11:16 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಗಳೂರು: ಕೊಂಕಣಿ ಅಕಾಡೆಮಿಯಿಂದ ‘ಕಾವ್ಯಾಂ ವ್ಹಾಳೊ-3ʼ ಕೊಂಕಣಿ ಕವಿಗೋಷ್ಠಿ

11/06/2025, 14:14

ಮಂಗಳೂರು(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಕಾವ್ಯಾಂ ವ್ಹಾಳೊ-3ʼ ಶೀರ್ಷಿಕೆಯಡಿ ಕವಿಗೋಷ್ಠಿ ಅಕಾಡೆಮಿ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ವಹಿಸಿ, ನೆರೆದಿರುವ ಎಲ್ಲಾ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಮತ್ತು ಕವಿಗಳಾದ ನವೀನ್‌ ಕುಲ್ಶೇಕರ್‌ ಅವರನ್ನು ಸನ್ಮಾನಿಸಲಾಯಿತು. ಅವರು ಮಾತಾನಾಡಿ, ಎಲ್ಲರನ್ನೂ ಹೃದಳಾಂತರದಿಂದ ಧನ್ಯವಾದ ಸಮರ್ಪಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಾಹುಕಾರ್‌ ಕಿರಣ್‌ ಪೈ ಅವರು ಸನ್ಮಾನಿತರನ್ನು ಸನ್ಮಾನಿಸಿ, ಕೊಂಕಣಿಗರು, ವಿದ್ಯಾಭ್ಯಾಸದಲ್ಲಿ ಹಾಗೂ ಇತರೆ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡುತ್ತಾ ಇದ್ದಾರೆ. ಕೊಂಕಣಿ ಅಕಾಡೆಮಿಯು ಕವಿಗೋಷ್ಟಿ ಕಾರ್ಯಕ್ರಮವನ್ನು ಏರ್ಪಡಿಸಿ, ಕವಿಗಳಿಗೆ ಕವಿತೆಗಳನ್ನು ಸೃಷ್ಟಿಸಲು, ಹೊಸ ಹುಮ್ಮಸ್ಸನ್ನು ನೀಡಿದೆ. ಈ ಕಾರ್ಯಕ್ರಮವು ಹೀಗೆಯೇ ಮುಂದುವರಿದು ಹೋಗಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಪ್ರಮುಖ ಭಾಷಣಕಾರರಾಗಿ ಖ್ಯಾತ ಕವಿ ಟೈಟಸ್‌ ನೊರೊನ್ಹಾ ಅವರು ಕವಿತೆಗಳ ಇತಿಹಾಸ, ಹಿರಿಯ ಕವಿಗಳ ಬಗ್ಗೆ ಮಾಹಿತಿಯನ್ನು ಒದಗಿಸಿ ಉಪನ್ಯಾಸವನ್ನು ನೀಡಿದರು.
ಡಾ. ಪ್ಲಾವಿಯಾ ಕ್ಯಾಸ್ತೆಲಿನೊರವರು ಕವಿಗೋಷ್ಟಿಯನ್ನು ನಡೆಸಿದರು. ಮ್ಯಾಕ್ಸಿಂ ಲುದ್ರಿಗ್, ಸುಮಾ ವಸಂತ್, ಶ ಜೋರ್ಜ್ ಲಿಗೊರಿ, ಲೋಯ್ಡ್ ರೇಗೊ, ಅರವಿಂದ ಶ್ಯಾನಭಾಗ್, ಚೆಲ್ಸಿಯಾ ಪರ್ಲ್ ಕ್ಯಾಸ್ತೆಲಿನೊ, ಸ್ಮಿತಾ ಶೆಣೈ, ರೋಶನ್ ಕ್ರಾಸ್ತಾ, ಐರಿನ್ ರೆಬೆಲ್ಲೊ, ಮುಂತಾದವರು ತಮ್ಮ ಕವಿತೆಗಳನ್ನು ವಾಚಿಸಿದರು.
ಅಕಾಡೆಮಿ ಸದಸ್ಯರಾದ ದಯಾನಂದ ಮಡ್ಕೇಕರ್‌ರವರು ಧನ್ಯವಾದ ಸಮರ್ಪಿಸಿದರು. ಅಕಾಡೆಮಿ ಸದಸ್ಯರಾದ ಶ್ರೀ ನವೀನ್‌ ಲೋಬೊ, ಸಮರ್ಥ್‌ ಭಟ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸದಸ್ಯರಾದ
ಸಪ್ನಾ ಮೇ ಕ್ರಾಸ್ತಾರವರು ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು