5:14 PM Saturday17 - January 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ…

ಇತ್ತೀಚಿನ ಸುದ್ದಿ

ಮಂಗಳೂರು: ಈಶ್ವರೀಯ ವಿಶ್ವವಿದ್ಯಾಲಯದಿಂದ ಆಶಾ ಕಾರ್ಯಕರ್ತೆಯರಿಗೆ ‘ವೃದ್ಧರಿಗೆ ಆರೋಗ್ಯ ಆರೈಕೆ’ ತರಬೇತಿ ಕಾರ್ಯಕ್ರಮ

16/03/2025, 11:58

ಮಂಗಳೂರು(reporterkarnataka.com): ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ, ಮಂಗಳೂರು ವತಿಯಿಂದ ನಗರದ ಉರ್ವ ಸ್ಟೋರ್ ನಲ್ಲಿರುವ ಬ್ರಹ್ಮಾಕುಮಾರಿಸ್ ಸಭಾಂಗಣದಲ್ಲಿ ಆಶಾ ಕಾರ್ಯಕರ್ತೆಯರಿಗೆ “ವೃದ್ಧರಿಗೆ ಆರೋಗ್ಯ ಆರೈಕೆ” ತರಬೇತಿ ಕಾರ್ಯಕ್ರಮವನ್ನು ಏರ್ಪಾಡು ಮಾಡಲಾಯಿತು. 200 ಆಶಾ ಕಾರ್ಯಕರ್ತೆಯರು ಭಾಗವಹಿಸಿದರು.
ತರಬೇತಿ ಕಾರ್ಯಕ್ರಮವನ್ನು ಬ್ರಹ್ಮಾಕುಮಾರಿಸ್ ಸಂಸ್ಥೆಯ ಪ್ರಧಾನ ಕಚೇರಿ ಮೌಂಟ್ ಅಬುವಿನಿಂದ ಆಗಮಿಸಿದ ಹಿರಿಯ ವೈದ್ಯಾಧಿಕಾರಿ ಡಾ.ಮಹೇಶ್ ಹೇಮಾದ್ರಿ ಅವರು ನೆರವೇರಿಸಿದರು. ಮೂಲತಃ ಕರ್ನಾಟಕದವರಾದ ಅವರು 30 ವರ್ಷಗಳಿಂದ ತನ್ನ ಜೀವನವನ್ನು ಜನಮಾನಸದ ಸೇವೆಗಾಗಿ ಮೌಂಟ್ ಅಬು ವಿನಲ್ಲಿ ಸಮರ್ಪಣೆ ಮಾಡಿರುವರು.
ತರಬೇತಿಯಲ್ಲಿ ಹಿರಿಯ ನಾಗರಿಕರ ಆರೈಕೆ, ಸಮತೋಲಿತ ಆಹಾರ, ಪಾನೀಯಗಳ ಮಾಹಿತಿಯ ಜೊತೆಗೆ ವೃದ್ಧರಲ್ಲಿ ಬರುವ ಸಾಮಾನ್ಯ ಮಾನಸಿಕ ಶಾರೀರಿಕ ತೊಂದರೆಯನ್ನು ಗುರುತಿಸುವುದು, ಇದರ ಕುರಿತಾಗಿ ಸಮಗ್ರ ಮಾಹಿತಿ ಯನ್ನು ನೀಡಲಾಯಿತು.
ಕಾರ್ಯಕ್ರಮದ ದೀಪ ಪ್ರಜ್ವಲನೆಯಲ್ಲಿ ಡಾ. ಜಯಶ್ರೀ, (ವೈದ್ಯಾಧಿಕಾರಿಗಳು, ಬಿಜೈ ಪ್ರಾಥಮಿಕ ಆರೋಗ್ಯ ಶಿಕ್ಷಣ ಕೇಂದ್ರ), ಜ್ಯೋತಿ (ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ), ಮಮತಾ, (ಜಿಲ್ಲಾ ಆಶಾ ಕಾರ್ಯಕರ್ತೆಯರ ಮೇಲ್ವಿಚಾರಕಿ) ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಬಿ. ಕೆ. ವಿಶ್ವೇಶ್ವರಿ ಈಶ್ವರೀಯ ಸಂದೇಶ ನೀಡಿದರು. ಬಿ. ಕೆ. ಆನಂದ್ ಸ್ವಾಗತಿಸಿದರು. ಬಿ.ಕೆ. ರಶ್ಮಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು