3:11 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಮಂಗಳೂರು: ದೀಪಾವಳಿ ದಿನವೇ ರಥಬೀದಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ಟೂರ್ ಮೆನೇಜರ್ ಭೀಕರ ಕೊಲೆ

04/11/2021, 12:02

ಮಂಗಳೂರು(reporterkarnataka.com):

ನಗರದ ಕಾರ್ ಸ್ಟ್ರೀಟ್ ನ ಅಪಾರ್ಟ್ ವೊಂದರಲ್ಲಿ ಬುಧವಾರ ರಾತ್ರಿ ವಿನಾಯಕ ಕಾಮತ್ ಎಂಬುವರನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ. ಅದೇ ಅಪಾರ್ಟ್ ಮೆಂಟಿನ ನಿವಾಸಿಗಳಾದ ಕೃಷ್ಣಾನಂದ ಕಿಣಿ ಹಾಗೂ ಅವರ ಮಗ ಅವಿನಾಶ್ ಕಿಣಿ ಚೂರಿಯಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ಮೃತರ ಪತ್ನಿ ಅಮಣಿ ಕಾಮತ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಕಾರ್ ಸ್ಟ್ರೀಟ್ ನ ವೀರವೆಂಕಟೇಶ ಅಪಾರ್ಟ್ ಮೆಂಟ್  ಈ ಹತ್ಯೆ ನಡೆದಿದೆ. ವಿನಾಯಕ ಕಾಮತ್  ಎಂಬವರು ಪತ್ನಿ ಅಮಣಿ ಕಾಮತ್, ಪುತ್ರ ಮೂರುವರೆ ವರ್ಷ ಪ್ರಾಯದ ಉತ್ತಮ ಕಾಮತ್ ಹಾಗೂ ಅತ್ತೆ ವಿಜಯಲಕ್ಷ್ಮೀ ಕಾಮತ್ ಅವರ ಜತೆ ಕಳೆದ 5 ವರ್ಷಗಳಿಂದ ಇದೇ ಅಪಾರ್ಟ್ ಮೆಂಟ್ ನಲ್ಲಿ ವಾಸಿಸುತ್ತಿದ್ದರು. ಕೊಲೆ ಆರೋಪಿಗಳಾದ ಕೃಷ್ಣಾನಂದ ಕಿಣಿ ಹಾಗೂ ಅವರ ಪುತ್ರ ಅವಿನಾಶ್ ಕಿಣಿ ಕೂಡ ಇದೇ ಅಪಾರ್ಟ್ ಮೆಂಟ್ ನ ನಿವಾಸಿಗಳಾಗಿದ್ದಾರೆ. ವಿಕ್ರಮ ಟ್ರಾವೆಲ್ಸ್ ನಲ್ಲಿ ಟೂರ್ ಮೆನೇಜರ್ ಆಗಿರುವ ವಿನಾಯಕ

ಕಾಮತ್ ಅವರ ಜತೆ ಆರೋಪಿಗಳು ಈ ಹಿಂದೆ ಕ್ಷುಲ್ಲಕ ವಿಷಯಕ್ಕೆ ಜಗಳವಾಡಿದ್ದರು. ಬುಧವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಅಪಾರ್ಟ್ ಮೆಂಟ್ ನವರು ಕೆಳಗಡೆ ಪಟಾಕಿ ಸಿಡಿಸುತ್ತಿದ್ದಾಗ ವಿನಾಯಕ ಕಾಮತ್ ಕೂಡ ಅಲ್ಲಿಗೆ ಹೋಗಿದ್ದರು. ಇದೇ ವೇಳೆ ಕೃಷ್ಣಾನಂದ ಕಿಣಿ ಹಾಗೂ ಅವಿನಾಶ್ ಕಿಣಿ ಅವರು ಕಾರ್ ಪಾರ್ಕಿಂಗ್ ಸ್ಥಳದಲ್ಲಿ

ವಿನಾಯಕ ಕಾಮತ್ ಜತೆ ಜಗಳವಾಡಿ ಚೂರಿಯಿಂದ ಇರಿದ್ದಾರೆ. ತೀವ್ರ ಗಾಯಗೊಂಡ ವಿನಾಯಕ ಕಾಮತ್ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 1.30ರ ವೇಳೆಗೆ ಮೃತಪಟ್ಟಿದ್ದಾರೆ.

ಕೃಷ್ಣಾನಂದ ಕಿಣಿ ಹಾಗೂ ಅವಿನಾಶ್ ಕಿಣಿ ಅವರು ಕೊಲೆ ಮಾಡುವ ಉದ್ದೇಶದಿಂದಲೇ ವಿನಾಯಕ ಕಾಮತ್ ಜತೆ ಜಗಳವಾಡಿ ಚೂರಿಯಿಂದ ಇರಿದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು