4:03 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮಂಗಳೂರು ಧರ್ಮ ಪ್ರಾಂತ್ಯದ ಮೂಲ ಧರ್ಮ ಸಭೆಯ ಸಮುದಾಯ ಸಮ್ಮೇಳನ: 124 ಚರ್ಚ್ ಗಳು ಭಾಗಿ

10/08/2025, 19:04

ಮಂಗಳೂರು(reporterkarnataka.com): ಮಂಗಳೂರು ಧರ್ಮ ಪ್ರಾಂತ್ಯದ ಮೂಲ ಧರ್ಮ ಸಭೆಯ ಸಮುದಾಯ ಸಮ್ಮೇಳನವು ಭಾನುವಾರ ನಗರದ ಕೋರ್ಡೆಲ್ ಚರ್ಚ್ ಸಭಾಂಗಣದಲ್ಲಿ ನಡೆಯಿತು.
ಮಂಗಳೂರು ಧರ್ಮ ಪ್ರಾಂತ್ಯದ 124 ಚರ್ಚ್ ಗಳ 1100 ಜನರು ಭಾಗವಹಿಸಿದ್ದರು.
ಮಂಗಳೂರು ಧರ್ಮ ಪ್ರಾಂತ್ಯದ ಶ್ರೇಷ್ಠ ಗುರು ಅತಿ ವಂದನೀಯ ಫಾ. ಮ್ಯಾಕ್ಸಿಮ್ ಎಲ್. ನೊರೊನ್ಹಾ ಅವರು ಉದ್ಘಾಟಿಸಿ ಶುಭ ಹಾರೈಸಿದರು. ಮೂಲ ಧರ್ಮ ಸಭೆ ಸಮುದಾಯ ರಾಜ್ಯ ಮಟ್ಟದ ಕಾರ್ಯದರ್ಶಿ ವಂದನೀಯ ಫಾ. ಮ್ಯಾಕ್ಸಿಮ್ ಡಯಾಸ್ ಮುಖ್ಯ ಅತಿಥಿಯಾಗಿದ್ದರು.

ಮುಖ್ಯ ನಿರ್ದೇಶಕರಾದ ವಂದನೀಯ ಫಾ. ಸುನಿಲ್ ಡಿ ಸೋಜಾ, ಕೋರ್ಡೆಲ್ ಚರ್ಚ್ ನ ಧರ್ಮಗುರು ವಂದನೀಯ ಫಾ. ಕ್ಲಿಫರ್ಡ್ ಫೆರ್ನಾಂಡಿಸ್, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಸಿಲ್ವಿಯಾ ರೂತ್ ಕ್ಯಾಸ್ತಲಿನೊ, ಕಾರ್ಯದರ್ಶಿ ಅನಿಲ್ ಡೇಸಾ, ಸರ್ವ ಆಯೋಗಗಳ ಸಂಚಾಲಕ ಡಾಲ್ಫಿ ಡಿ ಸೋಜಾ, ಮೂಲ ಧರ್ಮ ಸಭೆಯ ಸಮುದಾಯದ ಕೋರ್ಡೆಲ್ ಚರ್ಚ್ ಸಂಚಾಲಕಿ ಜೂಲಿಯೆಟ್ ಮಿನೇಜಸ್, ಪ್ರಾಂತ್ಯ ಕಾರ್ಯದರ್ಶಿ ಆಶಾ ಮೊಂತೇರೊ ಅವರು ಉಪಸ್ಥಿತರಿದ್ದರು.
ಮಂಗಳೂರು ಧರ್ಮ ಪ್ರಾಂತ್ಯದ ಸರ್ವ ಆಯೋಗಗಳ ಸಂಚಾಲಕ ವಂದನೀಯ ಫಾ. ನವೀನ್ ಪಿಂಟೊ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮೂಲ ಧರ್ಮ ಸಭೆಯ ಸಮುದಾಯದ ಮಹತ್ವವನ್ನು ವಿವರಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಕೋರ್ಡೆಲ್ ಚರ್ಚ್ ನ ಧರ್ಮಗುರು ಫಾ. ಕ್ಲಿಫರ್ಡ್ ಫೆರ್ನಾಂಡಿಸ್ ಅವರು ಮೂಲ ಧರ್ಮ ಸಭೆಯ ಆಧ್ಯಾತ್ಮಿಕತೆಯನ್ನು ಈಗಿನ ಕ್ರೈಸ್ತರಲ್ಲಿ ಹೇಗೆ ಅಳವಡಿಸಿಕೊಳ್ಳ ಬಹುದೆಂದು ವಿವರಿಸಿದರು.
ಮಂಗಳೂರು ಧರ್ಮ ಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ಬಲಿ ಪೂಜೆಯನ್ನು ನಡೆಸಿ ಮೂರು ಪುಸ್ತಕಗಳನ್ನು ಬಿಡುಗಡೆ ಮಾಡಿದರು.
ವಂದನೀಯ ಫಾ. ಸುನಿಲ್ ಡಿ ಸೋಜಾ ಸ್ವಾಗತಿಸಿ ಆಶಾ ಮೊಂತೇರೊ ವಂದಿಸಿದರು. ತೆರೆಸಾ ಕಾರ್ಡೋಜಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು