12:46 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಮಂಗಳೂರು: ಕಥೋಲಿಕ್ ಉದ್ಯಮಿ, ವೃತ್ತಿಪರ, ಕೃಷಿ ಕ್ಷೇತ್ರದ ಸಾಧಕರಿಗೆ ರಚನಾ ಪ್ರಶಸ್ತಿ ಪ್ರದಾನ

06/10/2025, 21:27

ಮಂಗಳೂರು(reporterkarnataka.com): ಕಥೋಲಿಕ್ ಉದ್ಯಮಿ, ವೃತ್ತಿಪರ ಹಾಗೂ ಕೃಷಿ ಕ್ಷೇತ್ರದ ಸಾಧಕರಿಗೆ ನೀಡುವ ರಚನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಗರದ ಮಿಲಾಗ್ರಿಸ್ ಸಭಾಂಗಣದಲ್ಲಿ ನೆರವೇರಿತು.


ಸಮಾರಂಭದಲ್ಲಿ ಐವರು ಸಾಧಕರಾದ ವೃತ್ತಿಪರ ಕ್ಷೇತ್ರದಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೋ, ಉದ್ಯಮ ಕ್ಷೇತ್ರದಲ್ಲಿ ಬೆಂಗಳೂರಿನ ಆಸ್ಟಿನ್ ರೋಚ್, ಕೃಷಿ ಕ್ಷೇತ್ರದಲ್ಲಿ ಮಂಗಳೂರಿನ ಡಾ| ಗಾಡ್ವಿನ್ ರೊಡ್ರಿಗಸ್ ಬೆಳ್ವಾಯಿ, ಅನಿವಾಸಿ ಉದ್ಯಮಿ ದುಬೈಯ ಪ್ರತಾಪ್ ಮೆಂಡೋನ್ಸಾ, ಮಹಿಳಾ ಸಾಧಕಿ ಶೋಭಾ ಮೆಂಡೊನ್ಸಾ ಅವರಿಗೆ 2023-25ನೇ ಸಾಲಿನ ರಚನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ವೇಳೆ ಇಂಧನ ಸಚಿವ ಕೆ.ಜೆ. ಜಾರ್ಜ್ ಮಾತನಾಡಿ, “ಸಾಧನೆ ಮಾಡಬೇಕೆಂದು ಅನೇಕರು ಪ್ರಯತ್ನಿಸುತ್ತಾರೆ. ಎಲ್ಲರಿಗೂ ಕೈಗೂಡುವುದಿಲ್ಲ. ಆದರೆ, ಅವರನ್ನು ಗುರುತಿಸಿ ಗೌರವಿಸುವುದು ಮುಖ್ಯವಾಗಿದೆ. ರಚನಾ ಸಂಸ್ಥೆ ಸೂಕ್ತ ಸಾಧಕರನ್ನೇ ಆಯ್ದುಕೊಂಡು ಗೌರವಿಸಿದೆ. ಸೂಕ್ತ ವ್ಯಕ್ತಿಗಳಿಗೆ ಪ್ರಶಸ್ತಿ ನೀಡುವ ಮೂಲಕ ಪ್ರಶಸ್ತಿಗೆ ಮತ್ತಷ್ಟು ಗೌರವ ಹೆಚ್ಚಾಗುವ ಜೊತೆಗೆ ಪುರಸ್ಕೃತರ ಜವಾಬ್ದಾರಿ ಹೆಚ್ಚಿದೆ. ದೇಶಕ್ಕೆ ಕೊಂಕಣಿ ಕೆಥೋಲಿಕರ ಕೊಡುಗೆ ಅವಿಸ್ಮರಣೀಯ. ರಾಜಕೀಯದಲ್ಲೂ ಕೊಂಕಣಿ ಕೆಥೋಲಿಕರು ಸಾಕಷ್ಟು ಸೇವೆ ನೀಡಿದ್ದಾರೆ. ಕ್ರೈಸ್ತರ ಉತ್ತಮ ಸೇವೆಯಿಂದಾಗಿ ಸಮುದಾಯವನ್ನು ಗುರುತಿಸುವ ಕೆಲಸವಾಗುತ್ತಿದೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಧರ್ಮಧ್ಯಕ್ಷರಾದ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ, ಕೆಥೊಲಿಕ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ಅಧ್ಯಕ್ಷ ಜಾನ್ ಬಿ. ಮೊಂತೇರೊ, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಉದ್ಯಮಿ ಜಾನ್ ಸುನಿಲ್, ಬೆಂಗಳೂರು ವಿ.ವಿ. ಮಾಜಿ ಕುಲಪತಿ, ಡೀನ್ ಮತ್ತು ನಿರ್ದೇಶಕಿ ಡಾ| ಸಿಂಥಿಯಾ ಮಿನೇಜಸ್, ರಚನಾ ಸಂಸ್ಥೆಯ ಕಾರ್ಯದರ್ಶಿ ವಿಜಯ್ ವಿ. ಲೋಬೋ, ಕೋಶಾಧಿಕಾರಿ ನೆಲ್ಸನ್ ಮೊಂತೇರೊ, ಉಪಾಧ್ಯಕ್ಷ ನವೀನ್ ಲೋಬೋ, ಸಂಘಟಕರಾದ ಯುಲಾಲಿಯಾ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು