3:44 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯಶಾಸ್ತ್ರ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

11/09/2025, 17:51

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ರಾಜ್ಯಶಾಸ್ತ್ರ ಉಪನ್ಯಾಸಕರ ಒಂದು ದಿವಸದ ಕಾರ್ಯಾಗಾರ ಮತ್ತು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯಶಾಸ್ತ್ರ ಸಂಘದ ಪದಾಧಿಕಾರಿಗಳ ಅಯ್ಕೆ ಕಾರ್ಯಕ್ರಮವು ಮಂಗಳೂರು ಕೊಡಿಯಲ್ ಬೈಲ್ ಬೆಸೆಂಟ್ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸೈಂಟ್ ಅಲೋಷಿಯಸ್ ಡಿಮ್ಡ್ ವಿಶ್ವವಿದ್ಯಾಲಯದ ಡಾ. ರೋಸ್ ವೀರ ಡಿಸೋಜ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದ ಉಪನಿರ್ದೇಶಕರಾದ ರಾಜೇಶ್ವರಿ ಎಚ್ ವಹಿಸಿದ್ದರು ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಜಯಾನಂದ ಸುವರ್ಣ, ಬೆಸೆಂಟ್ ನ್ಯಾಷನಲ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾಯಕ್ ರೂಪ್ ಸಿಂಗ್,ದಕ್ಷಿಣ ಕನ್ನಡ ಜಿಲ್ಲಾ ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಚಂದ್ರನಾಥ ಎಂ,ಕಾರ್ಯದರ್ಶಿ ದಿವ್ಯಕುಮಾರಿ ಉಪಸ್ಥಿತರಿದ್ದರು. ನೂತನ ಪದಾಧಿಕಾರಿಗಳನ್ನು ಅಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಚಂದ್ರನಾಥ.ಎಂ ಚೇಳೈರು, ಕಾರ್ಯದರ್ಶಿ ರಂಜಿತಾ ತೆಂಕಮಿಜಾರು,ಖಚಾಂಚಿಯಾಗಿ ವನಿತಾ ಮಂಗಳೂರು ಉಪಾಧ್ಯಕ್ಷರಾಗಿ ಮಹಾವೀರ,ಶುಭಾಪೌಲ್,ಸಂದೀಪ್ ಪೂಜಾರಿ,ತಾಲ್ಲೂಕು ಪ್ರತಿನಿಧಿಗಳಾಗಿ ವೆಂಕಟೇಶ್, ದಾಮೋದರ್ ಎನ್, ಜುಬೇದಾ,ವಿಶಾಂತ್ ಶೆಟ್ಟಿ, ಜಯಶ್ರೀ, ಶಿಲ್ಪ, ಭರತ್ ಕುಮಾರ್, ಸುನಿಲ್ ಕುಮಾರ್ ಹಾಗೂ ಸುರೇಶ್ ಎನ್ ರವರನ್ನು ಅಯ್ಕೆ ಮಾಡಲಾಯಿತು ಇದೇ ಸಂದರ್ಭದಲ್ಲಿ ಸೇವೆಯಿಂದ ನಿವೃತ್ತರಾದ ಕಾಟಿಪಳ್ಳ ನಾರಾಯಣ ಗುರು ಕಾಲೇಜಿನ ಪ್ರಾಂಶುಪಾಲರಾದ ಉಮೇಶ್ ಕರ್ಕೇರ ಇವರನ್ನು ಸನ್ಮಾನಿಸಲಾಯಿತು ಜಿಲ್ಲೆಯಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಅತೀ ಹೆಚ್ಚು ಅಂಕಗಳಿಸಿದ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಕ್ರಡಿಯ ರಶ್ಮಿ, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಬನಾವತ್ ಮಯುಕ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಕಾರ್ತಿಕ್ ಡಿ.ಸಿ , ಶ್ರೀ ಸುಬ್ರಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಪುನೀತ್ ಪಿ.ಜೆ ಯವರನ್ನು ಅಭಿನಂದಿಸಲಾಯಿತು ದ್ವೀತಿಯ ಪಿಯುಸಿಯಲ್ಲಿ 100% ಅಂಕ ಫಲಿತಾಂಶ ದಾಖಲಿಸಿದ 40 ಉಪನ್ಯಾಸಕರನ್ನು ಗೌರವಿಸಲಾಯಿತು

ಇತ್ತೀಚಿನ ಸುದ್ದಿ

ಜಾಹೀರಾತು