3:01 PM Monday28 - July 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ…

ಇತ್ತೀಚಿನ ಸುದ್ದಿ

ಮಂಗಳಾ ಕ್ರೀಡಾಂಗಣ ವಾಕಿಂಗ್ ಟ್ರ್ಯಾಕ್ ಶೀಘ್ರದಲ್ಲೇ ಸಾರ್ವಜನಿಕರ ಬಳಕೆಗೆ ಲಭ್ಯ: ಶಾಸಕ ವೇದವ್ಯಾಸ ಕಾಮತ್

09/09/2023, 23:30

ಮಂಗಳೂರು(reporterkarnataka.com): ನಗರದ ಮಂಗಳಾ ಕ್ರೀಡಾಂಗಣ ಅಭಿವೃದ್ಧಿಪಡಿಸುವ ಕಾಮಗಾರಿ ಕೈಗೆತ್ತಿಕೊಂಡ ಸಂದರ್ಭ ಕ್ರೀಡಾಂಗಣದ ಸುತ್ತಲೂ ಸಾರ್ವಜನಿಕರಿಗೆ ವಾಕಿಂಗ್ ಟ್ರ್ಯಾಕ್ ಮಾಡಿಸಿಕೊಡಬೇಕು ಎಂಬ ಬೇಡಿಕೆ ಇದ್ದು, ಈ ನಿಟ್ಟಿನಲ್ಲಿ ವಾಕಿಂಗ್ ಟ್ರ್ಯಾಕ್ ಕಾಮಗಾರಿಯನ್ನು ನಿರ್ಮಿಸುವ ಬಗ್ಗೆ ಯೋಜನೆ ರೂಪಿಸಿ ಕಾರ್ಯಗತಗೊಳಿಸಲಾಗಿತ್ತು. ಇದೀಗ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲಿ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಹೇಳಿದ್ದಾರೆ.


ವಾಕಿಂಗ್ ಟ್ರ್ಯಾಕ್‍ಗೆ ಸರಕಾರದಿಂದ ಒಂದೂವರೆ ಕೋಟಿ ರೂ. ಬಿಡುಗಡೆ ಆಗಿ ಕಾಮಗಾರಿ ಆರಂಭವಾಗಿತ್ತು. ಆದರೆ ಈಗ ಕಾಮಗಾರಿ ಸ್ಥಳದಲ್ಲಿ ಮಣ್ಣಿನ ರಾಶಿಗಳು ಬಿದ್ದಿದ್ದು, ವಾಕಿಂಗ್ ನಡೆಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಅಥ್ಲೆಟಿಕ್ ಅಸೋಸಿಯೇಶನ್ ಪ್ರಮುಖರು ಕೂಡಾ ಗಮನಕ್ಕೆ ತಂದಿದ್ದರು. ಮುಂದಿನ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆ, ಕಾರ್ಪೊರೇಶನ್ ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ತಿಳಿಸಿದರು.
ಸ್ಥಳೀಯ ಪಾಲಿಕೆ ಸದಸ್ಯೆ ಸಂಧ್ಯಾ ಮೋಹನ್, ಸಾರ್ವಜನಿಕರ ಪರವಾಗಿ ಪುರುಷೋತ್ತಮ ಪೂಜಾರಿ ದಕ್ಷಿಣ ಕನ್ನಡ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷರು, ದೇವಿದಯಾಳ್ ಕನ್‍ಸ್ಟ್ರಕ್ಷನ್ ಮಾಲೀಕ ಜಗದೀಶ್ ಶೆಟ್ಟಿ ಸೇರಿದಂತೆ ಅನೇಕ ಸಾರ್ವಜನಿಕರು ಈ ಕಾಮಗಾರಿ ಪೂರ್ಣಗೊಳಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ. ಅವರೆಲ್ಲರ ಮನವಿ ಪ್ರಕಾರ ಅತೀ ಶೀಘ್ರದಲ್ಲಿ ಉಳಿಕೆ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಮುಂದುವರಿಸಲು ಚಿಂತನೆ ನಡೆಸಲಾಗಿದೆ. ಈ ಕಾಮಗಾರಿಗಳು ಪೂರ್ಣಗೊಂಡಲ್ಲಿ ಸಾರ್ವಜನಿಕರಿಗೆ ವಾಕಿಂಗ್ ಟ್ರ್ಯಾಕ್ ಬಳಕೆಗೆ ಲಭ್ಯವಾಗಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಸದಾನಂದ ಆಳ್ವ, ಅನಿಲ್ ಆಳ್ವ, ಸ್ಟೀವನ್, ಪ್ರೇಮನಾಥ ಶೆಟ್ಟಿ ಫಿಸಿಕಲ್ ಎಜುಕೇಶನ್ ಡೈರೆಕ್ಟರ್, ರವಿರಾಜ್ ನ್ಯಾಷನಲ್ ಲೆವೆಲ್ ಅಥ್ಲೆಟಿಕ್, ಸುದರ್ಶನ್ ಫಿಸಿಕಲ್ ಎಜುಕೇಶನ್ ಡೈರೆಕ್ಟರ್, ಮೊಹಮ್ಮದ್ ಮಾಸ್ತರ್ ಅಥ್ಲೆಟಿಕ್, ಕರುಣಾಕರ ರೈ,ತಾರಾನಾಥ ಶೆಟ್ಟಿ, ರೇಖಾ ಶೆಟ್ಟಿ, ಹರಿದಾಸ್ ಕೂಳೂರು ಫಿಸಿಕಲ್ ಎಜುಕೇಶನ್ ಡೈರೆಕ್ಟರ್ ಮಂಗಳೂರು ವಿಶ್ವವಿದ್ಯಾನಿಲಯ, ಯಶವಂತ್ ಫಿಸಿಕಲ್ ಎಜುಕೇಶನ್ ಡೈರೆಕ್ಟರ್, ಪುಷ್ಪರಾಜ್ ಹೆಗಡೆ, ಇಂಟರ್ ನ್ಯಾಷನಲ್ ವೈಟ್ ಲಿಫ್ಟಿಂಗ್ ಎನ್ ಐಎಸ್ ಕೋಚ್, ರವಿ ನಾಯ್ಕ, ಡೈರೆಕ್ಟರ್ ಯುತ್ ಸರ್ವಿಸ್ ಸ್ಪೋರ್ಟ್ಸ್, ಮಂಜುನಾಥ್, ಸೂಪರ್ವೈಸರ್, ನಂದಕುಮಾರ್, ಸತೀಶ್ ಎ.ಕೆ, ಸುಧಾಕರ್, ವಸಂತ್, ದೇವರಾಜ, ತರುಣ್, ಧೀರಜ್, ನಂದಾ ಶೆಣೈ, ಅಜಿತ್ ರಾವ್, ವೆಂಕಟೇಶ್ ಆಚಾರ್, ಮೋಹನ್ ಆಚಾರ್, ಸ್ಥಳೀಯ ಕಾರ್ಪೊರೇಟರ್ ಸಂಧ್ಯಾ ಆಚಾರ್, ಪವನ್ ಶೆಣೈ, ಆನಂದ ರೈ, ವಸಂತ್ ಪೂಜಾರಿ, ಭಾಸ್ಕರ ಚಂದ್ರ ಶೆಟ್ಟಿ, ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು