10:43 AM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಮಂಗಳೂರು: ಈಶ್ವರೀಯ ವಿಶ್ವವಿದ್ಯಾಲಯದಿಂದ ಆಶಾ ಕಾರ್ಯಕರ್ತೆಯರಿಗೆ ‘ವೃದ್ಧರಿಗೆ ಆರೋಗ್ಯ ಆರೈಕೆ’ ತರಬೇತಿ ಕಾರ್ಯಕ್ರಮ

16/03/2025, 11:58

ಮಂಗಳೂರು(reporterkarnataka.com): ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ, ಮಂಗಳೂರು ವತಿಯಿಂದ ನಗರದ ಉರ್ವ ಸ್ಟೋರ್ ನಲ್ಲಿರುವ ಬ್ರಹ್ಮಾಕುಮಾರಿಸ್ ಸಭಾಂಗಣದಲ್ಲಿ ಆಶಾ ಕಾರ್ಯಕರ್ತೆಯರಿಗೆ “ವೃದ್ಧರಿಗೆ ಆರೋಗ್ಯ ಆರೈಕೆ” ತರಬೇತಿ ಕಾರ್ಯಕ್ರಮವನ್ನು ಏರ್ಪಾಡು ಮಾಡಲಾಯಿತು. 200 ಆಶಾ ಕಾರ್ಯಕರ್ತೆಯರು ಭಾಗವಹಿಸಿದರು.
ತರಬೇತಿ ಕಾರ್ಯಕ್ರಮವನ್ನು ಬ್ರಹ್ಮಾಕುಮಾರಿಸ್ ಸಂಸ್ಥೆಯ ಪ್ರಧಾನ ಕಚೇರಿ ಮೌಂಟ್ ಅಬುವಿನಿಂದ ಆಗಮಿಸಿದ ಹಿರಿಯ ವೈದ್ಯಾಧಿಕಾರಿ ಡಾ.ಮಹೇಶ್ ಹೇಮಾದ್ರಿ ಅವರು ನೆರವೇರಿಸಿದರು. ಮೂಲತಃ ಕರ್ನಾಟಕದವರಾದ ಅವರು 30 ವರ್ಷಗಳಿಂದ ತನ್ನ ಜೀವನವನ್ನು ಜನಮಾನಸದ ಸೇವೆಗಾಗಿ ಮೌಂಟ್ ಅಬು ವಿನಲ್ಲಿ ಸಮರ್ಪಣೆ ಮಾಡಿರುವರು.
ತರಬೇತಿಯಲ್ಲಿ ಹಿರಿಯ ನಾಗರಿಕರ ಆರೈಕೆ, ಸಮತೋಲಿತ ಆಹಾರ, ಪಾನೀಯಗಳ ಮಾಹಿತಿಯ ಜೊತೆಗೆ ವೃದ್ಧರಲ್ಲಿ ಬರುವ ಸಾಮಾನ್ಯ ಮಾನಸಿಕ ಶಾರೀರಿಕ ತೊಂದರೆಯನ್ನು ಗುರುತಿಸುವುದು, ಇದರ ಕುರಿತಾಗಿ ಸಮಗ್ರ ಮಾಹಿತಿ ಯನ್ನು ನೀಡಲಾಯಿತು.
ಕಾರ್ಯಕ್ರಮದ ದೀಪ ಪ್ರಜ್ವಲನೆಯಲ್ಲಿ ಡಾ. ಜಯಶ್ರೀ, (ವೈದ್ಯಾಧಿಕಾರಿಗಳು, ಬಿಜೈ ಪ್ರಾಥಮಿಕ ಆರೋಗ್ಯ ಶಿಕ್ಷಣ ಕೇಂದ್ರ), ಜ್ಯೋತಿ (ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ), ಮಮತಾ, (ಜಿಲ್ಲಾ ಆಶಾ ಕಾರ್ಯಕರ್ತೆಯರ ಮೇಲ್ವಿಚಾರಕಿ) ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಬಿ. ಕೆ. ವಿಶ್ವೇಶ್ವರಿ ಈಶ್ವರೀಯ ಸಂದೇಶ ನೀಡಿದರು. ಬಿ. ಕೆ. ಆನಂದ್ ಸ್ವಾಗತಿಸಿದರು. ಬಿ.ಕೆ. ರಶ್ಮಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು