1:09 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಮನೆಯಲ್ಲಿ ಹೇಳದೆ ಗೋವಾ ಪ್ರವಾಸಕ್ಕೆ ಹೊರಟ ಕಾಸರಗೋಡಿನ 4 ಮಂದಿ ಬಾಲಕರು ಉಡುಪಿಯಲ್ಲಿ ಪೊಲೀಸ್ ವಶಕ್ಕೆ: ಮತ್ತೆ ಹೆತ್ತವರ ಸುಪರ್ದಿಗೆ

30/11/2023, 01:29

ಉಡುಪಿ(reporterkarnataka.com): ಕಾಸರಗೋಡಿನಿಂದ ದಿಢೀರನೆ ನಾಪತ್ತೆಯಾಗಿದ್ದ 4 ಮಂದಿ ಅಪ್ರಾಪ್ತ ವಯಸ್ಸಿನ ಬಾಲಕರು ಉಡುಪಿ ಬಳಿ ಪತ್ತೆಯಾಗಿದ್ದು, ಗೋವಾಕ್ಕೆ ಪ್ರವಾಸ ತೆರಳಲು ಮನೆ ಬಿಟ್ಟು ಬಂದಿರುವುದಾಗಿ ಬಾಲಕರು ಪೊಲೀಸರಿಗೆ ತಿಳಿಸಿದ್ದಾರೆ.
ನ.27ರಂದು ಸಂಜೆ ಶಾಲೆಯಿಂದ ಮನೆಗೆ ಬಂದಿದ್ದ ಕಾಸರಗೋಡು ಪರಿಸರದ ನಾಲ್ವರು ಬಾಲಕರು ಆಟವಾಡಲೆಂದು ಮನೆಯಿಂದ ಹೊರಗೆ ತೆರಳಿದ್ದರು. ಕತ್ತಲಾದರೂ ನಂತರ ಮಕ್ಕಳು ವಾಪಸ್ ಬರಲಿಲ್ಲ. ಇದರಿಂದ ಮನೆಯವರು ಗಾಬರಿಗೊಂಡು ಹುಡುಕಾಡಲಾರಂಭಿಸಿದರು. ಈ ವೇಳೆ ಒಟ್ಟು 4 ಮಕ್ಕಳು ನಾಪತ್ತೆಯಾಗಿರುವುದು ಕಂಡು ಬಂತು. ಇದರಲ್ಲಿ ಒಬ್ಬ ಬಾಲಕನಲ್ಲಿ ಮೊಬೈಲ್ ಫೋನ್ ಇತ್ತು. ಪೊಲೀಸರು ಮೊಬೈಲ್ ಲೊಕೇಶನ್ ಟ್ರೇಸ್ ಮಾಡಿದಾಗ ಅವರು ಉಡುಪಿಯಲ್ಲಿ ಇರುವ ಬಗ್ಗೆ ತೋರಿಸಿತು. ತಕ್ಷಣ ಕಾಸರಗೋಡು ಪೊಲೀಸರು ಉಡುಪಿ ಪೊಲೀಸರಿಗೆ ಮಾಹಿತಿ ನೀಡಿದರು. ಉಡುಪಿ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ನಾಲ್ವರು ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ. ಮಕ್ಕಳು ತಾವೆಲ್ಲರು ಗೋವಾಕ್ಕೆ ಪ್ರವಾಸ ಹೋಗಲು ಮನೆ ಬಿಟ್ಟು ಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು