7:36 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಜ.18: ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ ಕ್ರೀಡೋತ್ಸವ: ಶಿವರಾಜ್‌ಕುಮಾರ್ ಸೇರಿದಂತೆ ತಾರೆಯರ ದಂಡು

15/01/2026, 17:23

ಮಂಗಳೂರು(reporterkarnataka.com): ಅಖಿಲ ಭಾರತೀಯ ಬಿಲ್ಲವರ ಯೂನಿಯನ್ ಆಶ್ರಯದಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ ಕ್ರೀಡೋತ್ಸವವು ಜ.18ರಂದು ಬೆಳಗ್ಗೆ 9 ಗಂಟೆಯಿಂದ ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆಯಲಿದೆ.
ಅಖಿಲ ಭಾರತೀಯ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈ ವಿಷಯ ತಿಳಿಸಿದರು.
ಅಂದು ಬೆಳಗ್ಗೆ 7.30ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ನೆಹರೂ ಮೈದಾನದವರೆಗೆ ಕ್ರೀಡಾ ಜ್ಯೋತಿ ಮೆರವಣಿಗೆ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದ್ದು, ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ ಎಂದು ಹೇಳಿದರು.
ತಾರಾ ಆಕರ್ಷಣೆಯಾಗಿ ಡಾ. ಶಿವರಾಜ್‌ಕುಮಾರ್, ವಿಜಯ ರಾಘವೇಂದ್ರ, ಧನ್ಯ ರಾಮ್‌ಕುಮಾರ್, ಯುವ ರಾಜ್‌ಕುಮಾರ್, ಪೃಥ್ವಿ ಅಂಬರ್ ಹಾಗೂ ಅನುಶ್ರೀ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಸಂಜೆ 5.30ಕ್ಕೆ ಪ್ರಕಾಶ್ ಮಹಾದೇವನ್ ಹಾಗೂ ತಂಡದಿಂದ ಸಂಗೀತ ರಸಮಂಜರಿ ನಡೆಯಲಿದೆ ಎಂದು ನವೀನ್ ಚಂದ್ರ ಸುವರ್ಣ ಮಾಹಿತಿ ನೀಡಿದರು.
ಯುವ ಸಮುದಾಯವನ್ನು ಸಂಘಟಿಸುವ ಉದ್ದೇಶದೊಂದಿಗೆ ಈ ಜಾಗತಿಕ ಕ್ರೀಡೋತ್ಸವವನ್ನು ಆಯೋಜಿಸಲಾಗಿದ್ದು, ಬೆಳಗ್ಗೆ 8 ಗಂಟೆಗೆ ವಿಶ್ವಕಪ್ ಮಹಿಳಾ ಕಬಡ್ಡಿಯಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಅವರ ನೇತೃತ್ವದಲ್ಲಿ ಕ್ರೀಡಾ ಜ್ಯೋತಿ ಮೆರವಣಿಗೆ ಕುದ್ರೋಳಿಯಿಂದ ನಾರಾಯಣ ಗುರು ವೃತ್ತ, ಲಾಲ್‌ಭಾಗ್, ಕೆ.ಎಸ್. ರಾವ್ ರಸ್ತೆ ಮೂಲಕ ನೆಹರೂ ಮೈದಾನ ತಲುಪಲಿದೆ ಎಂದರು.
ಬೆಳಗ್ಗೆ 9 ಗಂಟೆಗೆ ದಾಮೋದರ ಆರ್. ಸುವರ್ಣ ವೇದಿಕೆಯಲ್ಲಿ ಸಾಗರ್ ಗ್ರೂಪ್ ಆಫ್ ಹೋಟೆಲ್ಸ್‌ನ ಛೇರ್‌ಮ್ಯಾನ್ ಜಯರಾಮ್ ಬನಾನ್ ಹಾಗೂ ಪೂಜಾರಿ ಫಿಶ್ ಲ್ಯಾಂಡ್‌ನ ಮಾಲಿಕ ಎಲ್. ಸುಧಾಕರ ಪೂಜಾರಿ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ಮಹಿಳೆಯರಿಗೆ ತ್ರೋಬಾಲ್ ಹಾಗೂ ಹಗ್ಗಜಗ್ಗಾಟ, ಪುರುಷರಿಗೆ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಸೇರಿದಂತೆ ಮಕ್ಕಳಿಗೂ ಮಹಿಳೆಯರಿಗೂ ವಿವಿಧ ಕ್ರೀಡಾವಳಿಗಳು ನಡೆಯಲಿವೆ ಎಂದು ಅವರು ನುಡಿದರು.
*ಸಮಾರೋಪ:* ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಣೆ ನಡೆಯಲಿದ್ದು, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಕೇಂದ್ರ ಸಚಿವ ಶ್ರೀಪಾದ್ ನಾಯಕ್, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಸಚಿವ ಮಧು ಬಂಗಾರಪ್ಪ, ಸಂಸದರು ಕೋಟ ಶ್ರೀನಿವಾಸ ಪೂಜಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಶಾಸಕರು ಹಾಗೂ ಚಿತ್ರರಂಗ-ಕ್ರೀಡಾ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಯೂನಿಯನ್ ಸಂಚಾಲಕ ಸದಾನಂದ ಪೂಜಾರಿ, ಖಜಾಂಚಿ ಜಯಪ್ರಕಾಶ್, ಮಹಿಳಾ ವಿಭಾಗದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ, ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು