8:31 PM Thursday23 - April 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ…

ಇತ್ತೀಚಿನ ಸುದ್ದಿ

ಮಂಗಳೂರು: ಈಶ್ವರೀಯ ವಿಶ್ವವಿದ್ಯಾಲಯದಿಂದ ಆಶಾ ಕಾರ್ಯಕರ್ತೆಯರಿಗೆ ‘ವೃದ್ಧರಿಗೆ ಆರೋಗ್ಯ ಆರೈಕೆ’ ತರಬೇತಿ ಕಾರ್ಯಕ್ರಮ

16/03/2025, 11:58

ಮಂಗಳೂರು(reporterkarnataka.com): ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ, ಮಂಗಳೂರು ವತಿಯಿಂದ ನಗರದ ಉರ್ವ ಸ್ಟೋರ್ ನಲ್ಲಿರುವ ಬ್ರಹ್ಮಾಕುಮಾರಿಸ್ ಸಭಾಂಗಣದಲ್ಲಿ ಆಶಾ ಕಾರ್ಯಕರ್ತೆಯರಿಗೆ “ವೃದ್ಧರಿಗೆ ಆರೋಗ್ಯ ಆರೈಕೆ” ತರಬೇತಿ ಕಾರ್ಯಕ್ರಮವನ್ನು ಏರ್ಪಾಡು ಮಾಡಲಾಯಿತು. 200 ಆಶಾ ಕಾರ್ಯಕರ್ತೆಯರು ಭಾಗವಹಿಸಿದರು.
ತರಬೇತಿ ಕಾರ್ಯಕ್ರಮವನ್ನು ಬ್ರಹ್ಮಾಕುಮಾರಿಸ್ ಸಂಸ್ಥೆಯ ಪ್ರಧಾನ ಕಚೇರಿ ಮೌಂಟ್ ಅಬುವಿನಿಂದ ಆಗಮಿಸಿದ ಹಿರಿಯ ವೈದ್ಯಾಧಿಕಾರಿ ಡಾ.ಮಹೇಶ್ ಹೇಮಾದ್ರಿ ಅವರು ನೆರವೇರಿಸಿದರು. ಮೂಲತಃ ಕರ್ನಾಟಕದವರಾದ ಅವರು 30 ವರ್ಷಗಳಿಂದ ತನ್ನ ಜೀವನವನ್ನು ಜನಮಾನಸದ ಸೇವೆಗಾಗಿ ಮೌಂಟ್ ಅಬು ವಿನಲ್ಲಿ ಸಮರ್ಪಣೆ ಮಾಡಿರುವರು.
ತರಬೇತಿಯಲ್ಲಿ ಹಿರಿಯ ನಾಗರಿಕರ ಆರೈಕೆ, ಸಮತೋಲಿತ ಆಹಾರ, ಪಾನೀಯಗಳ ಮಾಹಿತಿಯ ಜೊತೆಗೆ ವೃದ್ಧರಲ್ಲಿ ಬರುವ ಸಾಮಾನ್ಯ ಮಾನಸಿಕ ಶಾರೀರಿಕ ತೊಂದರೆಯನ್ನು ಗುರುತಿಸುವುದು, ಇದರ ಕುರಿತಾಗಿ ಸಮಗ್ರ ಮಾಹಿತಿ ಯನ್ನು ನೀಡಲಾಯಿತು.
ಕಾರ್ಯಕ್ರಮದ ದೀಪ ಪ್ರಜ್ವಲನೆಯಲ್ಲಿ ಡಾ. ಜಯಶ್ರೀ, (ವೈದ್ಯಾಧಿಕಾರಿಗಳು, ಬಿಜೈ ಪ್ರಾಥಮಿಕ ಆರೋಗ್ಯ ಶಿಕ್ಷಣ ಕೇಂದ್ರ), ಜ್ಯೋತಿ (ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ), ಮಮತಾ, (ಜಿಲ್ಲಾ ಆಶಾ ಕಾರ್ಯಕರ್ತೆಯರ ಮೇಲ್ವಿಚಾರಕಿ) ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಬಿ. ಕೆ. ವಿಶ್ವೇಶ್ವರಿ ಈಶ್ವರೀಯ ಸಂದೇಶ ನೀಡಿದರು. ಬಿ. ಕೆ. ಆನಂದ್ ಸ್ವಾಗತಿಸಿದರು. ಬಿ.ಕೆ. ರಶ್ಮಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು