9:36 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಗಳೂರು: ಈಶ್ವರೀಯ ವಿಶ್ವವಿದ್ಯಾಲಯದಿಂದ ಆಶಾ ಕಾರ್ಯಕರ್ತೆಯರಿಗೆ ‘ವೃದ್ಧರಿಗೆ ಆರೋಗ್ಯ ಆರೈಕೆ’ ತರಬೇತಿ ಕಾರ್ಯಕ್ರಮ

16/03/2025, 11:58

ಮಂಗಳೂರು(reporterkarnataka.com): ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ, ಮಂಗಳೂರು ವತಿಯಿಂದ ನಗರದ ಉರ್ವ ಸ್ಟೋರ್ ನಲ್ಲಿರುವ ಬ್ರಹ್ಮಾಕುಮಾರಿಸ್ ಸಭಾಂಗಣದಲ್ಲಿ ಆಶಾ ಕಾರ್ಯಕರ್ತೆಯರಿಗೆ “ವೃದ್ಧರಿಗೆ ಆರೋಗ್ಯ ಆರೈಕೆ” ತರಬೇತಿ ಕಾರ್ಯಕ್ರಮವನ್ನು ಏರ್ಪಾಡು ಮಾಡಲಾಯಿತು. 200 ಆಶಾ ಕಾರ್ಯಕರ್ತೆಯರು ಭಾಗವಹಿಸಿದರು.
ತರಬೇತಿ ಕಾರ್ಯಕ್ರಮವನ್ನು ಬ್ರಹ್ಮಾಕುಮಾರಿಸ್ ಸಂಸ್ಥೆಯ ಪ್ರಧಾನ ಕಚೇರಿ ಮೌಂಟ್ ಅಬುವಿನಿಂದ ಆಗಮಿಸಿದ ಹಿರಿಯ ವೈದ್ಯಾಧಿಕಾರಿ ಡಾ.ಮಹೇಶ್ ಹೇಮಾದ್ರಿ ಅವರು ನೆರವೇರಿಸಿದರು. ಮೂಲತಃ ಕರ್ನಾಟಕದವರಾದ ಅವರು 30 ವರ್ಷಗಳಿಂದ ತನ್ನ ಜೀವನವನ್ನು ಜನಮಾನಸದ ಸೇವೆಗಾಗಿ ಮೌಂಟ್ ಅಬು ವಿನಲ್ಲಿ ಸಮರ್ಪಣೆ ಮಾಡಿರುವರು.
ತರಬೇತಿಯಲ್ಲಿ ಹಿರಿಯ ನಾಗರಿಕರ ಆರೈಕೆ, ಸಮತೋಲಿತ ಆಹಾರ, ಪಾನೀಯಗಳ ಮಾಹಿತಿಯ ಜೊತೆಗೆ ವೃದ್ಧರಲ್ಲಿ ಬರುವ ಸಾಮಾನ್ಯ ಮಾನಸಿಕ ಶಾರೀರಿಕ ತೊಂದರೆಯನ್ನು ಗುರುತಿಸುವುದು, ಇದರ ಕುರಿತಾಗಿ ಸಮಗ್ರ ಮಾಹಿತಿ ಯನ್ನು ನೀಡಲಾಯಿತು.
ಕಾರ್ಯಕ್ರಮದ ದೀಪ ಪ್ರಜ್ವಲನೆಯಲ್ಲಿ ಡಾ. ಜಯಶ್ರೀ, (ವೈದ್ಯಾಧಿಕಾರಿಗಳು, ಬಿಜೈ ಪ್ರಾಥಮಿಕ ಆರೋಗ್ಯ ಶಿಕ್ಷಣ ಕೇಂದ್ರ), ಜ್ಯೋತಿ (ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ), ಮಮತಾ, (ಜಿಲ್ಲಾ ಆಶಾ ಕಾರ್ಯಕರ್ತೆಯರ ಮೇಲ್ವಿಚಾರಕಿ) ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಬಿ. ಕೆ. ವಿಶ್ವೇಶ್ವರಿ ಈಶ್ವರೀಯ ಸಂದೇಶ ನೀಡಿದರು. ಬಿ. ಕೆ. ಆನಂದ್ ಸ್ವಾಗತಿಸಿದರು. ಬಿ.ಕೆ. ರಶ್ಮಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು