6:00 PM Sunday12 - April 2026
ಬ್ರೇಕಿಂಗ್ ನ್ಯೂಸ್
ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ…

ಇತ್ತೀಚಿನ ಸುದ್ದಿ

ಮಂಗಳೂರು: ಕೊಂಕಣಿ ಅಕಾಡೆಮಿಯಿಂದ ‘ಕಾವ್ಯಾಂ ವ್ಹಾಳೊ-3ʼ ಕೊಂಕಣಿ ಕವಿಗೋಷ್ಠಿ

11/06/2025, 14:14

ಮಂಗಳೂರು(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಕಾವ್ಯಾಂ ವ್ಹಾಳೊ-3ʼ ಶೀರ್ಷಿಕೆಯಡಿ ಕವಿಗೋಷ್ಠಿ ಅಕಾಡೆಮಿ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ವಹಿಸಿ, ನೆರೆದಿರುವ ಎಲ್ಲಾ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಮತ್ತು ಕವಿಗಳಾದ ನವೀನ್‌ ಕುಲ್ಶೇಕರ್‌ ಅವರನ್ನು ಸನ್ಮಾನಿಸಲಾಯಿತು. ಅವರು ಮಾತಾನಾಡಿ, ಎಲ್ಲರನ್ನೂ ಹೃದಳಾಂತರದಿಂದ ಧನ್ಯವಾದ ಸಮರ್ಪಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಾಹುಕಾರ್‌ ಕಿರಣ್‌ ಪೈ ಅವರು ಸನ್ಮಾನಿತರನ್ನು ಸನ್ಮಾನಿಸಿ, ಕೊಂಕಣಿಗರು, ವಿದ್ಯಾಭ್ಯಾಸದಲ್ಲಿ ಹಾಗೂ ಇತರೆ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡುತ್ತಾ ಇದ್ದಾರೆ. ಕೊಂಕಣಿ ಅಕಾಡೆಮಿಯು ಕವಿಗೋಷ್ಟಿ ಕಾರ್ಯಕ್ರಮವನ್ನು ಏರ್ಪಡಿಸಿ, ಕವಿಗಳಿಗೆ ಕವಿತೆಗಳನ್ನು ಸೃಷ್ಟಿಸಲು, ಹೊಸ ಹುಮ್ಮಸ್ಸನ್ನು ನೀಡಿದೆ. ಈ ಕಾರ್ಯಕ್ರಮವು ಹೀಗೆಯೇ ಮುಂದುವರಿದು ಹೋಗಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಪ್ರಮುಖ ಭಾಷಣಕಾರರಾಗಿ ಖ್ಯಾತ ಕವಿ ಟೈಟಸ್‌ ನೊರೊನ್ಹಾ ಅವರು ಕವಿತೆಗಳ ಇತಿಹಾಸ, ಹಿರಿಯ ಕವಿಗಳ ಬಗ್ಗೆ ಮಾಹಿತಿಯನ್ನು ಒದಗಿಸಿ ಉಪನ್ಯಾಸವನ್ನು ನೀಡಿದರು.
ಡಾ. ಪ್ಲಾವಿಯಾ ಕ್ಯಾಸ್ತೆಲಿನೊರವರು ಕವಿಗೋಷ್ಟಿಯನ್ನು ನಡೆಸಿದರು. ಮ್ಯಾಕ್ಸಿಂ ಲುದ್ರಿಗ್, ಸುಮಾ ವಸಂತ್, ಶ ಜೋರ್ಜ್ ಲಿಗೊರಿ, ಲೋಯ್ಡ್ ರೇಗೊ, ಅರವಿಂದ ಶ್ಯಾನಭಾಗ್, ಚೆಲ್ಸಿಯಾ ಪರ್ಲ್ ಕ್ಯಾಸ್ತೆಲಿನೊ, ಸ್ಮಿತಾ ಶೆಣೈ, ರೋಶನ್ ಕ್ರಾಸ್ತಾ, ಐರಿನ್ ರೆಬೆಲ್ಲೊ, ಮುಂತಾದವರು ತಮ್ಮ ಕವಿತೆಗಳನ್ನು ವಾಚಿಸಿದರು.
ಅಕಾಡೆಮಿ ಸದಸ್ಯರಾದ ದಯಾನಂದ ಮಡ್ಕೇಕರ್‌ರವರು ಧನ್ಯವಾದ ಸಮರ್ಪಿಸಿದರು. ಅಕಾಡೆಮಿ ಸದಸ್ಯರಾದ ಶ್ರೀ ನವೀನ್‌ ಲೋಬೊ, ಸಮರ್ಥ್‌ ಭಟ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸದಸ್ಯರಾದ
ಸಪ್ನಾ ಮೇ ಕ್ರಾಸ್ತಾರವರು ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು