10:06 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಮಂಗಳೂರಿಗೆ ಬಂದ ಪ್ರಧಾನಿ ಏರ್ ಫೋರ್ಟ್ ಗೆ ಕೋಟಿ- ಚೆನ್ನಯ ನಾಮಕರಣ ಮಾಡಲಿ: ಖಾದರ್

01/09/2022, 10:49

ಮಂಗಳೂರು(reporterkarnataka.com): ಪ್ರಧಾನಿ ಮೋದಿ ಮಂಗಳೂರಿಗೆ ಆಗಮಿಸುವುದು ತುಂಬಾ ಸಂತೋಷದ ವಿಷಯ. ಪ್ರಧಾನಿ ಆಗಮನ ಹೆಮ್ಮೆಯ ಸಂಗತಿ. ಆದರೆ ಅದಕ್ಕಾಗಿ ಸರಕಾರಿ ಯಂತ್ರ ದುರುಪಯೋಗಪಡಿಸುವುದು ಸರಿಯಲ್ಲ ಎಂದು ಪ್ರತಿಪಕ್ಷದ ನಾಯಕ ಯು.ಟಿ. ಖಾದರ್ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರತಿ ಗ್ರಾಮದಿಂದ 250 ಮಂದಿಯನ್ನು ಕರೆತರುವಂತೆ ಪಿಡಿಓಗಳಿಗೆ ಸೂಚಿಸಲಾಗಿದೆ. ಎರಡು ಜಿಲ್ಲೆಯ ಗ್ರಾಪಂಗಳಿಂದ ಇಷ್ಟೊಂದು ಜನ ಬಂದರೆ ಕಾರ್ಯಕ್ರಮ ನಡೆಯುವ ಮೈದಾನ ಸಾಕಾಗುತ್ತಾ ಎಂದು ಪ್ರಶ್ನಿಸಿದರು.

ಇವರಿಗೆ ಕಾರ್ಯಕ್ರಮ ಮಾಡಲು ಮೈದಾನಕ್ಕಿಂತ ದೊಡ್ಡ ಜಾಗಬೇಕು ಅಂತಾ ಕಾಣಿಸುತ್ತಿದೆ. ಗ್ರಾಪಂ ಕಾರ್ಯದರ್ಶಿ, ಲೈನ್ ಮ್ಯಾನ್, ನೀರು ಬಿಡುವವರಿಗೂ ನೋಟಿಸ್ ಹೋಗಿದೆ.

ಮೋದಿ ಮಂಗಳೂರಿಗೆ ಬರುವುದು ಸಂತೋಷ. ಅದನ್ನು ಸ್ವಾಗತಿಸುತ್ತೇವೆ. ದೇಶದ ಪ್ರಧಾನ ಮಂತ್ರಿ ಜಿಲ್ಲೆಗೆ ಬಂದಾಗ ಜಿಲ್ಲೆಗೆ ಸಿಕ್ಕ ಕೊಡುಗೆ ಬಗ್ಗೆ ಜನರು ನಿರೀಕ್ಷಿತರಾಗಿದ್ದಾರೆ. ಬಿಜೆಪಿ ಪ್ರತಿನಿಧಿಗಳು ಸಾವಿರಾರು ಕೋಟಿ ಯೋಜನೆಗೆ ಬರುತ್ತಿದ್ದಾರೆ ಎಂದು ಹೇಳಿದ್ದಾರೆ. ಸಾವಿರಾರು ಕೋಟಿ ಯೋಜನೆ ಅರ್ಪಿಸುವುದು ಯಾವುದು. ಇದರಲ್ಲಿ ಕೇಂದ್ರ ಮತ್ತು ರಾಜ್ಯದ ಪಾಲು ಎಷ್ಟಿದೆ? ಎಂಬುದು ಗೊತ್ತಾಗಬೇಕು ಎಂದರು.

ಎನ್ಎಂಪಿಟಿ ಹಿಂದೆ ಸರ್ಕಾರದಲ್ಲಿ ಇತ್ತು. ಇದನ್ನು ಈಗ ಕೆಲವು ಉದ್ದಿಮೆದಾರರಿಗೆ ನೀಡಿದ್ದಾರೆ. ಜಿಂದಾಲ್ ಪ್ಯಾಕ್ಟರಿಯ ಜೆ ಎಸ್ ಡಬ್ಲ್ಯು, ಬೇರೆ ಬೇರೆ ಖಾಸಗಿ ಕಂಪೆನಿಯ ದೊಡ್ಡ ದೊಡ್ಡ ಟ್ಯಾಂಕ್, ಪಾಮೋಲಿವ್ ಕಂಪೆನಿಯ ಯೋಜನೆಗೆ ಬರುತ್ತಿದ್ದಾರೆ. ಈ ಯೋಜನೆಗೆ ಸರ್ಕಾರ ದುಡ್ಡು ಹಾಕಿದೆಯೇ? ಎಂಬುದನ್ನು ತಿಳಿಸಬೇಕು. ಯಾರದೋ ಕೆಲಸ ಇವರು ಉದ್ಘಾಟನೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಮಂಗಳೂರು ಏರ್‌ಪೋರ್ಟ್‌ಗೆ ಕೋಟಿ ಚೆನ್ನಯ್ಯ ಏರ್ ಪೋರ್ಟ್ ಎಂದು ಘೋಷಿಸಲಿ. ಇದು ಸರ್ಕಾರದ ದುಡ್ಡಿನಲ್ಲಿ ನಡೆಯುವ ಕಾರ್ಯಕ್ರಮ. ಎಲ್ಲರನ್ನು ಕರೆದರೂ ಶಾಸಕನಾಗಿರುವ ನನ್ನನ್ನು ಕರೆದಿಲ್ಲ. ಆಹ್ವಾನ ಬಂದರೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಆಲೋಚಿಸುತ್ತೇನೆ ಎಂದರು.

ನಾನು ಕಾರ್ಯಕ್ರಮದಲ್ಲಿ ಇದ್ದರೆ ನಮ್ಮನ್ನು ಟೀಕಿಸಲು ಅವರಿಗೆ ಮುಜುಗರ ಆಗುವುದನ್ನು ತಪ್ಪಿಸಲು ಬಹುಷ ನಮ್ಮನ್ನು ಹೊರಗಿಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು