4:16 AM Thursday15 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರು: ಕೊಂಕಣಿ ಅಕಾಡೆಮಿಯಿಂದ ‘ಕಾವ್ಯಾಂ ವ್ಹಾಳೊ-3ʼ ಕೊಂಕಣಿ ಕವಿಗೋಷ್ಠಿ

11/06/2025, 14:14

ಮಂಗಳೂರು(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಕಾವ್ಯಾಂ ವ್ಹಾಳೊ-3ʼ ಶೀರ್ಷಿಕೆಯಡಿ ಕವಿಗೋಷ್ಠಿ ಅಕಾಡೆಮಿ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ವಹಿಸಿ, ನೆರೆದಿರುವ ಎಲ್ಲಾ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಮತ್ತು ಕವಿಗಳಾದ ನವೀನ್‌ ಕುಲ್ಶೇಕರ್‌ ಅವರನ್ನು ಸನ್ಮಾನಿಸಲಾಯಿತು. ಅವರು ಮಾತಾನಾಡಿ, ಎಲ್ಲರನ್ನೂ ಹೃದಳಾಂತರದಿಂದ ಧನ್ಯವಾದ ಸಮರ್ಪಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಾಹುಕಾರ್‌ ಕಿರಣ್‌ ಪೈ ಅವರು ಸನ್ಮಾನಿತರನ್ನು ಸನ್ಮಾನಿಸಿ, ಕೊಂಕಣಿಗರು, ವಿದ್ಯಾಭ್ಯಾಸದಲ್ಲಿ ಹಾಗೂ ಇತರೆ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡುತ್ತಾ ಇದ್ದಾರೆ. ಕೊಂಕಣಿ ಅಕಾಡೆಮಿಯು ಕವಿಗೋಷ್ಟಿ ಕಾರ್ಯಕ್ರಮವನ್ನು ಏರ್ಪಡಿಸಿ, ಕವಿಗಳಿಗೆ ಕವಿತೆಗಳನ್ನು ಸೃಷ್ಟಿಸಲು, ಹೊಸ ಹುಮ್ಮಸ್ಸನ್ನು ನೀಡಿದೆ. ಈ ಕಾರ್ಯಕ್ರಮವು ಹೀಗೆಯೇ ಮುಂದುವರಿದು ಹೋಗಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಪ್ರಮುಖ ಭಾಷಣಕಾರರಾಗಿ ಖ್ಯಾತ ಕವಿ ಟೈಟಸ್‌ ನೊರೊನ್ಹಾ ಅವರು ಕವಿತೆಗಳ ಇತಿಹಾಸ, ಹಿರಿಯ ಕವಿಗಳ ಬಗ್ಗೆ ಮಾಹಿತಿಯನ್ನು ಒದಗಿಸಿ ಉಪನ್ಯಾಸವನ್ನು ನೀಡಿದರು.
ಡಾ. ಪ್ಲಾವಿಯಾ ಕ್ಯಾಸ್ತೆಲಿನೊರವರು ಕವಿಗೋಷ್ಟಿಯನ್ನು ನಡೆಸಿದರು. ಮ್ಯಾಕ್ಸಿಂ ಲುದ್ರಿಗ್, ಸುಮಾ ವಸಂತ್, ಶ ಜೋರ್ಜ್ ಲಿಗೊರಿ, ಲೋಯ್ಡ್ ರೇಗೊ, ಅರವಿಂದ ಶ್ಯಾನಭಾಗ್, ಚೆಲ್ಸಿಯಾ ಪರ್ಲ್ ಕ್ಯಾಸ್ತೆಲಿನೊ, ಸ್ಮಿತಾ ಶೆಣೈ, ರೋಶನ್ ಕ್ರಾಸ್ತಾ, ಐರಿನ್ ರೆಬೆಲ್ಲೊ, ಮುಂತಾದವರು ತಮ್ಮ ಕವಿತೆಗಳನ್ನು ವಾಚಿಸಿದರು.
ಅಕಾಡೆಮಿ ಸದಸ್ಯರಾದ ದಯಾನಂದ ಮಡ್ಕೇಕರ್‌ರವರು ಧನ್ಯವಾದ ಸಮರ್ಪಿಸಿದರು. ಅಕಾಡೆಮಿ ಸದಸ್ಯರಾದ ಶ್ರೀ ನವೀನ್‌ ಲೋಬೊ, ಸಮರ್ಥ್‌ ಭಟ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸದಸ್ಯರಾದ
ಸಪ್ನಾ ಮೇ ಕ್ರಾಸ್ತಾರವರು ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು