11:55 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

Good News: ಮಂಗಳೂರಿನಲ್ಲಿ ಉದ್ಯೋಗಾಕಾಂಕ್ಷಿಗಳಿಗಾಗಿ ನಾಳೆ ಬೃಹತ್ ಉದ್ಯೋಗ ಮೇಳ

02/03/2022, 10:15

ಮಂಗಳೂರು(reporterkarnataka.com):

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಇವರ ಸಹಯೋಗದಲ್ಲಿ ಮಾರ್ಚ್ 3 ರ  ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೊಟ್ಟಾರ – ಕೂಳೂರು ಪ್ರಮುಖ ರಸ್ತೆಯಲ್ಲಿರುವ ಗೋಲ್ಡ್ ಪಿಂಚ್ ಸಿಟಿ ಮೈದಾನದ ಮುಂಭಾಗದ ಎಜೆ ಇಂಜಿನಿಯರಿಂಗ್ ಕಾಲೇಜ್ ನಲ್ಲಿ‌ “ಬೃಹತ್ ಉದ್ಯೋಗ ಮೇಳ” ವನ್ನು ಆಯೋಜಿಸಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಉದ್ಯೋಗ ಮೇಳದಲ್ಲಿ‌ ಹೆಸರಾಂತ ಕಂಪನಿಗಳಾದ ಟೀಮ್ ಲೀಸ್, ಸಿನೋಪ್ ಟೆಕ್, ಹೆಚ್.ಜಿ.ಎಸ್, ಬಿ.ಓ.ಎಸ್.ಸಿ.ಹೆಚ್, ಬೈಜೂಸ್, ಟಾಟಾ ಕಮ್ಯುನಿಕೇಷನ್ಸ್, ಟೊಯೊಟಾ ಕಿರ್ಲೋಸ್ಕರ್ ಮೋಟರ್, ಎನ್.ಟಿ.ಟಿ.ಎಫ್ ಸೇರಿದಂತೆ ಮುಂತಾದ 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿವೆ.

ಬಿಎ, ಬಿ.ಎಸ್ಸಿ, ಬಿಕಾಂ, ಐಟಿಐ, ಡಿಪ್ಲೋಮಾ, ಬಿಇ ಅರ್ಹತೆಯನ್ನು ಹೊಂದಿರುವ ವಿದ್ಯಾರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್ ಪೋರ್ಟ್ ಫೋಟೋ, ಆಧಾರ್ ಕಾರ್ಡ್ ಹಾಗೂ ಸ್ವವಿವರದ ಅರ್ಜಿಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಓರ್ವ ಅಭ್ಯರ್ಥಿಗೆ ಗರಿಷ್ಠವೆಂದರೆ 3 ಕಂಪನಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ತಮ್ಮ ವಿದ್ಯಾರ್ಹತೆಗೆ ಸರಿಹೊಂದುವ 3 ಕಂಪನಿಗಳನ್ನು ಆಯ್ಕೆಮಾಡಿ ಅರ್ಜಿ ಸಲ್ಲಿಸಿ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಈ ಕಾರ್ಯಕ್ರಮಕ್ಕೆ ರಾಜ್ಯ ಉನ್ನತ ಶಿಕ್ಷಣ ಸಚಿವರು ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ‌ ಶ್ರೀ ಅಶ್ವತ್ ನಾರಾಯಣ್ ಅವರು ಆಗಮಿಸಲಿದ್ದಾರೆ ಎಂದು ಹೇಳಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಕಾರ್ಯಕ್ರಮದ ಸದಾವಕಾಶ ಪಡೆದುಕೊಳ್ಳಿ. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವವರು 

 www.skillconnet.kaushalkar.com ಇಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ವೇದವ್ಯಾಸ್ ಕಾಮತ್ ಅವರ ಶಾಸಕರ ಕಚೇರಿಗೆ ಭೇಟಿ ನೀಡಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು