2:37 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಮಂಗಳೂರು ಧರ್ಮ ಪ್ರಾಂತ್ಯದ ಮೂಲ ಧರ್ಮ ಸಭೆಯ ಸಮುದಾಯ ಸಮ್ಮೇಳನ: 124 ಚರ್ಚ್ ಗಳು ಭಾಗಿ

10/08/2025, 19:04

ಮಂಗಳೂರು(reporterkarnataka.com): ಮಂಗಳೂರು ಧರ್ಮ ಪ್ರಾಂತ್ಯದ ಮೂಲ ಧರ್ಮ ಸಭೆಯ ಸಮುದಾಯ ಸಮ್ಮೇಳನವು ಭಾನುವಾರ ನಗರದ ಕೋರ್ಡೆಲ್ ಚರ್ಚ್ ಸಭಾಂಗಣದಲ್ಲಿ ನಡೆಯಿತು.
ಮಂಗಳೂರು ಧರ್ಮ ಪ್ರಾಂತ್ಯದ 124 ಚರ್ಚ್ ಗಳ 1100 ಜನರು ಭಾಗವಹಿಸಿದ್ದರು.
ಮಂಗಳೂರು ಧರ್ಮ ಪ್ರಾಂತ್ಯದ ಶ್ರೇಷ್ಠ ಗುರು ಅತಿ ವಂದನೀಯ ಫಾ. ಮ್ಯಾಕ್ಸಿಮ್ ಎಲ್. ನೊರೊನ್ಹಾ ಅವರು ಉದ್ಘಾಟಿಸಿ ಶುಭ ಹಾರೈಸಿದರು. ಮೂಲ ಧರ್ಮ ಸಭೆ ಸಮುದಾಯ ರಾಜ್ಯ ಮಟ್ಟದ ಕಾರ್ಯದರ್ಶಿ ವಂದನೀಯ ಫಾ. ಮ್ಯಾಕ್ಸಿಮ್ ಡಯಾಸ್ ಮುಖ್ಯ ಅತಿಥಿಯಾಗಿದ್ದರು.

ಮುಖ್ಯ ನಿರ್ದೇಶಕರಾದ ವಂದನೀಯ ಫಾ. ಸುನಿಲ್ ಡಿ ಸೋಜಾ, ಕೋರ್ಡೆಲ್ ಚರ್ಚ್ ನ ಧರ್ಮಗುರು ವಂದನೀಯ ಫಾ. ಕ್ಲಿಫರ್ಡ್ ಫೆರ್ನಾಂಡಿಸ್, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಸಿಲ್ವಿಯಾ ರೂತ್ ಕ್ಯಾಸ್ತಲಿನೊ, ಕಾರ್ಯದರ್ಶಿ ಅನಿಲ್ ಡೇಸಾ, ಸರ್ವ ಆಯೋಗಗಳ ಸಂಚಾಲಕ ಡಾಲ್ಫಿ ಡಿ ಸೋಜಾ, ಮೂಲ ಧರ್ಮ ಸಭೆಯ ಸಮುದಾಯದ ಕೋರ್ಡೆಲ್ ಚರ್ಚ್ ಸಂಚಾಲಕಿ ಜೂಲಿಯೆಟ್ ಮಿನೇಜಸ್, ಪ್ರಾಂತ್ಯ ಕಾರ್ಯದರ್ಶಿ ಆಶಾ ಮೊಂತೇರೊ ಅವರು ಉಪಸ್ಥಿತರಿದ್ದರು.
ಮಂಗಳೂರು ಧರ್ಮ ಪ್ರಾಂತ್ಯದ ಸರ್ವ ಆಯೋಗಗಳ ಸಂಚಾಲಕ ವಂದನೀಯ ಫಾ. ನವೀನ್ ಪಿಂಟೊ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮೂಲ ಧರ್ಮ ಸಭೆಯ ಸಮುದಾಯದ ಮಹತ್ವವನ್ನು ವಿವರಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಕೋರ್ಡೆಲ್ ಚರ್ಚ್ ನ ಧರ್ಮಗುರು ಫಾ. ಕ್ಲಿಫರ್ಡ್ ಫೆರ್ನಾಂಡಿಸ್ ಅವರು ಮೂಲ ಧರ್ಮ ಸಭೆಯ ಆಧ್ಯಾತ್ಮಿಕತೆಯನ್ನು ಈಗಿನ ಕ್ರೈಸ್ತರಲ್ಲಿ ಹೇಗೆ ಅಳವಡಿಸಿಕೊಳ್ಳ ಬಹುದೆಂದು ವಿವರಿಸಿದರು.
ಮಂಗಳೂರು ಧರ್ಮ ಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ಬಲಿ ಪೂಜೆಯನ್ನು ನಡೆಸಿ ಮೂರು ಪುಸ್ತಕಗಳನ್ನು ಬಿಡುಗಡೆ ಮಾಡಿದರು.
ವಂದನೀಯ ಫಾ. ಸುನಿಲ್ ಡಿ ಸೋಜಾ ಸ್ವಾಗತಿಸಿ ಆಶಾ ಮೊಂತೇರೊ ವಂದಿಸಿದರು. ತೆರೆಸಾ ಕಾರ್ಡೋಜಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು