7:35 PM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಮಂಗಳಜ್ಯೋತಿ ಜಂಕ್ಷನ್‌ನಲ್ಲಿ ಸಂತ ಮದರ್ ತೆರೇಸಾ ವಿಚಾರ ವೇದಿಕೆಯಿಂದ `ದೀಪಾವಳಿ ಸಂಭ್ರಮ’

12/11/2023, 21:09

ಗುರುಪುರ(reporterkarnataka.com): ದೀಪಗಳ ಹಬ್ಬ ದೀಪಾವಳಿಯಲ್ಲಿ ಎರಡು ಅರ್ಥ ಕಾಣುತ್ತೇವೆ. ತನ್ನನ್ನು ಉರಿಸಿಕೊಂಡು ಬೇರೆಯವರಿಗೆ ಬೆಳಕು ಕೊಡುವುದು ಒಂದು ಅರ್ಥವಾದರೆ, ಒಂದು ದೀಪದಿಂದ ನೂರಾರು-ಸಾವಿರಾರು ದೀಪಗಳು ಬೆಳಗುತ್ತದೆ ಎಂಬುದು ಇನ್ನೊಂದು ಅರ್ಥ. ಬೆಳಕು ಜ್ಞಾನದ ಸಂಕೇತವೂ ಹೌದು. ಎಲ್ಲರೂ ಕೂಡಿಕೊಂಡು ಈ ಬೆಳಕಿನ ಹಬ್ಬ ಆಚರಿಸಬೇಕು. ಆಗಲೇ ದೀಪಾವಳಿ ಅರ್ಥಪೂರ್ಣವಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಹೇಳಿದರು.
ಮಂಗಳೂರಿನ ಸಂತ ಮದರ್ ತೆರೇಸಾ ವಿಚಾರ ವೇದಿಕೆಯು ವಾಮಂಜೂರು ಮಂಗಳಜ್ಯೋತಿ ಜಂಕ್ಷನ್‌ನಲ್ಲಿ ಭಾನುವಾರ ಆಯೋಜಿಸಿದ `ದೀಪಾವಳಿ ಸಂಭ್ರಮ-2023′ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಮಂಗಳೂರು ಪ್ರಗತಿಪರ ಅಧ್ಯಾಪಕರ ವೇದಿಕೆಯ ಅಧ್ಯಕ್ಷ ಡಾ. ವಸಂತ್ ಕುಮಾರ್ ಮಾತನಾಡಿ, ಬೆಳಕು ಎಲ್ಲರಿಗೂ ಬೇಕು. ಹಾಗಾಗಿ ಬೆಳಕಿನ ಹಬ್ಬಕ್ಕೆ ಜಾತಿ-ಧರ್ಮ ಎಂಬುದಿಲ್ಲ. ದಾರಿ ತಪ್ಪುತ್ತಿರುವ ಯುವಕರಿಗೆ ಉತ್ತಮ ಸಂಸ್ಕಾರ ನೀಡಿ ಉತ್ತಮ ಸಮಾಜದ ನಿರ್ಮಿಸಬೇಕು. ಸಮಾಜ ಎಂಬ ಮೂರಕ್ಷರದಲ್ಲಿ `ಸಂಬಂಧಗಳು ಮಾನವನಲ್ಲಿ ಜನಿಸಬೇಕು ಎಂಬ ಅರ್ಥ ಅಡಗಿದೆ. ಅದೇ ಸಮಾಜ ಭಾವನೆ. ಸಂಸ್ಕಾರ ಎಂದರೆ ಬರೇ ದೇವಸ್ಥಾನ ಕಟ್ಟುವುದು ಮೂರ್ತಿ ಕೆತ್ತುವುದಲ್ಲ. ಎಲ್ಲರಿಗೂ ಸಮಾನ ಶಿಕ್ಷಣ ಮತ್ತು ಆರೋಗ್ಯ ನೀಡುವುದು ಎಂದರು.
ಮಂಗಳೂರಿನ ಸಂದೇಶ ಪ್ರತಿಷ್ಠಾನದ ನಿರ್ದೇಶಕ ಫಾ. ಸುದೀಪ್ ಪೌಲ್ ಮಾತನಾಡಿ, ಭಾರತದ ಇತಿಹಾಸ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆ ಕಂಡಿದೆ. ಆಗ ಎಲ್ಲರೂ ಪ್ರೀತಿ, ಸಾಮರಸ್ಯ, ಭಾವೈಕ್ಯತೆಯಿಂದ ಜೀವಿಸುತ್ತಿದ್ದೆವು. ಆದರೆ ಈಗ ಎಲ್ಲವೂ ಬದಲಾಗಿದೆ. ದೀಪಾವಳಿ ಎಲ್ಲ ಧರ್ಮದ ಗಡಿ ಮೀರಿ ಆಚರಿಸುವ ಹಬ್ಬವಾಗಲಿ ಎಂದು ಶುಭ ಹಾರೈಸಿದರು.
ಸಂತ ಮದರ್ ತೆರೇಸಾ ವಿಚಾರ ವೇದಿಕೆ ಅಧ್ಯಕ್ಷ ರೋಯ್ ಕ್ಯಾಸ್ಟಲಿನೊ ಅಧ್ಯಕ್ಷತೆ ವಹಿಸಿದ್ದರು. ಲತೀಕ್ಷಾ ಸ್ವಾಗತ ನೃತ್ಯ ಮಾಡಿದರು. ವೇದಿಕೆಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಸ್ವಾಗತಿಸಿ ಪ್ರಸ್ತಾವಿಕ ಮಾತನ್ನಾಡಿದರು. ಕಾರ್ಪೊರೇಟರ್ ಅಬ್ದುಲ್ ಲತೀಫ್, ಮಂಗಳಜ್ಯೋತಿಯ ಕೊರಗಜ್ಜ ಸೇವಾ ಟ್ರಸ್ಟ್ ಅಧ್ಯಕ್ಷ ಲಕ್ಷ್ಮಣ್ ವಾಮಂಜೂರು, ಮಂಗಳೂರು ಬೆಥನಿ ಸಿಸ್ಟರ್ ಪ್ರೊವಿನ್ಸಿಯಲ್ ಸುಪೀರಿಯರ್ ಸಿಸ್ಟರ್ ಸಿಸಿಲಿಯಾ ಮೆಂಡೋನ್ಸಾ, ಮಂಜುಳಾ ನಾಯಕ್(ಜಂಟಿ ಕಾರ್ಯದರ್ಶಿ), ಡಾಲ್ಫಿ ಡಿ’ಸೋಜ(ಕೋಶಾಧಿಕಾರಿ) ಹಾಗೂ ಇತರ ಹಿರಿಯ ಗಣ್ಯರು, ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮನೋಜ್ ಕುಮಾರ್ ವಾಮಂಜೂರು ಕಾರ್ಯಕ್ರಮ ನಿರೂಪಿಸಿದರು. ಪ್ರಶಾಂತ್ ಮತ್ತು ಬಳಗದವರು ಸೌಹಾರ್ದ ನೃತ್ಯ ಪ್ರದರ್ಶಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು