9:55 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಮನೆಯಲ್ಲಿ ಹೇಳದೆ ಗೋವಾ ಪ್ರವಾಸಕ್ಕೆ ಹೊರಟ ಕಾಸರಗೋಡಿನ 4 ಮಂದಿ ಬಾಲಕರು ಉಡುಪಿಯಲ್ಲಿ ಪೊಲೀಸ್ ವಶಕ್ಕೆ: ಮತ್ತೆ ಹೆತ್ತವರ ಸುಪರ್ದಿಗೆ

30/11/2023, 01:29

ಉಡುಪಿ(reporterkarnataka.com): ಕಾಸರಗೋಡಿನಿಂದ ದಿಢೀರನೆ ನಾಪತ್ತೆಯಾಗಿದ್ದ 4 ಮಂದಿ ಅಪ್ರಾಪ್ತ ವಯಸ್ಸಿನ ಬಾಲಕರು ಉಡುಪಿ ಬಳಿ ಪತ್ತೆಯಾಗಿದ್ದು, ಗೋವಾಕ್ಕೆ ಪ್ರವಾಸ ತೆರಳಲು ಮನೆ ಬಿಟ್ಟು ಬಂದಿರುವುದಾಗಿ ಬಾಲಕರು ಪೊಲೀಸರಿಗೆ ತಿಳಿಸಿದ್ದಾರೆ.
ನ.27ರಂದು ಸಂಜೆ ಶಾಲೆಯಿಂದ ಮನೆಗೆ ಬಂದಿದ್ದ ಕಾಸರಗೋಡು ಪರಿಸರದ ನಾಲ್ವರು ಬಾಲಕರು ಆಟವಾಡಲೆಂದು ಮನೆಯಿಂದ ಹೊರಗೆ ತೆರಳಿದ್ದರು. ಕತ್ತಲಾದರೂ ನಂತರ ಮಕ್ಕಳು ವಾಪಸ್ ಬರಲಿಲ್ಲ. ಇದರಿಂದ ಮನೆಯವರು ಗಾಬರಿಗೊಂಡು ಹುಡುಕಾಡಲಾರಂಭಿಸಿದರು. ಈ ವೇಳೆ ಒಟ್ಟು 4 ಮಕ್ಕಳು ನಾಪತ್ತೆಯಾಗಿರುವುದು ಕಂಡು ಬಂತು. ಇದರಲ್ಲಿ ಒಬ್ಬ ಬಾಲಕನಲ್ಲಿ ಮೊಬೈಲ್ ಫೋನ್ ಇತ್ತು. ಪೊಲೀಸರು ಮೊಬೈಲ್ ಲೊಕೇಶನ್ ಟ್ರೇಸ್ ಮಾಡಿದಾಗ ಅವರು ಉಡುಪಿಯಲ್ಲಿ ಇರುವ ಬಗ್ಗೆ ತೋರಿಸಿತು. ತಕ್ಷಣ ಕಾಸರಗೋಡು ಪೊಲೀಸರು ಉಡುಪಿ ಪೊಲೀಸರಿಗೆ ಮಾಹಿತಿ ನೀಡಿದರು. ಉಡುಪಿ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ನಾಲ್ವರು ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ. ಮಕ್ಕಳು ತಾವೆಲ್ಲರು ಗೋವಾಕ್ಕೆ ಪ್ರವಾಸ ಹೋಗಲು ಮನೆ ಬಿಟ್ಟು ಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು