1:03 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಮಂಗಳೂರು ಧರ್ಮ ಪ್ರಾಂತ್ಯ: ಎಪಿಸ್ಕೋಪಲ್ ಸಿಟಿ ವಲಯದಲ್ಲಿ ತಪಸ್ಸು ಕಾಲದ 3 ದಿನಗಳ ಬೈಬಲ್ ಆಧಾರಿತ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ

06/04/2025, 20:57

ಮಂಗಳೂರು(reporterkarnataka.com): ಕ್ಯಾಥೋಲಿಕ್ ಕ್ರೈಸ್ತ ಧರ್ಮ ಸಭೆಯು ಭರವಸೆಯ ಯಾತ್ರಿಕರು ಎಂಬ ಧ್ಯೇಯದೊಂದಿಗೆ ಜುಬಿಲಿ ವರ್ಷ 2025 ನ್ನು ಆಚರಿಸುತ್ತಿದ್ದು, ಅದರ ಅಂಗವಾಗಿ ಮಂಗಳೂರು ಧರ್ಮ ಪ್ರಾಂತ್ಯದ ಎಪಿಸ್ಕೋಪಲ್ ಸಿಟಿ ವಲಯವು ಆಧ್ಯಾತ್ಮಿಕ ನವೀಕರಣದ ಉದ್ದೇಶವನ್ನು ಇರಿಸಿಕೊಂಡು ತಪಸ್ಸು ಕಾಲದ
ಬೈಬಲ್ ಆಧಾರಿತ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇದರ ಉದ್ಘಾಟನೆ ಭಾನುವಾರ ನೆರವೇರಿತು.
ಜಪ್ಪು ಸೈಂಟ್ ಜೋಸೆಫ್ ಸೆಮಿನರಿಯ ತೆರೆದ ಮೈದಾನದಲ್ಲಿ ನಡೆದ ಸಮಾ ರಂಭದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಪೀಟರ್ ಪಾವ್ಲ್ ಸಲ್ದಾನ್ಹ ಅವರು 3 ದಿನಗಳ ಈ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ವಿಶಿಷ್ಟವಾದ ಸ್ಪರ್ಧೆಯು ಬೈಬಲ್- ಆಧಾರಿತ ಕಿರು ನಾಟಕ ಪ್ರದರ್ಶನ ಮತ್ತು ಕೀರ್ತನೆ ಹಾಡುವ ಸ್ಪರ್ಧೆಗಳನ್ನು ಒಳಗೊಂಡಿದೆ, ಎಪಿಸ್ಕೋಪಲ್ ಸಿಟಿ ವಲಯ ವ್ಯಾಪ್ತಿಯಲ್ಲಿ 11 ಚರ್ಚ್ ಗಳು ಬರುತ್ತಿವೆ.
ಸಮುದಾಯದ ಸಂಪರ್ಕವನ್ನು ಬಲ ಪಡಿಸುವುದು ಮತ್ತು ಸುವಾರ್ತೆಯನ್ನು ಆಧರಿಸಿ ಜೀವಿಸುವ ನವೀಕರಣದ ಬದ್ಧತೆಯನ್ನು ಪ್ರೇರೇಪಿಸುವ ಗುರಿಯನ್ನು ಇದು ಹೊಂದಿದೆ.
“ದೇವರ ವಾಕ್ಯದ ಪ್ರಕಾರ ಬದುಕುವವರು ತಮ್ಮ ಜೀವನದಲ್ಲಿ ಸಂತೋಷ ಮತ್ತು ಶಾಂತಿಯನ್ನು ಅನುಭವಿಸುತ್ತಾರೆ. ದೇವರ ವಾಕ್ಯವು ಕೇವಲ ಪಠ್ಯವಲ್ಲ; ಇದು ಜೀವನ ವಿಧಾನವಾಗಿದೆ ಎಂದು ಬಿಷಪ್ ಹೇಳಿದರು.
ಸಮಾರಂಭದಲ್ಲಿ ವಿಕಾರ್ ಜನರಲ್ ಅತಿ ವಂದನೀಯ
ಮ್ಯಾಕ್ಸಿಮ್ ಎಲ್. ನೊರೊನ್ಹಾ, ಚಾನ್ಸಲರ್ ಫಾದರ್ ವಿಕ್ಟರ್ ಜಾರ್ಜ್ ಡಿ’ಸೋಜಾ, ಜಪ್ಪು ಸೆಮಿನರಿಯ ರೆಕ್ಟರ್ ಫಾ. ರೊನಾಲ್ಡ್ ಸೇರಾವೋ, ಸಾರ್ವಜನಿಕ ಸಂಪರ್ಕ ಅಧಿಕಾರಿ ಫಾ. ಜೆ.ಬಿ.ಸಲ್ಡಾನ್ಹಾ, ಫಾ. ಮ್ಯಾಕ್ಸಿಂ ಡಿಸೋಜಾ, ಫಾ. ವಾಲ್ಟರ್ ಡಿಸೋಜಾ , ಫಾ. ಜೆ. ಬಿ. ಕ್ರಾಸ್ತಾ, ಫಾ. ಎರಿಕ್ ಕ್ರಾಸ್ತಾ, ಫಾ. ವಿಜಯ್ ವಿಕ್ಟರ್ ಲೋಬೊ, ಫಾ. ಬೊನವೆಂಚರ್ ನಜರೆತ್, ಮಾಧ್ಯಮ ಸಂಚಾಲಕ ಎಲಿಯಾಸ್ ಫೆರ್ನಾಂಡಿಸ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು