1:26 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರು: ೧೩ನೇ ವರ್ಷದ ‘ಕಾಲ ಕೋಂದೆ-೨೦೨೬’ ತುಳು ಕ್ಯಾಲೆಂಡರ್ ಬಿಡುಗಡೆ

31/12/2025, 23:14

ಮಂಗಳೂರು(reporterkarnataka.com): ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ ಹೊರ ತಂದಿರುವ ‘ಕಾಲ ಕೋಂದೆ-೨೦೨೬’ ತುಳು ಕ್ಯಾಲೆಂಡರ್ ಬಿಡುಗಡೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ನಡೆಯಿತು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿ, ಕಳೆದ ೧೩ ವರ್ಷಗಳಿಂದ ಈ ಕ್ಯಾಲೆಂಡರ್ ಅನ್ನು ಸಾರ್ವಜನಿಕರಿಗೆ ಉಚಿತವಾಗಿ ನೀಡುತ್ತಿರುವುದು ಶ್ಲಾಘನೀಯವಾದುದು. ಪ್ರತಿಯೊಂದು ಕೆಲಸ, ಕಾರ್ಯಕ್ರಮಗಳಿಗೂ ದಿನದ ಮುಹೂರ್ತವನ್ನು ನೋಡುವ ಕ್ರಮ ತುಳುವರದ್ದಾಗಿದೆ. ತುಳುವಿನ ಆಚಾರ ವಿಚಾರ ಉಳಿಸುವತ್ತಲೂ ಪ್ರಮುಖ ಪಾತ್ರ ವಹಿಸಲಿದೆ. ತುಳುವರಿಗೆ ತುಳುವಿನದ್ದೇ ಕ್ಯಾಲೆಂಡರ್ ನಿಂದ ಹೆಚ್ಚು ಅನುಕೂಲವಾಗುತ್ತದೆ. ಈ ಕ್ಯಾಲೆಂಡರ್ ತುಳುವಿನ ದಿನ, ತಿಂಗಳು ಮತ್ತು ಲಿಪಿಯ ಮಾಹಿತಿಯನ್ನು ಕೂಡ ನೀಡುತ್ತದೆ. ಇದರಲ್ಲಿ ಕನ್ನಡ ಮತ್ತು ತುಳು ಎರಡರಲ್ಲೂ ಮಾಹಿತಿಯಿರುವುದರಿಂದ ಈಗಿನ ತಲೆಮಾರಿನವರಿಗೂ ಅನುಕೂಲವಾಗಲಿದೆ. ಇದು ತುಳುವಿಗೆ ದೊಡ್ಡ ಕೊಡುಗೆಯಾಗಿದೆ ಎಂದು ಹೇಳಿದರು.
ಡಿಜಿಟಲ್ ತುಳು ಲಿಪಿ ವಿನ್ಯಾಸಕ ಹಾಗೂ ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿಯ ಡಾ. ಪ್ರವೀಣ್ ರಾಜ್ ಎಸ್. ರಾವ್ ಮಾತನಾಡಿ, ಕಾಲ ಕೋಂದೆ ಕ್ಯಾಲೆಂಡರ್ ತುಳು ನಾಡಿನ ಸರ್ವ ಧರ್ಮೀಯರ ಹಬ್ಬ, ಆಚರಣೆಗಳ ಸಮಗ್ರ ಮಾಹಿತಿಯನ್ನು ನೀಡುತ್ತದೆ. ತುಳು ಲಿಪಿ ತಂತ್ರಾಂಶದ ಸಹಾಯದಿಂದ ಕಳೆದ ೧೨ ವರ್ಷಗಳಿಂದ ಪ್ರತೀ ವರ್ಷ ಈ ಕ್ಯಾಲೆಂಡರ್ ತಯಾರಿಸಲಾಗುತ್ತಿದೆ. ೨೦೦೮ ರಲ್ಲಿ ತುಳುವಿನ ಡಿಜಿಟಲ್ ಅಕ್ಷರಗಳನ್ನು ಸಿದ್ದಪಡಿಸಲಾಗಿದ್ದು, ಅದು ೨೦೦೯ ರಿಂದ ಬಳಕೆಗೆ ಬಂದಿದೆ. ೧೫ ನಾನಾ ಫಾಂಟ್ ಗಳನ್ನು ಸಿದ್ದಪಡಿಸಿದ್ದು, ಅದನ್ನು ಅಕಾಡೆಮಿಗೆ ನೀಡಲಾಗುವುದು. ಇದರಿಂದ ಬಹಳಷ್ಟು ತುಳುವರಿಗೆ ಉಪಯೋಗವಾಗಲಿದೆ ಎಂದು ಹೇಳಿದರು.
ತುಳು ಪರಿಷತ್ ಅಧ್ಯಕ್ಷ ಶುಭೋದಯ ಆಳ್ವ, ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿಯ ತಾಂತ್ರಿಕ ಸಲಹೆಗಾರ ವಿವೇಕ್ ಹಾಗೂ ರಾಮಕೃಷ್ಣ ಎನ್. ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು