7:57 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಮನೆಯಲ್ಲಿ ಹೇಳದೆ ಗೋವಾ ಪ್ರವಾಸಕ್ಕೆ ಹೊರಟ ಕಾಸರಗೋಡಿನ 4 ಮಂದಿ ಬಾಲಕರು ಉಡುಪಿಯಲ್ಲಿ ಪೊಲೀಸ್ ವಶಕ್ಕೆ: ಮತ್ತೆ ಹೆತ್ತವರ ಸುಪರ್ದಿಗೆ

30/11/2023, 01:29

ಉಡುಪಿ(reporterkarnataka.com): ಕಾಸರಗೋಡಿನಿಂದ ದಿಢೀರನೆ ನಾಪತ್ತೆಯಾಗಿದ್ದ 4 ಮಂದಿ ಅಪ್ರಾಪ್ತ ವಯಸ್ಸಿನ ಬಾಲಕರು ಉಡುಪಿ ಬಳಿ ಪತ್ತೆಯಾಗಿದ್ದು, ಗೋವಾಕ್ಕೆ ಪ್ರವಾಸ ತೆರಳಲು ಮನೆ ಬಿಟ್ಟು ಬಂದಿರುವುದಾಗಿ ಬಾಲಕರು ಪೊಲೀಸರಿಗೆ ತಿಳಿಸಿದ್ದಾರೆ.
ನ.27ರಂದು ಸಂಜೆ ಶಾಲೆಯಿಂದ ಮನೆಗೆ ಬಂದಿದ್ದ ಕಾಸರಗೋಡು ಪರಿಸರದ ನಾಲ್ವರು ಬಾಲಕರು ಆಟವಾಡಲೆಂದು ಮನೆಯಿಂದ ಹೊರಗೆ ತೆರಳಿದ್ದರು. ಕತ್ತಲಾದರೂ ನಂತರ ಮಕ್ಕಳು ವಾಪಸ್ ಬರಲಿಲ್ಲ. ಇದರಿಂದ ಮನೆಯವರು ಗಾಬರಿಗೊಂಡು ಹುಡುಕಾಡಲಾರಂಭಿಸಿದರು. ಈ ವೇಳೆ ಒಟ್ಟು 4 ಮಕ್ಕಳು ನಾಪತ್ತೆಯಾಗಿರುವುದು ಕಂಡು ಬಂತು. ಇದರಲ್ಲಿ ಒಬ್ಬ ಬಾಲಕನಲ್ಲಿ ಮೊಬೈಲ್ ಫೋನ್ ಇತ್ತು. ಪೊಲೀಸರು ಮೊಬೈಲ್ ಲೊಕೇಶನ್ ಟ್ರೇಸ್ ಮಾಡಿದಾಗ ಅವರು ಉಡುಪಿಯಲ್ಲಿ ಇರುವ ಬಗ್ಗೆ ತೋರಿಸಿತು. ತಕ್ಷಣ ಕಾಸರಗೋಡು ಪೊಲೀಸರು ಉಡುಪಿ ಪೊಲೀಸರಿಗೆ ಮಾಹಿತಿ ನೀಡಿದರು. ಉಡುಪಿ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ನಾಲ್ವರು ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ. ಮಕ್ಕಳು ತಾವೆಲ್ಲರು ಗೋವಾಕ್ಕೆ ಪ್ರವಾಸ ಹೋಗಲು ಮನೆ ಬಿಟ್ಟು ಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು