4:00 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಮನೆ ಮನೆಗೆ ನಾಳೆಯಿಂದ ಲಸಿಕಾಮಿತ್ರ: ನೂತನ ಲಸಿಕಾ ಅಭಿಯಾನ

09/11/2021, 10:16

ಮಂಗಳೂರು(reporterkarnataka.com ): ಈಗಾಗಲೇ ಪ್ರಥಮ ಡೋಸ್ ಪಡೆದು, ಎರಡನೇ ಡೋಸ್‌ಗೆ ಬಾಕಿ ಉಳಿದಿರುವ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಕೋವಿಡ್ ಲಸಿಕೆ ನೀಡುವ ಮನೆಮನೆಗೆ ಲಸಿಕಾ ಮಿತ್ರ ವಿನೂತನ ಅಭಿಯಾನಕ್ಕೆ ಇದೇ ನವೆಂಬರ್  10ರಂದು ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದರು. 

ಅವರು ಮಂಗಳೂರು ಮಹಾನಗರ ಪಾಲಿಕೆಯ ಕೋವಿಡ್ ವಾರ್ ರೂಂನಲ್ಲಿ ಹಮ್ಮಿಕೊಳ್ಳಲಾಗಿದ್ದ ಮನೆ ಮನೆಗೆ ಲಸಿಕಾ ಅಭಿಯಾನದ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಈ ಅಭಿಯಾನಕ್ಕೆ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಕೈಜೋಡಿಸಿರುವ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟಿçÃಯ ಸ್ವಯಂ ಸೇವಾ ಯೋಜನೆಯ ಸ್ವಯಂ ಸೇವಕರು, ಎರಡನೇ ಡೋಸ್ ಲಸಿಕೆ ಪಡೆಯದ ಫಲಾನುಭವಿಗಳ ಮನೆ ಮನೆಗೆ ತೆರಳಿ, ಲಸಿಕೆಯ ಮಹತ್ವ ತಿಳಿಸಿಕೊಟ್ಟು, ಜಾಗೃತಿ ಮೂಡಿಸಿ, ಲಸಿಕೆ ಪಡೆಯುವಂತೆ ಮನನ ಮಾಡಲಿದ್ದಾರೆ, ಆ ಮೂಲಕ  ಜಿಲ್ಲೆಯನ್ನು ಸಂಪೂರ್ಣ ಕೋವಿಡ್ ಲಸಿಕಾ ಜಿಲ್ಲೆಯನ್ನಾಗಿಸಲಾಗವುದು ಎಂದು ಹೇಳಿದರು. ಮೊದಲ ಹಂತದಲ್ಲಿ ಮನೆ ಮನೆಗೆ ಲಸಿಕಾ ಮಿತ್ರ ಅಭಿಯಾನಕ್ಕೆ ಇದೇ ನ.10ರಂದು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಚಾಲನೆ ನೀಡಲಾಗುವುದು, ಮುಂದಿನ ಹಂತದಲ್ಲಿ ಜಿಲ್ಲೆಯಾದ್ಯಂತ ಈ ಅಭಿಯಾನ ಆರಂಭವಾಗಲಿದೆ, ಈ ಅಭಿಯಾನದಲ್ಲಿ ಭಾಗವಹಿಸುತ್ತಿರುವ ಮಂಗಳೂರು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಸ್ವಯಂ ಸೇವಕರಿಗೆ ತರಬೇತಿಯನ್ನು ಸಹ ನೀಡಲಾಗುವುದು ಎಂದು ತಿಳಿಸಿದರು. 

ಈ ಹಿನ್ನಲೆಯಲ್ಲಿ ಎನ್‌ಎಸ್‌ಎಸ್ ಸ್ವಯಂ ಸೇವಕರು ಮನೆಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸುವಂತೆ ಹಾಗೂ ಈ ಲಸಿಕಾ ಅಭಿಯಾನದ ಯಶಸ್ವಿಗೆ ಕೈಜೋಡಿಸುವಂತೆ ಡಿಎಚ್‌ಒ ಕೋರಿದರು.  



ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ. ಅಶೋಕ್ ಕುಮಾರ್, ಮಂಗಳೂರು  ಮಹಾನಗರ ಪಾಲಿಕೆಯ ಕೋವಿಡ್ ವಿಭಾಗದ ನೋಡಲ್ ಅಧಿಕಾರಿ ಡಾ. ಅಣ್ಣಯ್ಯ ಕುಲಾಲ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪಾಡಿ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್, ಮಂಗಳೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ ಹಾಗೂ ನಗರ ವ್ಯಾಪ್ತಿಯ ಎಲ್ಲಾ ಎನ್‌ಎಸ್‌ಎಸ್ ಘಟಕದ ಯೋಜನಾಧಿಕಾರಿಗಳು ಸಭೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು