1:50 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮಂಗಳೂರು: ಈಶ್ವರೀಯ ವಿಶ್ವವಿದ್ಯಾಲಯದಿಂದ ಆಶಾ ಕಾರ್ಯಕರ್ತೆಯರಿಗೆ ‘ವೃದ್ಧರಿಗೆ ಆರೋಗ್ಯ ಆರೈಕೆ’ ತರಬೇತಿ ಕಾರ್ಯಕ್ರಮ

16/03/2025, 11:58

ಮಂಗಳೂರು(reporterkarnataka.com): ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ, ಮಂಗಳೂರು ವತಿಯಿಂದ ನಗರದ ಉರ್ವ ಸ್ಟೋರ್ ನಲ್ಲಿರುವ ಬ್ರಹ್ಮಾಕುಮಾರಿಸ್ ಸಭಾಂಗಣದಲ್ಲಿ ಆಶಾ ಕಾರ್ಯಕರ್ತೆಯರಿಗೆ “ವೃದ್ಧರಿಗೆ ಆರೋಗ್ಯ ಆರೈಕೆ” ತರಬೇತಿ ಕಾರ್ಯಕ್ರಮವನ್ನು ಏರ್ಪಾಡು ಮಾಡಲಾಯಿತು. 200 ಆಶಾ ಕಾರ್ಯಕರ್ತೆಯರು ಭಾಗವಹಿಸಿದರು.
ತರಬೇತಿ ಕಾರ್ಯಕ್ರಮವನ್ನು ಬ್ರಹ್ಮಾಕುಮಾರಿಸ್ ಸಂಸ್ಥೆಯ ಪ್ರಧಾನ ಕಚೇರಿ ಮೌಂಟ್ ಅಬುವಿನಿಂದ ಆಗಮಿಸಿದ ಹಿರಿಯ ವೈದ್ಯಾಧಿಕಾರಿ ಡಾ.ಮಹೇಶ್ ಹೇಮಾದ್ರಿ ಅವರು ನೆರವೇರಿಸಿದರು. ಮೂಲತಃ ಕರ್ನಾಟಕದವರಾದ ಅವರು 30 ವರ್ಷಗಳಿಂದ ತನ್ನ ಜೀವನವನ್ನು ಜನಮಾನಸದ ಸೇವೆಗಾಗಿ ಮೌಂಟ್ ಅಬು ವಿನಲ್ಲಿ ಸಮರ್ಪಣೆ ಮಾಡಿರುವರು.
ತರಬೇತಿಯಲ್ಲಿ ಹಿರಿಯ ನಾಗರಿಕರ ಆರೈಕೆ, ಸಮತೋಲಿತ ಆಹಾರ, ಪಾನೀಯಗಳ ಮಾಹಿತಿಯ ಜೊತೆಗೆ ವೃದ್ಧರಲ್ಲಿ ಬರುವ ಸಾಮಾನ್ಯ ಮಾನಸಿಕ ಶಾರೀರಿಕ ತೊಂದರೆಯನ್ನು ಗುರುತಿಸುವುದು, ಇದರ ಕುರಿತಾಗಿ ಸಮಗ್ರ ಮಾಹಿತಿ ಯನ್ನು ನೀಡಲಾಯಿತು.
ಕಾರ್ಯಕ್ರಮದ ದೀಪ ಪ್ರಜ್ವಲನೆಯಲ್ಲಿ ಡಾ. ಜಯಶ್ರೀ, (ವೈದ್ಯಾಧಿಕಾರಿಗಳು, ಬಿಜೈ ಪ್ರಾಥಮಿಕ ಆರೋಗ್ಯ ಶಿಕ್ಷಣ ಕೇಂದ್ರ), ಜ್ಯೋತಿ (ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ), ಮಮತಾ, (ಜಿಲ್ಲಾ ಆಶಾ ಕಾರ್ಯಕರ್ತೆಯರ ಮೇಲ್ವಿಚಾರಕಿ) ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಬಿ. ಕೆ. ವಿಶ್ವೇಶ್ವರಿ ಈಶ್ವರೀಯ ಸಂದೇಶ ನೀಡಿದರು. ಬಿ. ಕೆ. ಆನಂದ್ ಸ್ವಾಗತಿಸಿದರು. ಬಿ.ಕೆ. ರಶ್ಮಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು