3:42 AM Monday20 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ಮಂಗಳೂರು: ಕೊಂಕಣಿ ಅಕಾಡೆಮಿಯಿಂದ ‘ಕಾವ್ಯಾಂ ವ್ಹಾಳೊ-3ʼ ಕೊಂಕಣಿ ಕವಿಗೋಷ್ಠಿ

11/06/2025, 14:14

ಮಂಗಳೂರು(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಕಾವ್ಯಾಂ ವ್ಹಾಳೊ-3ʼ ಶೀರ್ಷಿಕೆಯಡಿ ಕವಿಗೋಷ್ಠಿ ಅಕಾಡೆಮಿ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ವಹಿಸಿ, ನೆರೆದಿರುವ ಎಲ್ಲಾ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಮತ್ತು ಕವಿಗಳಾದ ನವೀನ್‌ ಕುಲ್ಶೇಕರ್‌ ಅವರನ್ನು ಸನ್ಮಾನಿಸಲಾಯಿತು. ಅವರು ಮಾತಾನಾಡಿ, ಎಲ್ಲರನ್ನೂ ಹೃದಳಾಂತರದಿಂದ ಧನ್ಯವಾದ ಸಮರ್ಪಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಾಹುಕಾರ್‌ ಕಿರಣ್‌ ಪೈ ಅವರು ಸನ್ಮಾನಿತರನ್ನು ಸನ್ಮಾನಿಸಿ, ಕೊಂಕಣಿಗರು, ವಿದ್ಯಾಭ್ಯಾಸದಲ್ಲಿ ಹಾಗೂ ಇತರೆ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡುತ್ತಾ ಇದ್ದಾರೆ. ಕೊಂಕಣಿ ಅಕಾಡೆಮಿಯು ಕವಿಗೋಷ್ಟಿ ಕಾರ್ಯಕ್ರಮವನ್ನು ಏರ್ಪಡಿಸಿ, ಕವಿಗಳಿಗೆ ಕವಿತೆಗಳನ್ನು ಸೃಷ್ಟಿಸಲು, ಹೊಸ ಹುಮ್ಮಸ್ಸನ್ನು ನೀಡಿದೆ. ಈ ಕಾರ್ಯಕ್ರಮವು ಹೀಗೆಯೇ ಮುಂದುವರಿದು ಹೋಗಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಪ್ರಮುಖ ಭಾಷಣಕಾರರಾಗಿ ಖ್ಯಾತ ಕವಿ ಟೈಟಸ್‌ ನೊರೊನ್ಹಾ ಅವರು ಕವಿತೆಗಳ ಇತಿಹಾಸ, ಹಿರಿಯ ಕವಿಗಳ ಬಗ್ಗೆ ಮಾಹಿತಿಯನ್ನು ಒದಗಿಸಿ ಉಪನ್ಯಾಸವನ್ನು ನೀಡಿದರು.
ಡಾ. ಪ್ಲಾವಿಯಾ ಕ್ಯಾಸ್ತೆಲಿನೊರವರು ಕವಿಗೋಷ್ಟಿಯನ್ನು ನಡೆಸಿದರು. ಮ್ಯಾಕ್ಸಿಂ ಲುದ್ರಿಗ್, ಸುಮಾ ವಸಂತ್, ಶ ಜೋರ್ಜ್ ಲಿಗೊರಿ, ಲೋಯ್ಡ್ ರೇಗೊ, ಅರವಿಂದ ಶ್ಯಾನಭಾಗ್, ಚೆಲ್ಸಿಯಾ ಪರ್ಲ್ ಕ್ಯಾಸ್ತೆಲಿನೊ, ಸ್ಮಿತಾ ಶೆಣೈ, ರೋಶನ್ ಕ್ರಾಸ್ತಾ, ಐರಿನ್ ರೆಬೆಲ್ಲೊ, ಮುಂತಾದವರು ತಮ್ಮ ಕವಿತೆಗಳನ್ನು ವಾಚಿಸಿದರು.
ಅಕಾಡೆಮಿ ಸದಸ್ಯರಾದ ದಯಾನಂದ ಮಡ್ಕೇಕರ್‌ರವರು ಧನ್ಯವಾದ ಸಮರ್ಪಿಸಿದರು. ಅಕಾಡೆಮಿ ಸದಸ್ಯರಾದ ಶ್ರೀ ನವೀನ್‌ ಲೋಬೊ, ಸಮರ್ಥ್‌ ಭಟ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸದಸ್ಯರಾದ
ಸಪ್ನಾ ಮೇ ಕ್ರಾಸ್ತಾರವರು ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು