12:47 AM Saturday18 - July 2026
ಬ್ರೇಕಿಂಗ್ ನ್ಯೂಸ್
Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ…

ಇತ್ತೀಚಿನ ಸುದ್ದಿ

ಮಂಗಳೂರು: ಮೇ 17, 18ರಂದು ರಾಜ್ಯಮಟ್ಟದ ಗೇರು ಮೇಳ, ಕಾರ್ಯಾಗಾರ

09/05/2026, 21:17

ಮಂಗಳೂರು(reporterkarnataka.com): ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ಮೇ 17 ಮತ್ತು 18ರಂದು ನಗರದ ಕದ್ರಿ ಪಾರ್ಕ್‌ನಲ್ಲಿ ರಾಜ್ಯಮಟ್ಟದ ಗೇರು ಮೇಳ ಹಾಗೂ ಕಾರ್ಯಾಗಾರ ನಡೆಯಲಿದೆ.
ನಗರದ ಸರ್ಕಿಟ್‌ಹೌಸ್‌ನಲ್ಲಿ ಇಂದು ಮೇಳದ ಪೋಸ್ಟರ್ ಬಿಡುಗಡೆ ಮಾಡಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಈ ವಿಷಯ ತಿಳಿಸಿದರು.
ಕರಾವಳಿ ಜನರೊಂದಿಗೆ ಗೇರು ಕೃಷಿಯು ಬೆರೆತುಕೊಂಡಿದ್ದು, ಅವಿನಾಭಾವ ಸಂಬಂಧವನ್ನು ಹೊಂದಿದೆ. ನಮ್ಮ ಹಿರಿಯರು ಬೀಡಿ ಕಟ್ಟುವುದು, ಗೇರು ಕಾರ್ಖಾನೆಯಲ್ಲಿ ಕೆಲಸ, ಹೆಂಚು ಕೈಗಾರಿಕೆಯಲ್ಲಿ ಕೆಲಸ ಹಾಗೂ ಮೀನು ಕೃಷಿಯನ್ನು ಮಾಡಿ ಬದುಕು ಕಟ್ಟಿಕೊಳ್ಳುವುದರ ಜತೆಗೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದ್ದಾರೆ ಎಂದರು.
ಗೇರು ಗಿಡ ಬಡವರ ಪಾಲಿನ ಕಲ್ಪವೃಕ್ಷ’, ಹಸಿರು ಗೇರು ರೈತರ ಬದುಕು ಬಂಗಾರ’ ಎಂಬ ಘೋಷಣೆಯೊಂದಿಗೆ ಮೇಳ ನಡೆಯಲಿದ್ದು, ಗೇರು ಕೃಷಿಯ ಅಭಿವೃದ್ಧಿಯೊಂದಿಗೆ ಜಾಗೃತಿ ಮೂಡಿಸುವ ಸಲುವಾಗಿ ಹಮ್ಮಿಕೊಳ್ಳಲಾಗಿದೆ ಎಂದು ಅವರು ನುಡಿದರು.

ಗೇರು ಬೀಜಕ್ಕೆ ಅಂತಾರಾಷ್ಟ್ರೀಯ ಮಾರುಕಟ್ಟೆ ಇದ್ದು, ಇಲ್ಲಿನ ಇಳುವರಿ ಸಾಲದ ಕಾರಣ ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಆದುದರಿಂದ ಪ್ರತಿಯೊಂದು ಮನೆಯಲ್ಲಿಯೂ ಗೇರು ಗಿಡವನ್ನು ಬೆಳೆಸುವ ಮೂಲ ಅದರ ಪ್ರಾಮುಖ್ಯತೆಯನ್ನು ತಿಳಿಸಬೇಕು ಎಂದು ಹೇಳಿದರು.
ಮೇಳದಲ್ಲಿ 1,000 ಗೇರು ಗಿಡಗಳನ್ನು ಉಚಿತವಾಗಿ ವಿತರಿಸುವುದರೊಂದಿಗೆ, 10 ಜನ ಸಾಧಕ ಕೃಷಿಕರಿಗೆ ಸನ್ಮಾನ, ಬೇರೆ ಬೇರೆ ತಳಿಯ ಬಗ್ಗೆ ಪರಿಚಯ, ಗೇರು ಬೀಜ ಮಾತ್ರವಲ್ಲ ಹಣ್ಣಿನಿಂದ ಕೂಡ ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸಿ ಜೀವನವನ್ನು ರೂಪಿಸಿಕೊಳ್ಳಬಹುದು ಎಂದು ತಿಳಿಸಿದರು.
ಮೇಳದಲ್ಲಿ 5-6 ಗೋಷ್ಠಿಗಳನ್ನು ಹಮ್ಮಿಕೊಂಡಿದ್ದು, ತಜ್ಷರು ಹಾಗೂ ಸಾಧಕ ಕೃಷಿಕರಿಂದ ಗೋಷ್ಠಿಗಳು ನಡೆಯಲಿವೆ. ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ಕೂಡ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ, ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಗೇರು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಕಮಲಾ, ಮಂಗಳೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕರಿಕಲನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು