6:43 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮನೆಯಲ್ಲಿ ಹೇಳದೆ ಗೋವಾ ಪ್ರವಾಸಕ್ಕೆ ಹೊರಟ ಕಾಸರಗೋಡಿನ 4 ಮಂದಿ ಬಾಲಕರು ಉಡುಪಿಯಲ್ಲಿ ಪೊಲೀಸ್ ವಶಕ್ಕೆ: ಮತ್ತೆ ಹೆತ್ತವರ ಸುಪರ್ದಿಗೆ

30/11/2023, 01:29

ಉಡುಪಿ(reporterkarnataka.com): ಕಾಸರಗೋಡಿನಿಂದ ದಿಢೀರನೆ ನಾಪತ್ತೆಯಾಗಿದ್ದ 4 ಮಂದಿ ಅಪ್ರಾಪ್ತ ವಯಸ್ಸಿನ ಬಾಲಕರು ಉಡುಪಿ ಬಳಿ ಪತ್ತೆಯಾಗಿದ್ದು, ಗೋವಾಕ್ಕೆ ಪ್ರವಾಸ ತೆರಳಲು ಮನೆ ಬಿಟ್ಟು ಬಂದಿರುವುದಾಗಿ ಬಾಲಕರು ಪೊಲೀಸರಿಗೆ ತಿಳಿಸಿದ್ದಾರೆ.
ನ.27ರಂದು ಸಂಜೆ ಶಾಲೆಯಿಂದ ಮನೆಗೆ ಬಂದಿದ್ದ ಕಾಸರಗೋಡು ಪರಿಸರದ ನಾಲ್ವರು ಬಾಲಕರು ಆಟವಾಡಲೆಂದು ಮನೆಯಿಂದ ಹೊರಗೆ ತೆರಳಿದ್ದರು. ಕತ್ತಲಾದರೂ ನಂತರ ಮಕ್ಕಳು ವಾಪಸ್ ಬರಲಿಲ್ಲ. ಇದರಿಂದ ಮನೆಯವರು ಗಾಬರಿಗೊಂಡು ಹುಡುಕಾಡಲಾರಂಭಿಸಿದರು. ಈ ವೇಳೆ ಒಟ್ಟು 4 ಮಕ್ಕಳು ನಾಪತ್ತೆಯಾಗಿರುವುದು ಕಂಡು ಬಂತು. ಇದರಲ್ಲಿ ಒಬ್ಬ ಬಾಲಕನಲ್ಲಿ ಮೊಬೈಲ್ ಫೋನ್ ಇತ್ತು. ಪೊಲೀಸರು ಮೊಬೈಲ್ ಲೊಕೇಶನ್ ಟ್ರೇಸ್ ಮಾಡಿದಾಗ ಅವರು ಉಡುಪಿಯಲ್ಲಿ ಇರುವ ಬಗ್ಗೆ ತೋರಿಸಿತು. ತಕ್ಷಣ ಕಾಸರಗೋಡು ಪೊಲೀಸರು ಉಡುಪಿ ಪೊಲೀಸರಿಗೆ ಮಾಹಿತಿ ನೀಡಿದರು. ಉಡುಪಿ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ನಾಲ್ವರು ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ. ಮಕ್ಕಳು ತಾವೆಲ್ಲರು ಗೋವಾಕ್ಕೆ ಪ್ರವಾಸ ಹೋಗಲು ಮನೆ ಬಿಟ್ಟು ಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು