4:59 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮನೆಯಲ್ಲಿ ಹೇಳದೆ ಗೋವಾ ಪ್ರವಾಸಕ್ಕೆ ಹೊರಟ ಕಾಸರಗೋಡಿನ 4 ಮಂದಿ ಬಾಲಕರು ಉಡುಪಿಯಲ್ಲಿ ಪೊಲೀಸ್ ವಶಕ್ಕೆ: ಮತ್ತೆ ಹೆತ್ತವರ ಸುಪರ್ದಿಗೆ

30/11/2023, 01:29

ಉಡುಪಿ(reporterkarnataka.com): ಕಾಸರಗೋಡಿನಿಂದ ದಿಢೀರನೆ ನಾಪತ್ತೆಯಾಗಿದ್ದ 4 ಮಂದಿ ಅಪ್ರಾಪ್ತ ವಯಸ್ಸಿನ ಬಾಲಕರು ಉಡುಪಿ ಬಳಿ ಪತ್ತೆಯಾಗಿದ್ದು, ಗೋವಾಕ್ಕೆ ಪ್ರವಾಸ ತೆರಳಲು ಮನೆ ಬಿಟ್ಟು ಬಂದಿರುವುದಾಗಿ ಬಾಲಕರು ಪೊಲೀಸರಿಗೆ ತಿಳಿಸಿದ್ದಾರೆ.
ನ.27ರಂದು ಸಂಜೆ ಶಾಲೆಯಿಂದ ಮನೆಗೆ ಬಂದಿದ್ದ ಕಾಸರಗೋಡು ಪರಿಸರದ ನಾಲ್ವರು ಬಾಲಕರು ಆಟವಾಡಲೆಂದು ಮನೆಯಿಂದ ಹೊರಗೆ ತೆರಳಿದ್ದರು. ಕತ್ತಲಾದರೂ ನಂತರ ಮಕ್ಕಳು ವಾಪಸ್ ಬರಲಿಲ್ಲ. ಇದರಿಂದ ಮನೆಯವರು ಗಾಬರಿಗೊಂಡು ಹುಡುಕಾಡಲಾರಂಭಿಸಿದರು. ಈ ವೇಳೆ ಒಟ್ಟು 4 ಮಕ್ಕಳು ನಾಪತ್ತೆಯಾಗಿರುವುದು ಕಂಡು ಬಂತು. ಇದರಲ್ಲಿ ಒಬ್ಬ ಬಾಲಕನಲ್ಲಿ ಮೊಬೈಲ್ ಫೋನ್ ಇತ್ತು. ಪೊಲೀಸರು ಮೊಬೈಲ್ ಲೊಕೇಶನ್ ಟ್ರೇಸ್ ಮಾಡಿದಾಗ ಅವರು ಉಡುಪಿಯಲ್ಲಿ ಇರುವ ಬಗ್ಗೆ ತೋರಿಸಿತು. ತಕ್ಷಣ ಕಾಸರಗೋಡು ಪೊಲೀಸರು ಉಡುಪಿ ಪೊಲೀಸರಿಗೆ ಮಾಹಿತಿ ನೀಡಿದರು. ಉಡುಪಿ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ನಾಲ್ವರು ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ. ಮಕ್ಕಳು ತಾವೆಲ್ಲರು ಗೋವಾಕ್ಕೆ ಪ್ರವಾಸ ಹೋಗಲು ಮನೆ ಬಿಟ್ಟು ಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು