10:12 PM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಮಂಗಳೂರಿಗೆ ಬಂದ ಪ್ರಧಾನಿ ಏರ್ ಫೋರ್ಟ್ ಗೆ ಕೋಟಿ- ಚೆನ್ನಯ ನಾಮಕರಣ ಮಾಡಲಿ: ಖಾದರ್

01/09/2022, 10:49

ಮಂಗಳೂರು(reporterkarnataka.com): ಪ್ರಧಾನಿ ಮೋದಿ ಮಂಗಳೂರಿಗೆ ಆಗಮಿಸುವುದು ತುಂಬಾ ಸಂತೋಷದ ವಿಷಯ. ಪ್ರಧಾನಿ ಆಗಮನ ಹೆಮ್ಮೆಯ ಸಂಗತಿ. ಆದರೆ ಅದಕ್ಕಾಗಿ ಸರಕಾರಿ ಯಂತ್ರ ದುರುಪಯೋಗಪಡಿಸುವುದು ಸರಿಯಲ್ಲ ಎಂದು ಪ್ರತಿಪಕ್ಷದ ನಾಯಕ ಯು.ಟಿ. ಖಾದರ್ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರತಿ ಗ್ರಾಮದಿಂದ 250 ಮಂದಿಯನ್ನು ಕರೆತರುವಂತೆ ಪಿಡಿಓಗಳಿಗೆ ಸೂಚಿಸಲಾಗಿದೆ. ಎರಡು ಜಿಲ್ಲೆಯ ಗ್ರಾಪಂಗಳಿಂದ ಇಷ್ಟೊಂದು ಜನ ಬಂದರೆ ಕಾರ್ಯಕ್ರಮ ನಡೆಯುವ ಮೈದಾನ ಸಾಕಾಗುತ್ತಾ ಎಂದು ಪ್ರಶ್ನಿಸಿದರು.

ಇವರಿಗೆ ಕಾರ್ಯಕ್ರಮ ಮಾಡಲು ಮೈದಾನಕ್ಕಿಂತ ದೊಡ್ಡ ಜಾಗಬೇಕು ಅಂತಾ ಕಾಣಿಸುತ್ತಿದೆ. ಗ್ರಾಪಂ ಕಾರ್ಯದರ್ಶಿ, ಲೈನ್ ಮ್ಯಾನ್, ನೀರು ಬಿಡುವವರಿಗೂ ನೋಟಿಸ್ ಹೋಗಿದೆ.

ಮೋದಿ ಮಂಗಳೂರಿಗೆ ಬರುವುದು ಸಂತೋಷ. ಅದನ್ನು ಸ್ವಾಗತಿಸುತ್ತೇವೆ. ದೇಶದ ಪ್ರಧಾನ ಮಂತ್ರಿ ಜಿಲ್ಲೆಗೆ ಬಂದಾಗ ಜಿಲ್ಲೆಗೆ ಸಿಕ್ಕ ಕೊಡುಗೆ ಬಗ್ಗೆ ಜನರು ನಿರೀಕ್ಷಿತರಾಗಿದ್ದಾರೆ. ಬಿಜೆಪಿ ಪ್ರತಿನಿಧಿಗಳು ಸಾವಿರಾರು ಕೋಟಿ ಯೋಜನೆಗೆ ಬರುತ್ತಿದ್ದಾರೆ ಎಂದು ಹೇಳಿದ್ದಾರೆ. ಸಾವಿರಾರು ಕೋಟಿ ಯೋಜನೆ ಅರ್ಪಿಸುವುದು ಯಾವುದು. ಇದರಲ್ಲಿ ಕೇಂದ್ರ ಮತ್ತು ರಾಜ್ಯದ ಪಾಲು ಎಷ್ಟಿದೆ? ಎಂಬುದು ಗೊತ್ತಾಗಬೇಕು ಎಂದರು.

ಎನ್ಎಂಪಿಟಿ ಹಿಂದೆ ಸರ್ಕಾರದಲ್ಲಿ ಇತ್ತು. ಇದನ್ನು ಈಗ ಕೆಲವು ಉದ್ದಿಮೆದಾರರಿಗೆ ನೀಡಿದ್ದಾರೆ. ಜಿಂದಾಲ್ ಪ್ಯಾಕ್ಟರಿಯ ಜೆ ಎಸ್ ಡಬ್ಲ್ಯು, ಬೇರೆ ಬೇರೆ ಖಾಸಗಿ ಕಂಪೆನಿಯ ದೊಡ್ಡ ದೊಡ್ಡ ಟ್ಯಾಂಕ್, ಪಾಮೋಲಿವ್ ಕಂಪೆನಿಯ ಯೋಜನೆಗೆ ಬರುತ್ತಿದ್ದಾರೆ. ಈ ಯೋಜನೆಗೆ ಸರ್ಕಾರ ದುಡ್ಡು ಹಾಕಿದೆಯೇ? ಎಂಬುದನ್ನು ತಿಳಿಸಬೇಕು. ಯಾರದೋ ಕೆಲಸ ಇವರು ಉದ್ಘಾಟನೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಮಂಗಳೂರು ಏರ್‌ಪೋರ್ಟ್‌ಗೆ ಕೋಟಿ ಚೆನ್ನಯ್ಯ ಏರ್ ಪೋರ್ಟ್ ಎಂದು ಘೋಷಿಸಲಿ. ಇದು ಸರ್ಕಾರದ ದುಡ್ಡಿನಲ್ಲಿ ನಡೆಯುವ ಕಾರ್ಯಕ್ರಮ. ಎಲ್ಲರನ್ನು ಕರೆದರೂ ಶಾಸಕನಾಗಿರುವ ನನ್ನನ್ನು ಕರೆದಿಲ್ಲ. ಆಹ್ವಾನ ಬಂದರೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಆಲೋಚಿಸುತ್ತೇನೆ ಎಂದರು.

ನಾನು ಕಾರ್ಯಕ್ರಮದಲ್ಲಿ ಇದ್ದರೆ ನಮ್ಮನ್ನು ಟೀಕಿಸಲು ಅವರಿಗೆ ಮುಜುಗರ ಆಗುವುದನ್ನು ತಪ್ಪಿಸಲು ಬಹುಷ ನಮ್ಮನ್ನು ಹೊರಗಿಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು