11:14 PM Wednesday31 - December 2025
ಬ್ರೇಕಿಂಗ್ ನ್ಯೂಸ್
ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:…

ಇತ್ತೀಚಿನ ಸುದ್ದಿ

ಮಂಗಳೂರು: ೧೩ನೇ ವರ್ಷದ ‘ಕಾಲ ಕೋಂದೆ-೨೦೨೬’ ತುಳು ಕ್ಯಾಲೆಂಡರ್ ಬಿಡುಗಡೆ

31/12/2025, 23:14

ಮಂಗಳೂರು(reporterkarnataka.com): ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ ಹೊರ ತಂದಿರುವ ‘ಕಾಲ ಕೋಂದೆ-೨೦೨೬’ ತುಳು ಕ್ಯಾಲೆಂಡರ್ ಬಿಡುಗಡೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ನಡೆಯಿತು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿ, ಕಳೆದ ೧೩ ವರ್ಷಗಳಿಂದ ಈ ಕ್ಯಾಲೆಂಡರ್ ಅನ್ನು ಸಾರ್ವಜನಿಕರಿಗೆ ಉಚಿತವಾಗಿ ನೀಡುತ್ತಿರುವುದು ಶ್ಲಾಘನೀಯವಾದುದು. ಪ್ರತಿಯೊಂದು ಕೆಲಸ, ಕಾರ್ಯಕ್ರಮಗಳಿಗೂ ದಿನದ ಮುಹೂರ್ತವನ್ನು ನೋಡುವ ಕ್ರಮ ತುಳುವರದ್ದಾಗಿದೆ. ತುಳುವಿನ ಆಚಾರ ವಿಚಾರ ಉಳಿಸುವತ್ತಲೂ ಪ್ರಮುಖ ಪಾತ್ರ ವಹಿಸಲಿದೆ. ತುಳುವರಿಗೆ ತುಳುವಿನದ್ದೇ ಕ್ಯಾಲೆಂಡರ್ ನಿಂದ ಹೆಚ್ಚು ಅನುಕೂಲವಾಗುತ್ತದೆ. ಈ ಕ್ಯಾಲೆಂಡರ್ ತುಳುವಿನ ದಿನ, ತಿಂಗಳು ಮತ್ತು ಲಿಪಿಯ ಮಾಹಿತಿಯನ್ನು ಕೂಡ ನೀಡುತ್ತದೆ. ಇದರಲ್ಲಿ ಕನ್ನಡ ಮತ್ತು ತುಳು ಎರಡರಲ್ಲೂ ಮಾಹಿತಿಯಿರುವುದರಿಂದ ಈಗಿನ ತಲೆಮಾರಿನವರಿಗೂ ಅನುಕೂಲವಾಗಲಿದೆ. ಇದು ತುಳುವಿಗೆ ದೊಡ್ಡ ಕೊಡುಗೆಯಾಗಿದೆ ಎಂದು ಹೇಳಿದರು.
ಡಿಜಿಟಲ್ ತುಳು ಲಿಪಿ ವಿನ್ಯಾಸಕ ಹಾಗೂ ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿಯ ಡಾ. ಪ್ರವೀಣ್ ರಾಜ್ ಎಸ್. ರಾವ್ ಮಾತನಾಡಿ, ಕಾಲ ಕೋಂದೆ ಕ್ಯಾಲೆಂಡರ್ ತುಳು ನಾಡಿನ ಸರ್ವ ಧರ್ಮೀಯರ ಹಬ್ಬ, ಆಚರಣೆಗಳ ಸಮಗ್ರ ಮಾಹಿತಿಯನ್ನು ನೀಡುತ್ತದೆ. ತುಳು ಲಿಪಿ ತಂತ್ರಾಂಶದ ಸಹಾಯದಿಂದ ಕಳೆದ ೧೨ ವರ್ಷಗಳಿಂದ ಪ್ರತೀ ವರ್ಷ ಈ ಕ್ಯಾಲೆಂಡರ್ ತಯಾರಿಸಲಾಗುತ್ತಿದೆ. ೨೦೦೮ ರಲ್ಲಿ ತುಳುವಿನ ಡಿಜಿಟಲ್ ಅಕ್ಷರಗಳನ್ನು ಸಿದ್ದಪಡಿಸಲಾಗಿದ್ದು, ಅದು ೨೦೦೯ ರಿಂದ ಬಳಕೆಗೆ ಬಂದಿದೆ. ೧೫ ನಾನಾ ಫಾಂಟ್ ಗಳನ್ನು ಸಿದ್ದಪಡಿಸಿದ್ದು, ಅದನ್ನು ಅಕಾಡೆಮಿಗೆ ನೀಡಲಾಗುವುದು. ಇದರಿಂದ ಬಹಳಷ್ಟು ತುಳುವರಿಗೆ ಉಪಯೋಗವಾಗಲಿದೆ ಎಂದು ಹೇಳಿದರು.
ತುಳು ಪರಿಷತ್ ಅಧ್ಯಕ್ಷ ಶುಭೋದಯ ಆಳ್ವ, ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿಯ ತಾಂತ್ರಿಕ ಸಲಹೆಗಾರ ವಿವೇಕ್ ಹಾಗೂ ರಾಮಕೃಷ್ಣ ಎನ್. ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು