10:57 AM Monday4 - May 2026
ಬ್ರೇಕಿಂಗ್ ನ್ಯೂಸ್
ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ನಿಶಿತ್ ಶೆಟ್ಟಿ ನಿರ್ದೇಶನದ  ‘ವೃಷ್ಟಿ’ ಚಲನಚಿತ್ರ ಪೋಸ್ಟರ್ ಬಿಡುಗಡೆ

06/10/2022, 21:35

ಮಂಗಳೂರು(reporter Karnataka.com):

ಆಸೆಗಳ ಲೋಕದಲಿ…

ಅರಿಯದೆ ಮೂಡಿದ ಕಥೆ ಇದು….

ಭಾವನೆಗಳ ಸಾಲಿನಲಿ….

ತಿಳಿಯದೆಯೇ ಹರಿದ ವ್ಯಥೆ ಇದು….

*ವೃಷ್ಟಿ..* (ಕನ್ನಡ ಚಲನಚಿತ್ರ)

ವಾಗ್ಮಿ ಸಿನಿ ಕ್ರಿಯೇಷನ್ಸ್ ಅರ್ಪಿಸುವ ಸಾಧನಾ ಜಗದೀಶ್ ಶೆಟ್ಟಿಯವರ ನಿರ್ಮಾಣದ ಹೊಸ ಕನ್ನಡ ಚಲನಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಮಂಗಳೂರಿನ ಪ್ರಕಾಶ್ ನಾಥ ಮಂದಿರದಲ್ಲಿ ನಡೆಯಿತು. 


ಪ್ರಕಾಶ್ ನಾಥ ಮಂದಿರದ ಸುಮಂತ್  ಅವರು ಪೋಸ್ಟರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಧಾರ್ಮಿಕ ಮುಖಂಡ ನಾಗರಾಜ್ ಆಚಾರ್ಯ ಉಪಸ್ಥಿತಿ ಇದ್ದರು. 

ಈ ಮೊದಲು ಕನಸು ಮಾರಾಟಕ್ಕಿದೆ ಚಲನಚಿತ್ರ ಹಾಗೂ ವನಜಾ ವೆಬ್ ಸೀರಿಸ್, ಮಾಡಿದ ತಂಡವೇ ಈ ವೃಷ್ಟಿ ಚಲನಚಿತ್ರವನ್ನು ಚಿತ್ರೀಕರಿಸಿದ್ದು ನಿಶಿತ್ ಶೆಟ್ಟಿಯವರು ನಿರ್ದೇಶನ ಮಾಡಿದ್ದಾರೆ, ಸಂತೋಷ್ ಆಚಾರ್ಯ ಗುಂಪಲಾಜೆ ಕ್ಯಾಮರ ಕೈಚಳಕ ಈ ಚಿತ್ರದಲ್ಲಿದೆ. ಗಣೇಶ್ ನೀರ್ಚಾಲ್ ಸಂಕಲನ ಮಾಡಿದ್ದು,ಸಂಗೀತ ನಿರ್ದೇಶನವನ್ನು ಮಾನಸ ಹೊಳ್ಳರವರು ನಿರ್ವಹಿಸಿದ್ದಾರೆ.ಮುಖ್ಯ ಭೂಮಿಕೆಯಲ್ಲಿ ಯಶವಂತ್ ಬೆಳ್ತಂಗಡಿ, ಸಿಂಚನಾ ಪಿ‌.ರಾವ್,ವಿನಿಶಾ,ಕಾಮಿಡಿ ಕಿಲಾಡಿ ಖ್ಯಾತಿಯ ಪ್ರವೀಣ್ ಜೈನ್, ಯುವ ಶೆಟ್ಟಿ,ರಾಕೇಶ್ ಪೂಜಾರಿ,ಅನೀಶ್ ಪೂಜಾರಿ ಮುಂತಾದವರು ಅಭಿನಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು