11:33 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮನೆಯಂಗಳದಲ್ಲಿ ಪುನೀತ್ ರಾಜ್ ಕುಮಾರ್  ಪುತ್ಥಳಿ ನಿರ್ಮಾಣ: ಅಭಿಮಾನ ಮೆರೆದ ಅಭಿಮಾನಿ!

28/12/2021, 13:31

ವಿ.ಜಿ. ವೃಷಭೇಂದ್ರ ಕೂಡ್ಲಿಗಿ ವಿಜಯ ನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಸಿದ್ದಾಪುರ ವಡ್ಡರಟ್ಟಿ ಯಲ್ಲಿ ದಿವಂಗತ ನಟ ಪುನೀತ್ ರಾಜಕುಮಾರ್ ಅವರ ಕಟ್ಟಾ ಅಭಿಮಾನಿಗಳಾದ ಪೂಜಾರಿ ರಾಮಜ್ಜರ ವಂಶದ ಸಮಾಜ ಸೇವಕ ಆರ್.ಟಿ.ನಾಗರಾಜ್ ಹಾಗೂ

ಮಲ್ಲಮ್ಮ ನವರು ತಮ್ಮ ಮನೆಯಂಗಳದಲ್ಲಿ ಪುನೀತ್ ರಾಜಕುಮಾರ್ ರವರ ಪುತ್ಥಳಿ ಪ್ರತಿಷ್ಠಾಪಿಸಿ ಅಭಿಮಾನ ಮೆರೆದಿದ್ದಾರೆ.

ಪುನೀತ್ ರಾಜಕುಮಾರ್ ಅವರ ನೂತನ ಪುತ್ಥಳಿಯನ್ನು ಮಾಜಿ ಶಾಸಕ ಕೆ.ವಿ.ರವೀಂದ್ರನಾಥ  ಬಾಬು ಹಾಗೂ ಕೆಪಿಸಿಸಿ ಸದಸ್ಯ ಲೋಕೇಶ್ ವಿ ನಾಯಕ ನೇತೃತ್ವದಲ್ಲಿ ಅನಾವರಣ ಗೊಳಿಸಲಾಯಿತು. ಸಮಾಜ ಸೇವಕ ಆರ್.ಟಿ.ನಾಗರಾಜ ಅವರು ಮಾತನಾಡಿ, ಪುನೀತ್ ರಾಜಕುಮಾರ ಅದ್ಬುತ ನಟರಾಗಿದ್ದಾರೆ ಜೊತೆಗೆ ವೈಶಿಷ್ಟಪೂರ್ಣ ಸಮಾಜ ಸೇವಕ ಕೂಡ ಆಗಿದ್ದರು.

ಅವರು ಇಡೀ ಯುವ ಪೀಳಿಗೆಗೆ ಮಾದರಿ ಯುವರಾಜರಾಗಿದ್ದಾರೆ. ಈ ಮೂಲಕ ಅವರು ಸದಾ ಜನಮಾನಸದಲ್ಲಿರುತ್ತಾರೆ. ಅವರು ಇಹಲೋಕ  ಅಗಲಿರಬಹುದು ಆದ್ರೆ ಆವರು ತಮ್ಮ ಸೇವಾ ಕುರುಹುಗಳ ಮೂಲಕ ಅಮರರಾಗಿದ್ದಾರೆ ಎಂದರು. ಪುನೀತ್ ರು ಬಾಲ ನಟನಿದ್ದಾಗಲಿಂದಲೂ ತಾವು ಅವರ ಅಭಿಮಾನಿಯಾಗಿದ್ದು, ಆಗಿನಿಂದ ಈ ವರೆಗೆ ಪುನೀತ್ ರಾಜ್  ಅಭಿನಯಿಸಿರುವ ಪ್ರತಿ ಚನಚಿತ್ರಗಳನ್ನು,ಕುಟುಂಬ ಸದಸ್ಯರೊಡಗೂಡಿ  ವೀಕ್ಷಿಸಿದ್ದೇನೆ. ಪುನೀತ್ ರಂತೆ ತಾವೂ ಕೂಡ ತಮ್ಮ ಶಕ್ತಿ ಅನುಸಾರ  ಸಮಾಜ ಸೇವೆ ಮಾಡುವ ಇಂಗಿತವನ್ನು ನಾಗರಾಜ್ ವ್ಯಕ್ತಪಡಿಸಿದ್ದಾರೆ. 

ವೈದ್ಯ ಎಸ್.ಪಿ. ಪ್ರದೀಪ್ ಕುಮಾರ್ ಹಾಗೂ  ಸೋಮಶೇಖರ್, ಆರ್.ವಿ. ತಿಪ್ಪೇಸ್ವಾಮಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು. ಗ್ರಾಮದ ಹಿರಿಯರು ಹಾಗೂ ನೂರಾರು ಯುವಕರು,ನೂರಾರು ಪುನೀತ್ ರಾಜಕುಮಾರ್ ಅಭಿಮಾನಿಗಳು  ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.  

ಇತ್ತೀಚಿನ ಸುದ್ದಿ

ಜಾಹೀರಾತು