5:01 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ

ಇತ್ತೀಚಿನ ಸುದ್ದಿ

ಮಂಗಳೂರು ಏರ್ ಪೋರ್ಟ್: ಗುಡುಗು ಮಳೆಗೆ ಲ್ಯಾಂಡ್ ಆಗದೆ ವಾಪಸ್ ಹೋದ 3 ವಿಮಾನಗಳ ಪೈಕಿ ಮತ್ತೆ ಹಿಂತಿರುಗಿದ 2 ಫ್ಲೈಟ್

13/03/2025, 20:32

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು
.

info.reporterkarnataka@gmail.com

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಸಂಜೆ ಸುರಿದ ಗುಡುಗು ಸಹಿತ ಮಳೆಯ ಪರಿಣಾಮ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲು ಸಾಧ್ಯವಾಗದೆ 3 ವಿಮಾನಗಳು ವಾಪಸ್ ಹೋಗಿವೆ. ಅದರಲ್ಲಿ ಎರಡು ವಿಮಾನಗಳು ಮತ್ತೆ ಆಗಮಿಸಿ ಸುರಕ್ಷಿತವಾಗಿ ಲ್ಯಾಂಡ್ ಆಗಿವೆ.
ವಿಮಾನ ನಿಲ್ದಾಣವಿರುವ ಬಜಪೆ ಪ್ರದೇಶದಲ್ಲಿ ದಟ್ಟ ಮೋಡ ಹಾಗೂ ಗುಡುಗು ಸಹಿತ ಮಳೆಯಾದ ಪರಿಣಾಮ ಹೈದರಾಬಾದ್ ನಿಂದ
ಮಂಗಳೂರಿಗೆ ಆಗಮಿಸಿದ ವಿಮಾನ ಇಲ್ಲಿ ಲ್ಯಾಂಡ್ ಆಗಲು ಸಾಧ್ಯವಾಗದೆ ಹೈದರಾಬಾದ್ ಗೆ ವಾಪಸ್ ಹೋಗಿತ್ತು. ಅದರೆ, ಅದು ಮತ್ತೆ ವಾಪಸ್ ಆಗಮಿಸಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ಎರಡು ವಿಮಾನಗಳು ಲ್ಯಾಂಡ್ ಆಗಲು ಸಾಧ್ಯವಾಗದೆ ನೆರೆಯ ಕೇರಳ ರಾಜ್ಯದ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿವೆ. ಅದರಲ್ಲಿ ಒಂದು ವಿಮಾನ ಮತ್ತೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬುಧವಾರ ಸಂಜೆ ದಿಢೀರ್ ಮಳೆಯಾಗಿದೆ. ಕಳೆದ ಒಂದು ವಾರದಿಂದ ಜಿಲ್ಲೆಯ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಮೀರಿದ ಪರಿಣಾಮ ದಿಢೀರ್ ಮಳೆಯಾಗಿದೆ. ಬೆಳ್ತಂಗಡಿಯಲ್ಲಿ ಆಲಿಕಲ್ಲಿನ ಸುರಿಮಳೆಯಾಗಿತ್ತು. ಮಂಗಳೂರಿನ ಬಜಪೆ, ಕಿನ್ನಿಪದವು ಬಳಿ ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿದೆ. ಬಂಟ್ವಾಳದಲ್ಲಿ ಹಲವು ಮರಗಳು, ವಿದ್ಯುತ್‌ ಕಂಬಗಳು ಧರೆಗೆ ಉರುಳಿವೆ. ಸುಳ್ಯ, ಕಡಬ ಭಾಗದಲ್ಲಿ ಮಳೆಯಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು