4:57 PM Friday13 - June 2025
ಬ್ರೇಕಿಂಗ್ ನ್ಯೂಸ್
ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ… ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ:… ಡಿಸಿಎಂ ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಲಿ: ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ… Bangalore | ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ…

ಇತ್ತೀಚಿನ ಸುದ್ದಿ

ಮಂಗಳೂರು: ಕೊಂಕಣಿ ಅಕಾಡೆಮಿಯಿಂದ ‘ಕಾವ್ಯಾಂ ವ್ಹಾಳೊ-3ʼ ಕೊಂಕಣಿ ಕವಿಗೋಷ್ಠಿ

11/06/2025, 14:14

ಮಂಗಳೂರು(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಕಾವ್ಯಾಂ ವ್ಹಾಳೊ-3ʼ ಶೀರ್ಷಿಕೆಯಡಿ ಕವಿಗೋಷ್ಠಿ ಅಕಾಡೆಮಿ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ವಹಿಸಿ, ನೆರೆದಿರುವ ಎಲ್ಲಾ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಮತ್ತು ಕವಿಗಳಾದ ನವೀನ್‌ ಕುಲ್ಶೇಕರ್‌ ಅವರನ್ನು ಸನ್ಮಾನಿಸಲಾಯಿತು. ಅವರು ಮಾತಾನಾಡಿ, ಎಲ್ಲರನ್ನೂ ಹೃದಳಾಂತರದಿಂದ ಧನ್ಯವಾದ ಸಮರ್ಪಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಾಹುಕಾರ್‌ ಕಿರಣ್‌ ಪೈ ಅವರು ಸನ್ಮಾನಿತರನ್ನು ಸನ್ಮಾನಿಸಿ, ಕೊಂಕಣಿಗರು, ವಿದ್ಯಾಭ್ಯಾಸದಲ್ಲಿ ಹಾಗೂ ಇತರೆ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡುತ್ತಾ ಇದ್ದಾರೆ. ಕೊಂಕಣಿ ಅಕಾಡೆಮಿಯು ಕವಿಗೋಷ್ಟಿ ಕಾರ್ಯಕ್ರಮವನ್ನು ಏರ್ಪಡಿಸಿ, ಕವಿಗಳಿಗೆ ಕವಿತೆಗಳನ್ನು ಸೃಷ್ಟಿಸಲು, ಹೊಸ ಹುಮ್ಮಸ್ಸನ್ನು ನೀಡಿದೆ. ಈ ಕಾರ್ಯಕ್ರಮವು ಹೀಗೆಯೇ ಮುಂದುವರಿದು ಹೋಗಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಪ್ರಮುಖ ಭಾಷಣಕಾರರಾಗಿ ಖ್ಯಾತ ಕವಿ ಟೈಟಸ್‌ ನೊರೊನ್ಹಾ ಅವರು ಕವಿತೆಗಳ ಇತಿಹಾಸ, ಹಿರಿಯ ಕವಿಗಳ ಬಗ್ಗೆ ಮಾಹಿತಿಯನ್ನು ಒದಗಿಸಿ ಉಪನ್ಯಾಸವನ್ನು ನೀಡಿದರು.
ಡಾ. ಪ್ಲಾವಿಯಾ ಕ್ಯಾಸ್ತೆಲಿನೊರವರು ಕವಿಗೋಷ್ಟಿಯನ್ನು ನಡೆಸಿದರು. ಮ್ಯಾಕ್ಸಿಂ ಲುದ್ರಿಗ್, ಸುಮಾ ವಸಂತ್, ಶ ಜೋರ್ಜ್ ಲಿಗೊರಿ, ಲೋಯ್ಡ್ ರೇಗೊ, ಅರವಿಂದ ಶ್ಯಾನಭಾಗ್, ಚೆಲ್ಸಿಯಾ ಪರ್ಲ್ ಕ್ಯಾಸ್ತೆಲಿನೊ, ಸ್ಮಿತಾ ಶೆಣೈ, ರೋಶನ್ ಕ್ರಾಸ್ತಾ, ಐರಿನ್ ರೆಬೆಲ್ಲೊ, ಮುಂತಾದವರು ತಮ್ಮ ಕವಿತೆಗಳನ್ನು ವಾಚಿಸಿದರು.
ಅಕಾಡೆಮಿ ಸದಸ್ಯರಾದ ದಯಾನಂದ ಮಡ್ಕೇಕರ್‌ರವರು ಧನ್ಯವಾದ ಸಮರ್ಪಿಸಿದರು. ಅಕಾಡೆಮಿ ಸದಸ್ಯರಾದ ಶ್ರೀ ನವೀನ್‌ ಲೋಬೊ, ಸಮರ್ಥ್‌ ಭಟ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸದಸ್ಯರಾದ
ಸಪ್ನಾ ಮೇ ಕ್ರಾಸ್ತಾರವರು ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು