11:31 PM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಪೊಲೀಸ್ ಸಿಬಂದಿಗಳಿಗೆ 40 ಬೆಡ್ ಗಳ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭ

14/05/2021, 19:06

ಮಂಗಳೂರು(reporterkarnataka news):

ಜನರ ರಕ್ಷಣೆಗಾಗಿ ಹಗಲು ರಾತ್ರಿ ತಮ್ಮ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಆರೋಗ್ಯ ರಕ್ಷಣೆಗೆ ಕಮಿಷನರ್ ಎನ್. ಶಶಿಕುಮಾರ್ ಮುಂದಾಗಿದ್ದಾರೆ.

ಜನಸಾಮಾನ್ಯರನ್ನು ಮನೆಯಲ್ಲಿ ಉಳಿಸಿ, ದಿನದ 24 ಗಂಟೆಯೂ ಮನೆ ಮಠ ತೊರೆದು ರಸ್ತೆ ಬದಿ,ಬಸ್ ಸ್ಟಾಂಡ್ ಗಳಲ್ಲಿ ಟೆಂಟ್ ಹಾಕಿ, ಬಿಸಿಲು ಮಳೆಗಳಿಗೆ ಕಷ್ಟ ಪಟ್ಟು ಕಾರ್ಯಾ ನಿರ್ವಹಿಸುವ ಪೋಲಿಸರು ಸೋಂಕಿಗೆ ಒಳಗಾಗುತ್ತಿದ್ದು, ಅವರ ಆರೋಗ್ಯ ಕಾಪಾಡಲು ಪೋಲಿಸ್  ಕಮಿಷನರ್ ಪೊಲೀಸ್ ಸಿಬಂದಿಗಾಗಿಯೇ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭಿಸಿದ್ದಾರೆ.  


ನಗರದ ಅಲೋಶಿಯಸ್ ಕಾಲೇಜು ಆವರಣದಲ್ಲಿರುವ ಹಾಸ್ಟೆಲ್ ಕಟ್ಟಡದಲ್ಲಿ 40 ಬೆಡ್ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್‌ ರೆಡಿ ಮಾಡಲಾಗಿದ್ದು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಉದ್ಘಾಟನೆ ನೆರವೇರಿಸಿದರು.

ಪೊಲೀಸ್ ಕಮಿಷನರ್ ಶಶಿಕುಮಾರ್‌ ಮಾತನಾಡಿ, ಈಗಾಗಲೆ ಮಂಗಳೂರಿನಲ್ಲಿ 62 ಮಂದಿಗೆ ಕೋವಿಡ್ ಸೋಂಕು ತಗಲಿದೆ. ಈಗ 16 ಮಂದಿ ಗುಣಮುಖರಾಗಿದ್ದು, 42 ಮಂದಿ ಹೋಮ್ ಐಸೋಲೇಶನಲ್ಲಿದ್ದಾರೆ.  ಮನೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದವರು, ಏನಾದ್ರೂ ಆರೋಗ್ಯ ತೊಂದರೆ ಇದ್ದವರು ಇಲ್ಲಿ ಬಂದು ಸೇರಿಕೊಳ್ಳಬಹುದು. ಇಲ್ಲಿ 24 ಗಂಟೆ ಕಾಲ ವೈದ್ಯರು ಮತ್ತು ನರ್ಸ್ ಗಳು ಇರಲಿದ್ದು, ರೋಗಿಗಳ ಆರೈಕೆ ಮಾಡಲಿದ್ದಾರೆ.

ಅಲೋಶಿಯಸ್ ಕಾಲೇಜಿನ ಹಾಸ್ಟೆಲ್ ವತಿಯಿಂದ ಊಟ, ತಿಂಡಿ, ಚಹಾವನ್ನು  ರೆಡಿ ಮಾಡಿ ಕೊಡುತ್ತಿದ್ದಾರೆ. ನೀರು, ಬೆಡ್ ವ್ಯವಸ್ಥೆ ಎಲ್ಲ   ವ್ಯವಸ್ಥೆ  ಇದೆ.  ಮಧುಮೇಹ, ಬಿಪಿ ಇನ್ನಿತರ ಸಣ್ಣಪುಟ್ಟ ಕಾಯಿಲೆಗಳಿಂದ ಬಳಲುತ್ತಿರುವ ಪೊಲೀಸ್ ಇಲಾಖೆಯಲ್ಲಿರುವ ಸೋಂಕಿತರು ಮತ್ತು ಅವರ ಸಂಬಂಧಿಕರಿಗಾಗಿ ಈ ಕೋವಿಡ್ ಕೇರ್ ಆರಂಭಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು