಿಕೆಯ ಕೋವಿಡ್ ವಾರ್ ರೂಂನಲ್ಲಿ ಹಮ್ಮಿಕೊಳ್ಳಲಾಗಿದ್ದ ಮನೆ ಮನೆಗೆ ಲಸಿಕಾ ಅಭಿಯಾನದ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಈ ಅಭಿಯಾನಕ್ಕೆ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಕೈಜೋಡಿಸಿರುವ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟಿçÃಯ ಸ್ವಯಂ ಸೇವಾ ಯೋಜನೆಯ ಸ್ವಯಂ ಸೇವಕರು, ಎರಡನೇ ಡೋಸ್ ಲಸಿಕೆ ಪಡೆಯದ ಫಲಾನುಭವಿಗಳ ಮನೆ ಮನೆಗೆ ತೆರಳಿ, ಲಸಿಕೆಯ ಮಹತ್ವ ತಿಳಿಸಿಕೊಟ್ಟು, ಜಾಗೃತಿ ಮೂಡಿಸಿ, ಲಸಿಕೆ ಪಡೆಯುವಂತೆ ಮನನ ಮಾಡಲಿದ್ದಾರೆ, ಆ ಮೂಲಕ  ಜಿಲ್ಲೆಯನ್ನು ಸಂಪೂರ್ಣ ಕೋವಿಡ್ ಲಸಿಕಾ ಜಿಲ್ಲೆಯನ್ನಾಗಿಸಲಾಗವುದು ಎಂದು ಹೇಳಿದರು. ಮೊದಲ ಹಂತದಲ್ಲಿ ಮನೆ ಮನೆಗೆ ಲಸಿಕಾ ಮಿತ್ರ ಅಭಿಯಾನಕ್ಕೆ ಇದೇ ನ.10ರಂದು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಚಾಲನೆ ನೀಡಲಾಗುವುದು, ಮುಂದಿನ ಹಂತದಲ್ಲಿ ಜಿಲ್ಲೆಯಾದ್ಯಂತ ಈ ಅಭಿಯಾನ ಆರಂಭವಾಗಲಿದೆ, ಈ ಅಭಿಯಾನದಲ್ಲಿ ಭಾಗವಹಿಸುತ್ತಿರುವ ಮಂಗಳೂರು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಸ್ವಯಂ ಸೇವಕರಿಗೆ ತರಬೇತಿಯನ್ನು ಸಹ ನೀಡಲಾಗುವುದು ಎಂದು ತಿಳಿಸಿದರು. 

ಈ ಹಿನ್ನಲೆಯಲ್ಲಿ ಎನ್‌ಎಸ್‌ಎಸ್ ಸ್ವಯಂ ಸೇವಕರು ಮನೆಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸುವಂತೆ ಹಾಗೂ ಈ ಲಸಿಕಾ ಅಭಿಯಾನದ ಯಶಸ್ವಿಗೆ ಕೈಜೋಡಿಸುವಂತೆ ಡಿಎಚ್‌ಒ ಕೋರಿದರು.  



ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ. ಅಶೋಕ್ ಕುಮಾರ್, ಮಂಗಳೂರು  ಮಹಾನಗರ ಪಾಲಿಕೆಯ ಕೋವಿಡ್ ವಿಭಾಗದ ನೋಡಲ್ ಅಧಿಕಾರಿ ಡಾ. ಅಣ್ಣಯ್ಯ ಕುಲಾಲ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪಾಡಿ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್, ಮಂಗಳೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ ಹಾಗೂ ನಗರ ವ್ಯಾಪ್ತಿಯ ಎಲ್ಲಾ ಎನ್‌ಎಸ್‌ಎಸ್ ಘಟಕದ ಯೋಜನಾಧಿಕಾರಿಗಳು ಸಭೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು