4:26 AM Sunday18 - May 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಗುಡುಗು ಸಹಿತ ಭಾರೀ ಮಳೆ: ರಸ್ತೆಯಲ್ಲಿ ನಿಂತ ನೀರು; ಟ್ರಾಫಿಕ್ ಜಾಮ್;… ಪಾಕ್ ಬೆಂಬಲಿತ ಭಯೋತ್ಪಾದನೆ: ಅಮೆರಿಕ ತೆರಳಲಿರುವ ಸರ್ವಪಕ್ಷ ನಿಯೋಗದಲ್ಲಿ ಸಂಸದರಾದ ತೇಜಸ್ವಿ ಸೂರ್ಯ,… Chikkamagaluru | ಕೃಷಿ ಹೊಂಡದಲ್ಲಿ ಒಂಟಿ ಸಲಗನ ಜಲಕ್ರೀಡೆ!: ಒಂದು ತಾಸಿಗೂ ಅಧಿಕ… ಕರ್ನಾಟಕದ ಆನೆ ಮೇ 21ರಂದು ಆಂಧ್ರಕ್ಕೆ: ಎಪಿ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್… MSEM | ಮುಂದಿನ ದಿನಗಳಲ್ಲಿ ಎಂಎಸ್ಎಂಇ ಪ್ರತ್ಯೇಕ ಇಲಾಖೆ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ Tamilnadu | ಮಂಜೇಶ್ವರದ ಸ್ನೇಹಾಲಯದಿಂದ ಕುಂಬಕೋಣಂವರೆಗೆ ಗಿರಿ ಪಯಣ: ಕುಟುಂಬ ಜತೆ ಮತ್ತೆ… ಮಲೆನಾಡಿನಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ಕ್ರಮ: ಚಿಕ್ಕಮಗಳೂರು ಕೆಡಿಪಿ ಸಭೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ತುಮಕೂರು-ಶಿರಾ-ಚಿತ್ರದುರ್ಗ ಪ್ರತ್ಯೇಕ ಸರಕು ಸಾಗಣೆ ರೈಲ್ವೆ ಮಾರ್ಗ: ರೈಲ್ವೆ ಸಚಿವ ವಿ. ಸೋಮಣ್ಣಗೆ… Bangalore | ಗ್ಯಾರಂಟಿ ಯೋಜನೆಗಳ ಯಶಸ್ಸಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಶ್ರಮವಿದೆ: ಮುಖ್ಯಮಂತ್ರಿ… ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ…

ಇತ್ತೀಚಿನ ಸುದ್ದಿ

ಮಂಗಳೂರಿಗೆ ಬಂದ ಪ್ರಧಾನಿ ಏರ್ ಫೋರ್ಟ್ ಗೆ ಕೋಟಿ- ಚೆನ್ನಯ ನಾಮಕರಣ ಮಾಡಲಿ: ಖಾದರ್

01/09/2022, 10:49

ಮಂಗಳೂರು(reporterkarnataka.com): ಪ್ರಧಾನಿ ಮೋದಿ ಮಂಗಳೂರಿಗೆ ಆಗಮಿಸುವುದು ತುಂಬಾ ಸಂತೋಷದ ವಿಷಯ. ಪ್ರಧಾನಿ ಆಗಮನ ಹೆಮ್ಮೆಯ ಸಂಗತಿ. ಆದರೆ ಅದಕ್ಕಾಗಿ ಸರಕಾರಿ ಯಂತ್ರ ದುರುಪಯೋಗಪಡಿಸುವುದು ಸರಿಯಲ್ಲ ಎಂದು ಪ್ರತಿಪಕ್ಷದ ನಾಯಕ ಯು.ಟಿ. ಖಾದರ್ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರತಿ ಗ್ರಾಮದಿಂದ 250 ಮಂದಿಯನ್ನು ಕರೆತರುವಂತೆ ಪಿಡಿಓಗಳಿಗೆ ಸೂಚಿಸಲಾಗಿದೆ. ಎರಡು ಜಿಲ್ಲೆಯ ಗ್ರಾಪಂಗಳಿಂದ ಇಷ್ಟೊಂದು ಜನ ಬಂದರೆ ಕಾರ್ಯಕ್ರಮ ನಡೆಯುವ ಮೈದಾನ ಸಾಕಾಗುತ್ತಾ ಎಂದು ಪ್ರಶ್ನಿಸಿದರು.

ಇವರಿಗೆ ಕಾರ್ಯಕ್ರಮ ಮಾಡಲು ಮೈದಾನಕ್ಕಿಂತ ದೊಡ್ಡ ಜಾಗಬೇಕು ಅಂತಾ ಕಾಣಿಸುತ್ತಿದೆ. ಗ್ರಾಪಂ ಕಾರ್ಯದರ್ಶಿ, ಲೈನ್ ಮ್ಯಾನ್, ನೀರು ಬಿಡುವವರಿಗೂ ನೋಟಿಸ್ ಹೋಗಿದೆ.

ಮೋದಿ ಮಂಗಳೂರಿಗೆ ಬರುವುದು ಸಂತೋಷ. ಅದನ್ನು ಸ್ವಾಗತಿಸುತ್ತೇವೆ. ದೇಶದ ಪ್ರಧಾನ ಮಂತ್ರಿ ಜಿಲ್ಲೆಗೆ ಬಂದಾಗ ಜಿಲ್ಲೆಗೆ ಸಿಕ್ಕ ಕೊಡುಗೆ ಬಗ್ಗೆ ಜನರು ನಿರೀಕ್ಷಿತರಾಗಿದ್ದಾರೆ. ಬಿಜೆಪಿ ಪ್ರತಿನಿಧಿಗಳು ಸಾವಿರಾರು ಕೋಟಿ ಯೋಜನೆಗೆ ಬರುತ್ತಿದ್ದಾರೆ ಎಂದು ಹೇಳಿದ್ದಾರೆ. ಸಾವಿರಾರು ಕೋಟಿ ಯೋಜನೆ ಅರ್ಪಿಸುವುದು ಯಾವುದು. ಇದರಲ್ಲಿ ಕೇಂದ್ರ ಮತ್ತು ರಾಜ್ಯದ ಪಾಲು ಎಷ್ಟಿದೆ? ಎಂಬುದು ಗೊತ್ತಾಗಬೇಕು ಎಂದರು.

ಎನ್ಎಂಪಿಟಿ ಹಿಂದೆ ಸರ್ಕಾರದಲ್ಲಿ ಇತ್ತು. ಇದನ್ನು ಈಗ ಕೆಲವು ಉದ್ದಿಮೆದಾರರಿಗೆ ನೀಡಿದ್ದಾರೆ. ಜಿಂದಾಲ್ ಪ್ಯಾಕ್ಟರಿಯ ಜೆ ಎಸ್ ಡಬ್ಲ್ಯು, ಬೇರೆ ಬೇರೆ ಖಾಸಗಿ ಕಂಪೆನಿಯ ದೊಡ್ಡ ದೊಡ್ಡ ಟ್ಯಾಂಕ್, ಪಾಮೋಲಿವ್ ಕಂಪೆನಿಯ ಯೋಜನೆಗೆ ಬರುತ್ತಿದ್ದಾರೆ. ಈ ಯೋಜನೆಗೆ ಸರ್ಕಾರ ದುಡ್ಡು ಹಾಕಿದೆಯೇ? ಎಂಬುದನ್ನು ತಿಳಿಸಬೇಕು. ಯಾರದೋ ಕೆಲಸ ಇವರು ಉದ್ಘಾಟನೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಮಂಗಳೂರು ಏರ್‌ಪೋರ್ಟ್‌ಗೆ ಕೋಟಿ ಚೆನ್ನಯ್ಯ ಏರ್ ಪೋರ್ಟ್ ಎಂದು ಘೋಷಿಸಲಿ. ಇದು ಸರ್ಕಾರದ ದುಡ್ಡಿನಲ್ಲಿ ನಡೆಯುವ ಕಾರ್ಯಕ್ರಮ. ಎಲ್ಲರನ್ನು ಕರೆದರೂ ಶಾಸಕನಾಗಿರುವ ನನ್ನನ್ನು ಕರೆದಿಲ್ಲ. ಆಹ್ವಾನ ಬಂದರೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಆಲೋಚಿಸುತ್ತೇನೆ ಎಂದರು.

ನಾನು ಕಾರ್ಯಕ್ರಮದಲ್ಲಿ ಇದ್ದರೆ ನಮ್ಮನ್ನು ಟೀಕಿಸಲು ಅವರಿಗೆ ಮುಜುಗರ ಆಗುವುದನ್ನು ತಪ್ಪಿಸಲು ಬಹುಷ ನಮ್ಮನ್ನು ಹೊರಗಿಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು