7:33 AM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

Mangaluru | ಸುಹಾಸ್ ಶೆಟ್ಟಿ ಭೀಕರ ಹತ್ಯೆ ಪ್ರಕರಣ: 8 ಮಂದಿ ಆರೋಪಿಗಳ ಬಂಧನ; ಇನ್ನಿಬ್ಬರಿಗಾಗಿ ಶೋಧ

03/05/2025, 13:37

ಮಂಗಳೂರು(reporterkarnataka.com): ಬಜಪೆ ಸಮೀಪ ನಡೆದ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಅಬ್ದುಲ್ ಸಫ್ವಾನ್, ನಿಯಾಜ್, ಮಹಮ್ಮದ್ ಮುಸಮ್ಮೀರ್, ಕಲಂದರ್ ಶಾಫಿ, ಅದಿಲ್ ಮೆಹರೂಫ್, ನಾಗರಾಜ್, ಮೊಹಮ್ಮದ್ ರಿಜ್ವಾನ್ ಹಾಗೂ ರಂಜಿತ್ ಎಂದು ಗುರುತಿಸಲಾಗಿದೆ. ಇನ್ನೂ ಇಬ್ಬರ ಬಂಧನಕ್ಕೆ ಬಲೆ ಬೀಸಲಾಗಿದೆ. ಅಬ್ದುಲ್ ಸಫ್ವಾನ್ ಪ್ರಕರಣ ಪ್ರಮುಖ ಸೂತ್ರದಾರ ಎನ್ನಲಾಗಿದೆ.
ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಸುಹಾಸ್ ಶೆಟ್ಟಿ ಅವರನ್ನು ಗುರುವಾರ ಬಜಪೆ ಬಳಿಯ ಕಿನ್ನಿಪದವು ಎಂಬಲ್ಲಿ ಅವರು ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ತಂಡವೊಂದು ತಲವಾರಿನಿಂದ ಭೀಕರವಾಗಿ ಹಲ್ಲೆಗೈದು ಕೊಲೆ ಮಾಡಿತ್ತು. ಸುಹಾಸ್ ಶೆಟ್ಟಿ ರೌಡಿ ಶೀಟರ್ ಆಗಿದ್ದು, ಫಾಝೀಲ್ ಕೊಲೆ ಪ್ರಕರಣ ಆರೋಪಿ.

ಇತ್ತೀಚಿನ ಸುದ್ದಿ

ಜಾಹೀರಾತು