4:24 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಪೊಲೀಸ್ ಸಿಬಂದಿಗಳಿಗೆ 40 ಬೆಡ್ ಗಳ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭ

14/05/2021, 19:06

ಮಂಗಳೂರು(reporterkarnataka news):

ಜನರ ರಕ್ಷಣೆಗಾಗಿ ಹಗಲು ರಾತ್ರಿ ತಮ್ಮ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಆರೋಗ್ಯ ರಕ್ಷಣೆಗೆ ಕಮಿಷನರ್ ಎನ್. ಶಶಿಕುಮಾರ್ ಮುಂದಾಗಿದ್ದಾರೆ.

ಜನಸಾಮಾನ್ಯರನ್ನು ಮನೆಯಲ್ಲಿ ಉಳಿಸಿ, ದಿನದ 24 ಗಂಟೆಯೂ ಮನೆ ಮಠ ತೊರೆದು ರಸ್ತೆ ಬದಿ,ಬಸ್ ಸ್ಟಾಂಡ್ ಗಳಲ್ಲಿ ಟೆಂಟ್ ಹಾಕಿ, ಬಿಸಿಲು ಮಳೆಗಳಿಗೆ ಕಷ್ಟ ಪಟ್ಟು ಕಾರ್ಯಾ ನಿರ್ವಹಿಸುವ ಪೋಲಿಸರು ಸೋಂಕಿಗೆ ಒಳಗಾಗುತ್ತಿದ್ದು, ಅವರ ಆರೋಗ್ಯ ಕಾಪಾಡಲು ಪೋಲಿಸ್  ಕಮಿಷನರ್ ಪೊಲೀಸ್ ಸಿಬಂದಿಗಾಗಿಯೇ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭಿಸಿದ್ದಾರೆ.  


ನಗರದ ಅಲೋಶಿಯಸ್ ಕಾಲೇಜು ಆವರಣದಲ್ಲಿರುವ ಹಾಸ್ಟೆಲ್ ಕಟ್ಟಡದಲ್ಲಿ 40 ಬೆಡ್ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್‌ ರೆಡಿ ಮಾಡಲಾಗಿದ್ದು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಉದ್ಘಾಟನೆ ನೆರವೇರಿಸಿದರು.

ಪೊಲೀಸ್ ಕಮಿಷನರ್ ಶಶಿಕುಮಾರ್‌ ಮಾತನಾಡಿ, ಈಗಾಗಲೆ ಮಂಗಳೂರಿನಲ್ಲಿ 62 ಮಂದಿಗೆ ಕೋವಿಡ್ ಸೋಂಕು ತಗಲಿದೆ. ಈಗ 16 ಮಂದಿ ಗುಣಮುಖರಾಗಿದ್ದು, 42 ಮಂದಿ ಹೋಮ್ ಐಸೋಲೇಶನಲ್ಲಿದ್ದಾರೆ.  ಮನೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದವರು, ಏನಾದ್ರೂ ಆರೋಗ್ಯ ತೊಂದರೆ ಇದ್ದವರು ಇಲ್ಲಿ ಬಂದು ಸೇರಿಕೊಳ್ಳಬಹುದು. ಇಲ್ಲಿ 24 ಗಂಟೆ ಕಾಲ ವೈದ್ಯರು ಮತ್ತು ನರ್ಸ್ ಗಳು ಇರಲಿದ್ದು, ರೋಗಿಗಳ ಆರೈಕೆ ಮಾಡಲಿದ್ದಾರೆ.

ಅಲೋಶಿಯಸ್ ಕಾಲೇಜಿನ ಹಾಸ್ಟೆಲ್ ವತಿಯಿಂದ ಊಟ, ತಿಂಡಿ, ಚಹಾವನ್ನು  ರೆಡಿ ಮಾಡಿ ಕೊಡುತ್ತಿದ್ದಾರೆ. ನೀರು, ಬೆಡ್ ವ್ಯವಸ್ಥೆ ಎಲ್ಲ   ವ್ಯವಸ್ಥೆ  ಇದೆ.  ಮಧುಮೇಹ, ಬಿಪಿ ಇನ್ನಿತರ ಸಣ್ಣಪುಟ್ಟ ಕಾಯಿಲೆಗಳಿಂದ ಬಳಲುತ್ತಿರುವ ಪೊಲೀಸ್ ಇಲಾಖೆಯಲ್ಲಿರುವ ಸೋಂಕಿತರು ಮತ್ತು ಅವರ ಸಂಬಂಧಿಕರಿಗಾಗಿ ಈ ಕೋವಿಡ್ ಕೇರ್ ಆರಂಭಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು