7:34 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಮಂಗಳೂರು ದಕ್ಷಿಣ: ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೋ ಅಖಾಡಕ್ಕೆ; ಮತದಾರರ ಚಿತ್ತ ಎತ್ತ?

15/04/2023, 21:14

ಮಂಗಳೂರು(reporterkarnataka.com): ಬಹು ನಿರೀಕ್ಷಿತ ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೊನೆಗೂ ಘೋಷಣೆಯಾಗಿದೆ. ಡಜನಿಗೂ ಅಧಿಕ ಅಭ್ಯರ್ಥಿ ಗಳ ನಡುವಿನ ಹಗ್ಗ ಜಗ್ಗಾಟದಲ್ಲಿ ಕೊನೆಗೂ ಟಿಕೆಟ್ ಮಾಜಿ ಶಾಸಕ ಜೆ.ಆರ್. ಲೋಬೋ ಅವರ ಪಾಲಾಗಿದೆ. ಬಿಜೆಪಿ ಈಗಾಗಲೇ ಹಾಲಿ ಶಾಸಕ ವೇದವ್ಯಾಸ ಕಾಮತ್ ಅವರಿಗೆ ಟಿಕೆಟ್ ಘೋಷಿಸಿದೆ. ಕಾಂಗ್ರೆಸ್ ಟಿಕೆಟ್ ಘೋಷಣೆಯೊಂದಿಗೆ ಇದೀಗ ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಕ್ಲಾರಿಟಿ ದೊರಕಿದೆ. ಹಾಗೆ ಜೆಡಿಎಸ್ ನಿಂದ ಡಾ. ಸುಮತಿ ಹೆಗ್ಡೆ ಸ್ಪರ್ಧಿಸಲಿದ್ದಾರೆ. ಆಮ್ ಆದ್ಮಿ ಪಾರ್ಟಯಿಂದ ಸಂತೋಷ್ ಕಾಮತ್ ಅವರಿಗೆ ಈಗಾಗಲೇ ಟಿಜೆಟ್ ಲಭಿಸಿದೆ.

ಮಂಗಳೂರು ದಕ್ಷಿಣದ ಕ್ಷೇತ್ರದ ಚುನಾವಣಾ ರಂಗು ಬದಲಾಗಿದೆ. ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರು ಎರಡನೇ ಅವಧಿಗೆ ಸ್ಪರ್ಧಿಸುತ್ತಿದ್ದಾರೆ. 2013ರಲ್ಲಿ ಶಾಸಕರಾಗಿ ಆಯ್ಕೆಗೊಂಡಿದ್ದ ಕಾಂಗ್ರೆಸ್ ನ ಲೋಬೊ ಅವರು 2018ರ ಚುನಾವಣೆಯಲ್ಲಿ ಆಕಸ್ಮಿಕವಾಗಿ ಸೋಲು ಅನುಭವಿಸಿದ್ದರು. ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ನಡೆಸಿ, ಮಂಗಳೂರು ನಗರಕ್ಕೆ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನಗೊಳ್ಳುವಲ್ಲಿ ಲೋಬೊ ಅವರು ಪ್ರಮುಖ ಪಾತ್ರ ವಹಿಸಿದ್ದರು. ಲೋಬೊ ಅವರ ಅಭಿವೃದ್ಧಿ ಕಾರ್ಯವನ್ನು ಅವರ ರಾಜಕೀಯ ವಿರೋಧಿಗಳು ಕೂಡ ಒಪ್ಪಿಕೊಳ್ಳುತ್ತಾರೆ.
ಮಂಗಳೂರು ಮಹಾನಗರಪಾಲಿಕೆಯ ಕಮಿಷನರ್ ಆಗಿ ಕಾರ್ಯನಿರ್ವಹಿಸಿದ ಓರ್ವ ಸರಕಾರಿ ಅಧಿಕಾರಿಯಾಗಿದ್ದ ಲೋಬೊ ಅವರು ರಾಜಕೀಯಕ್ಕೆ ಬಂದಿರುವುದು ಕೂಡ ಆಕಸ್ಮಿಕವೇ.
ಜೆ.ಆರ್.ಲೋಬೊ ಅವರು ಹೆಚ್ಚು ಮಾತನಾಡಲಾರರು. ಕಡಿಮೆ ಮಾತನಾಡಿ ಹೆಚ್ಚು ಕೆಲಸ ಮಾಡುವ ಛಾತಿ ಅವರದ್ದು. ಅಧಿಕಾರಿಯಾಗಿದ್ದಾಗಲೂ, ನಂತರ ಶಾಸಕರಾದ ಬಳಿಕವೂ ಅವರದ್ದು ಮಿತವಾದ ಮಾತು. ಯಾವುದೇ ಹಿಂಬಾಲಕರನ್ನು ಕಟ್ಟಿಕೊಳ್ಳದೆ ಸದ್ದುಗದ್ದಲವಿಲ್ಲದ ತಿರುಗಾಡುವ ಜಾಯಮಾನ ಅವರದ್ದು. ಲೋಬೊ ಅವರ ಈ ಗುಣಗಳನ್ನೇ ಮತದಾರರು ಹೆಚ್ಚು ಇಷ್ಟಪಡುತ್ತಾರೆ.
2018ರ ಚುನಾವಣೆಯ ವೇಳೆ ನಡೆದ ಕೆಲವೊಂದು ವಿದ್ಯಮಾನ ಲೋಬೊ ಅವರ ಹಿನ್ನಡೆಗೆ ಕಾರಣವಾಗಿತ್ತು. ಆದರೆ ಈಗ ಅಂತಹ ಪರಿಸ್ಥಿತಿ ಇಲ್ಲವೆಂದು ಅವರ ಅಭಿಮಾನಿಗಳು ಹೇಳುತ್ತಾರೆ. ಅವರನ್ನು ಸೋಲಿಸಿದ ಮತದಾರರೇ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಟ್ಟದುಂಟು.
ಇದೀಗ ಲೋಬೊ ಅವರಿಗೆ ಕಾಂಗ್ರೆಸ್ ನಿಂದ ಮೂರನೇ ಬಾರಿ ಸ್ಪರ್ಧಿಸಲು ಅವಕಾಶ ದೊರಕಿಗೆ. ಎರಡನೇ ಬಾರಿ ಸ್ಪರ್ಧಿಸುತ್ತಿರುವ ಹಾಲಿ ಶಾಸಕ ವೇದವ್ಯಾಸ ಕಾಮತ್ ಅವರು ಪ್ರಮುಖ ಎದುರಾಳಿ. ಗೆಲುವು ಯಾರಿಗೆ ಎಂಬುದನ್ನು ಮೇ 13ರ ವರೆಗೆ ಕಾದು ನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು