3:33 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಕೃಷಿಕರ ದಿನಾಚರಣೆ: ಪ್ರಗತಿಪರ ರೈತರಿಗೆ ಸನ್ಮಾನ

23/12/2023, 20:17

ಮಂಗಳೂರು (reporterkarnataka.com):ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಭಾರತೀಯ ಕೃಷಿ ಅನುಸಂಧಾನ ಪರಿಷತ್- ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ, ಮಂಗಳೂರು ಇವರ ವತಿಯಿಂದ ರಾಷ್ಟ್ರೀಯ ಕೃಷಿಕರ ದಿನಾಚರಣೆಯನ್ನು ನಗರದಲ್ಲಿ ಆಚರಿಸಲಾಯಿತು.
ಅಧ್ಯಕ್ಷತೆಯನ್ನು ಡಾ. ಶಿವಕುಮಾರ್ ಆರ್., (ಸಹಾಯಕ ಪ್ರಾದ್ಯಪಕರು, ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು) ವಹಿಸಿದ್ದು ತಮ್ಮ ಭಾಷಣದಲ್ಲಿ ಕೃಷಿಕರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ನಾವು ರೈತರ ದಿನಾಚರಣೆಯನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೇ ಪ್ರತಿ ದಿನವನ್ನು ರೈತರ ದಿನವನ್ನಾಗಿ ಆಚರಿಸಬೇಕು ಎಂದು ತಿಳಿಸಿದರು.


ದಕ್ಷಿಣ ಕನ್ನಡ ಜಿಲ್ಲೆಯ ಮೂರು ಜನ ಪ್ರಗತಿಪರ ರೈತರಿಗೆ ಸನ್ಮಾನವನ್ನು ಹಮ್ಮಿಕೊಳ್ಳಲಾಯಿತು. ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ಉಳ್ಳಾಲ ತಾಲ್ಲೂಕಿನ ಹರೇಕಳ ಗ್ರಾಮದ ಮೈಮೂನ, ಸಿಹಿನೀರಿನಲ್ಲಿ ಮುತ್ತಿನ ಕೃಷಿ ಕೈಗೊಂಡಿರುವ ಸುಳ್ಯ ತಾಲ್ಲೂಕು ಐವರ್ ನಾಡು ಗ್ರಾಮದ ಸಿ. ಕೆ. ನವೀನ್ ಚಂದ್ರ ಹಾಗೂ ಸಮಗ್ರ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಬಂಟ್ವಾಳ ತಾಲ್ಲೂಕಿನ ಮೊಡಂಕಾಪು ಗ್ರಾಮದ
ವಿಲ್ಮಾ ಪ್ರಿಯಾ ಆಲ್ಬಕರ್ಕ್ ಅವರನ್ನು ಸನ್ಮಾನಿಸಲಾಯಿತು.
ಈ ಕಾರ್ಯಕ್ರವನ್ನು ಡಾ. ಶಿವಕುಮಾರ್ ಆರ್, ಸಂಯೋಜಿಸಿದ್ದು ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಹಾಗೂ ಸಿಬ್ಬಂದಿಯವರು ಮತ್ತು 35 ಜನ ರೈತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು