2:03 PM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆ

20/08/2025, 19:50

ಮಂಗಳೂರು(reporterkarnataka.com): ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಅಧ್ಯಕ್ಷ ಸುರೇಂದ್ರ ಕಂಬಳಿ ಅವರ ಅಧ್ಯಕ್ಷತೆಯಲ್ಲಿ ಇಂದು ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ಜರುಗಿತು.
ಗೃಹಲಕ್ಷ್ಮೀ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ಪ್ರಸ್ತುತ 85044 ಫಲಾನುಭವಿಗಳು ನೋಂದಣಿಯಾಗಿದ್ದು ಈ ಈವರೆಗೆರೂ 305,04,48000 ಮಂಜೂರಾಗಿರುತ್ತದೆ ಎಂದು
ಮಂಗಳೂರು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಮಾಹಿತಿ ನೀಡಿದರು.
ಮಂಗಳೂರು- ಗುರುಪುರ- ಕೈಕಂಬ- ಬಜ್ಪೆ ಮೂಲಕ ಕಟೀಲಿಗೆ ಮತ್ತು ವಾಮಂಜೂರು ಪರಾರಿ ಮೂಲಕ ಉಳಾಯಿಬೆಟ್ಟುಗೆ ಸರಕಾರಿ ಬಸ್ಸು ಸೇವೆ ಒದಗಿಸಿಕೊಡುವುದರ ಬಗ್ಗೆ ಸದಸ್ಯರು ಚರ್ಚಿಸಿದರು.
ರಾಜ್ಯ ಸರಕಾರದ ಯುವನಿಧಿ ಯೋಜನೆಗೆ 2025ನೇ ಸಾಲಿನಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಈ ಬಗ್ಗೆ ಕರಪತ್ರವನ್ನು ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು.
ತಾಲೂಕು ಪಂಚಾಯತ್ ಸಹಾಯಕ ಲೆಕ್ಕಧಿಕಾರಿ ಪರಮೇಶ್ವರ ಸ್ವಾಗತಿಸಿದರು. ತಾಲೂಕುಮಟ್ಟದ ಅನುಷ್ಟಾನ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ ವಂದಿಸಿದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಸದಸ್ಯ ಅಲ್ ಸ್ಟನ್ ಡಿ ಕುನ್ಹ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಸದಸ್ಯರಾದ ರಾಜೇಶ್ ಶೆಟ್ಟಿ, ಪ್ರಶಾಂತ್ ಎಸ್, ನವಾಜ್, ಶೈಲಾ ನೀತಾ ಡಿ ಸೋಜಾ, ಮೊಹಮ್ಮದ್ ರಫೀಕ್, ರಿತೇಶ್ ಅಂಚನ್, ಜಯಂತಿ, ವಿದ್ಯಾ, ಡಿ.ಎಂ. ಮುಸ್ತಾಫ ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು, ತಾಪಂ ಅಧಿಕಾರಿಗಳು, ತಾಲೂಕು ಐಇಸಿ ಸಂಯೋಜಕಿ ನಿಶ್ಮಿತ.ಬಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು