12:34 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಗಳೂರು: ಸಪ್ನಾ ದಿನಕರ್ ಅವರ ‘ಮೌನದೊಳಗಿನ ಮಾತು’ ಕವನ ಸಂಕಲನ ಬಿಡುಗಡೆ

28/03/2024, 23:40

ಮಂಗಳೂರು( reporterkarnataka.com): ಅಮೃತ ಪ್ರಕಾಶನ ಪತ್ರಿಕೆ ವತಿಯಿಂದ ಸರಣಿ ಕೃತಿ ಬಿಡುಗಡೆ 39ನೇ ಕೃತಿ ಸಪ್ನಾ ದಿನಕರ್ ಅವರ ಮೌನದೊಳಗಿನ ಮಾತು ‘ ಕವನ ಸಂಕಲನವನ್ನು ಲೇಖಕಿ, ವಿಮರ್ಶಕಿ ವಿದ್ಯಾ ನಾಯಕ್ ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೆಸ್ ಕ್ಲಬ್ ಮಂಗಳೂರು ಅಧ್ಯಕ್ಷ ಪಿ.ಬಿ. ಹರೀಶ್ ರೈ ವಹಿಸಿದರು. ಮುಖ್ಯ ಅತಿಥಿಗಳಾಗಿ ಗಣ್ಯರಾದ ಯುಗ ಪುರುಷ ಪತ್ರಿಕೆ ಸಂಪಾದಕ ಕುಡೆತ್ತೂರು ಭುವನಾಭಿರಾಮ ಉಡುಪ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಹಾಗೂ ಲೇಖಕಿ ವೀಣಾ ಟಿ. ಶೆಟ್ಟಿ ಹಾಗೂ ಕವಿಯತ್ರಿ, ಶಿಕ್ಷಕಿ ,ಕವಿಯಿತ್ರಿ ಸುಧಾ ನಾಗೇಶ್ ಉಪಸ್ಥಿತರಿದ್ದರು. ಕೃತಿಯ ಲೇಖಕಿ ಸಪ್ನಾ ದಿನಕರ್, ಅಮೃತ ಪ್ರಕಾಶನ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿದರು. ಕವಯಿತ್ರಿ , ಶಿಕ್ಷಕಿ ಸುರೇಖಾ ಯಾಳವಾರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು