11:21 AM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಪೊಲೀಸ್ ಸಿಬಂದಿಗಳಿಗೆ 40 ಬೆಡ್ ಗಳ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭ

14/05/2021, 19:06

ಮಂಗಳೂರು(reporterkarnataka news):

ಜನರ ರಕ್ಷಣೆಗಾಗಿ ಹಗಲು ರಾತ್ರಿ ತಮ್ಮ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಆರೋಗ್ಯ ರಕ್ಷಣೆಗೆ ಕಮಿಷನರ್ ಎನ್. ಶಶಿಕುಮಾರ್ ಮುಂದಾಗಿದ್ದಾರೆ.

ಜನಸಾಮಾನ್ಯರನ್ನು ಮನೆಯಲ್ಲಿ ಉಳಿಸಿ, ದಿನದ 24 ಗಂಟೆಯೂ ಮನೆ ಮಠ ತೊರೆದು ರಸ್ತೆ ಬದಿ,ಬಸ್ ಸ್ಟಾಂಡ್ ಗಳಲ್ಲಿ ಟೆಂಟ್ ಹಾಕಿ, ಬಿಸಿಲು ಮಳೆಗಳಿಗೆ ಕಷ್ಟ ಪಟ್ಟು ಕಾರ್ಯಾ ನಿರ್ವಹಿಸುವ ಪೋಲಿಸರು ಸೋಂಕಿಗೆ ಒಳಗಾಗುತ್ತಿದ್ದು, ಅವರ ಆರೋಗ್ಯ ಕಾಪಾಡಲು ಪೋಲಿಸ್  ಕಮಿಷನರ್ ಪೊಲೀಸ್ ಸಿಬಂದಿಗಾಗಿಯೇ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭಿಸಿದ್ದಾರೆ.  


ನಗರದ ಅಲೋಶಿಯಸ್ ಕಾಲೇಜು ಆವರಣದಲ್ಲಿರುವ ಹಾಸ್ಟೆಲ್ ಕಟ್ಟಡದಲ್ಲಿ 40 ಬೆಡ್ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್‌ ರೆಡಿ ಮಾಡಲಾಗಿದ್ದು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಉದ್ಘಾಟನೆ ನೆರವೇರಿಸಿದರು.

ಪೊಲೀಸ್ ಕಮಿಷನರ್ ಶಶಿಕುಮಾರ್‌ ಮಾತನಾಡಿ, ಈಗಾಗಲೆ ಮಂಗಳೂರಿನಲ್ಲಿ 62 ಮಂದಿಗೆ ಕೋವಿಡ್ ಸೋಂಕು ತಗಲಿದೆ. ಈಗ 16 ಮಂದಿ ಗುಣಮುಖರಾಗಿದ್ದು, 42 ಮಂದಿ ಹೋಮ್ ಐಸೋಲೇಶನಲ್ಲಿದ್ದಾರೆ.  ಮನೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದವರು, ಏನಾದ್ರೂ ಆರೋಗ್ಯ ತೊಂದರೆ ಇದ್ದವರು ಇಲ್ಲಿ ಬಂದು ಸೇರಿಕೊಳ್ಳಬಹುದು. ಇಲ್ಲಿ 24 ಗಂಟೆ ಕಾಲ ವೈದ್ಯರು ಮತ್ತು ನರ್ಸ್ ಗಳು ಇರಲಿದ್ದು, ರೋಗಿಗಳ ಆರೈಕೆ ಮಾಡಲಿದ್ದಾರೆ.

ಅಲೋಶಿಯಸ್ ಕಾಲೇಜಿನ ಹಾಸ್ಟೆಲ್ ವತಿಯಿಂದ ಊಟ, ತಿಂಡಿ, ಚಹಾವನ್ನು  ರೆಡಿ ಮಾಡಿ ಕೊಡುತ್ತಿದ್ದಾರೆ. ನೀರು, ಬೆಡ್ ವ್ಯವಸ್ಥೆ ಎಲ್ಲ   ವ್ಯವಸ್ಥೆ  ಇದೆ.  ಮಧುಮೇಹ, ಬಿಪಿ ಇನ್ನಿತರ ಸಣ್ಣಪುಟ್ಟ ಕಾಯಿಲೆಗಳಿಂದ ಬಳಲುತ್ತಿರುವ ಪೊಲೀಸ್ ಇಲಾಖೆಯಲ್ಲಿರುವ ಸೋಂಕಿತರು ಮತ್ತು ಅವರ ಸಂಬಂಧಿಕರಿಗಾಗಿ ಈ ಕೋವಿಡ್ ಕೇರ್ ಆರಂಭಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು